Home / ಕವನ / ಕವಿತೆ / ಕವಿತೆಯೆಂದರೆ…

ಕವಿತೆಯೆಂದರೆ…

ಕವಿತೆಯೆಂದರೆ…
ಪದ, ಹದ, ಮುದ, ಮಾತು
ಮಾತಿಗೂ ಮಿಗಿಲು ಮುಗಿಲು.
ನಿಗೂಢ ಬಯಲು
ಬಟ್ಟ ಬಯಲು
ಹೊಳೆ ಹೊಳೆವ
ಶಿವನ ಅಲುಗು.

ಕವಿತೆಯೆಂದರೆ…
ಕಂಬಳದ ಕಸರತ್ತು
ಅಮ್ಮನ ಕೈ ತುತ್ತು
ಮಗುವಿನ ಮುತ್ತು
ಮತ್ತು, ಗಮ್ಮತ್ತು
ಶಬ್ದಗಳ ಕರಾಮತ್ತು
ಉಸ್ತಾದನ ಹಣೆ ಮೇಲಿನ ಬೆವರು!

ಕವಿತೆಯೆಂದರೆ…
ಕವಿಗೆ ಗೊತ್ತು
ಗುಡ್‌ಡೇ ಬಿಸ್ಕತ್ತು!
ಉಟ್ಟು ಬೈಕ್!
ನಾಕ, ನರಕ, ವಿಸ್ಮಯ…
ಶಬ್ದಗಳ ಸರಕು!
ಅಲ್ಪಸ್ವಲ್ಪ
ಕಪೋಲ ಕಲ್ಪಿತ
ಕನಿಕರಕ್ಕೆ ಉದುರಿದ ಫನ್ನೀರು.
ಇಬ್ಬನಿ ಸಾಲೆ
ಬೆವರಿನ ಮಾಲೆ.

ಕವಿತೆಯೆಂದರೆ…
ಹೆಣ್ಣು.
ಜಗದ ಕಣ್ಣು.
ಮಾಗಿದ, ಮಾವಿನ ಹಣ್ಣು.
ಜಗಮಗಿಸುವ ಬೆಂಕಿಚೆಂಡು!
ಹದಿಹರೆಯದ ಗಂಡು.
ಸಿಡಿ ಗುಂಡು.
ಚಂದ್ರ, ಸೂರ್‍ಯ, ಮಳೆ, ಗಾಳಿ, ಆಲಿಕಲ್ಲು,
ಗುಡುಗು, ಸಿಡಿಲು, ಮುಂಗಾರಿನ ಮಿಂಚು!
ಇಂದ್ರಚಾಪ!
ಹೇಳದ, ತಾಳದ ಬೇಗುದಿ!
ಜೀವ ಜಗತ್ತಿನ ಪರಿತಾಪ!

ಕವಿತೆಯೆಂದರೆ…
ಕಂದಮ್ಮನ ಮುಗ್ಧನೋಟ.
ಕೆಂದಾವರೆ ತೋಟ.
ಕನ್ನಡಿಯ ಮೈಮಾಟ.
ವಸಂತ ಕೋಗಿಲೆ ಗಾನಽಽ…
ಈ ನೆಲದ ತಾನಽಽ…
ನಮ್ಮೂರು ಕೇರಿಯ ಸವಿಗಾನ!
ಶ್ರಮದಾನ!
ಸವಿಯ ಸಾಲು!

ಕವಿತೆಯೆಂದರೆ:
ಕವಿಯ ಜಾಣ್ಮೆ, ರಕ್ತ ಮಾಂಸ!
ಅಭಿವ್ಯಕ್ತಿ, ಭಾವನೆ, ಉಸಿರು!
ವಿದ್ವುತ್, ಪ್ರತಿಭೆ, ಉತ್ಪತ್ತಿ, ರಸ!

ಕವಿತೆಯೆಂದರೆ:
ಶಿವನ ಅಲಗು, ಶಂಕು, ಚಕ್ರ, ಮೃದಂಗ!
ಜನರ:
ಪ್ರತಿಬಿಂಬ, ಗತಿಬಿಂಬ, ಅವಿಷ್ಕಾರ,
ಪ್ರೀತಿ ಪ್ರೇಮದ ಅಳವಂಡ, ರಸಾಸ್ವಾದನೆ,
ರಸಗವಳ, ಶಬ್ಧ ಚಮತ್ಕಾರ, ಭಾವತ್ರೀವ್ರತೆ
ಅನುಭವಾಮೃತ, ಸಾರ ಸರ್ವಸ್ವ
ರವಿಕಾಣದ್ದು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...