Home / ಕವನ / ಕವಿತೆ / ಅದೇ ಕವಿತೆ

ಅದೇ ಕವಿತೆ

ಅದೇ ಕವಿತೆ
ಹರಿತ ಕತ್ತಿಯಂತೆ
ಸ್ವಾತಿ ಮುತ್ತಿನಂತೆ
ಚಿತ್ತಿ ಮಳೆಯಂತೆ
ಕರಾವಳಿ ಲಗ್ನದಂತೆ
ಬದಲಾಗದ ವ್ಯವಸ್ಥೆಯಂತೆ.
*

ಅದೇ ಕವಿತೆ,
ಅದೇ ಕಪ್ಪಿಟ್ಟ ಮುಖ
ಬಡಿದಾಡೋ ಕೈ ಕಾಲು,
ಉರಿಯುತ್ತಿರುವ ಕಣ್ಣುಗಳು
ಮುಳುಗಡೆಯಾಗಿರುವ ಊರು ಕೇರಿಗಳು
ಈ ಪ್ರಗತಿ ವಾಕರಿಕೆ ಭರಿಸಿದೆ.
*

ಅದೇ… ಜನ.. ದನ..
ಮನ.. ದವನ!
ದಾವನೆಲ!
ಕೋಮುಗಲಭೆ ಓಣಿ ಓಣಿಗೆ-
ಬರೀ ಕಾಗದದ ಗದ್ದೆ
ಮಾತೂ ಮಾರೂದ್ದ
ಉದ್ಧಾರ ತೂತು ಬಿದ್ದ ಗಡಿಗೆ!
*

ಅದೇ ಬಿಟ್ರಿಷರ ಕಾರುಬಾರು
ಹೊಸ ಸೀಸೆಯಲ್ಲಿ, ಹಳೇ ಮದ್ಯದಂತೆ
ಹಳೆ ಗಾಯಕ್ಕೆ ಹೊಸ ಬರೆ
ಹೆಸರು ಬೇರೆ ಬೇರೆ!
ಅದೇ ಕಳೆ ಕಿತ್ತಷ್ಟು, ಸಿಬಿರಿನಷ್ಟು…
ಹಗಲು ಗಂಡರ ವೇದಾಂತ
ರಾತ್ರಿ ಮಿಂಡರ ರಾದ್ಧಾಂತ
ಮಳೆ ಬೆಳೆ ಪುಢಾರಿಯಂತೆ.
*

ಅದೇ ಹಗಲು ರಾತ್ರಿ,
ಬೆದೆ ಬಿದ್ದ ಗೌಡ
ಜೀತಕ್ಕಿರುವ ಹೈದ
ಸೂತಕದಿ ಬಿಚ್ಚದ ಕದಗಳು
ಕೊತ ಕೊತ ಕುದಿವ ಕೊಳೆಗೇರಿಗಳು
ವರಸೆ ಬದಲಿಸಿದ ಮಿಂಡರೀಗ
ಜಾಗತೀಕರಣ, ಖಾಸಗೀಕರಣ
ಉದಾರೀಕರಣದ ತಲೆ ಹಿಡುಕರು!
ಏಡ್ಸ್ ಮಾರಿಗೆ ಶಾಮೀಯಾನವಾದವರು!
ಪ್ರತಿಭೆ, ಮೆರಿಟ್‌ಗೆ, ಏಣಿ ಹಾಕಿ-
ಮೀಸಲಾತಿಗೆ ‘ಕೋ’ ಕೊಟ್ಟ ಬ್ರಹ್ಮಾಚಾರಿಗಳು!
*

ಇನ್ನೂ ಬರಲಿಲ್ಲ ಕಪ್ಪು ಸೂರ್‍ಯ…
ಅರಳಲಿಲ್ಲ ಕಪ್ಪು ಗುಲಾಬೀ…
ಅದೇ ಕವಿತೆ, ಹಣತೆಯಂತೇ…
ಬದಲಾಗದ ಜನತೆಯಂತೇ…
ಮೇವು ತಿಂದು ‘ನಮಲುಗರಿವಾ’… ದನಗಳಂತೇ…
ಅಂದು: ಈಸ್ಟ್ ಇಂಡಿಯಾ ಕಂಪನಿ!
ಇಂದು: ಖಾಸಗಿ ಕಂಪನಿಗಳು!
ಈ ದೇಶದ ಕೀಲಿಕೈ… ಹೊರಗಿನವರೇ…
ಕಾದು ನೋಡಿ…
ಆಳಿಸಿಕೊಳ್ಳಲು ಲಾಯಕ್ಕು!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...