ಮೂಕನಾಗಿರಬೇಕೋ ಜಗದೊಳು

ಮೂಕನಾಗಿರಬೇಕೋ ಜಗದೊಳು
ಜೋಕ್ಯಾಗಿರಬೇಕೋ ||ಪ||
ಕಾಕು ಕುಹಕರ ಸಂಗ ನೂಕಿರಬೇಕೋ
ಲೋಕೇಶನೊಳಗೇಕಾಗಿರಬೇಕೋ ||ಅ.ಪ||

ಕಚ್ಚುವ ನಾಯಿಯಂತೆ ಬೊಗಳ್ವರೋ
ಹುಚ್ಚರಂದದೊಳಿಹರೊ ಎಚ್ಚರಿಲ್ಲದವರೋ
ಲುಚ್ಚೇರು ನಾಚಿಕಿ ತೊರದಿಹರೋ
ಮುಚ್ಚಿದಾ ಸುದ್ದಿಯ ಬಚ್ಚಿಡದಂಥಾ
ಕುತ್ಸಿತ ಮನುಜರನಗಲಿರಬೇಕೋ ||೧||

ಲೋಕನುಡಿಯ ಮಾತಾಡುವರೋ
ಕುಹಕ ಬುದ್ಧಿಯ ಜನರೋ
ತಾಕುತಗಲು ನುಡಿಯನಾಡ್ವರೋ
ತೂಕನರಿಯದವರೋ
ಸೂಕರ ಮನುಜರ ಸಂಗತಿ ಹಿಂಗಿಸಿ
ಶ್ರೀಕರ ಬ್ರಹ್ಮ ತಾನಾಗಿರಬೇಕೋ ||೨||

ನಡಿನುಡಿಗೆ ನುಡಿಯಬೇಕೋ ಗುರುವಿನಾ
ಅಡಿಯ ಪಿಡಿಯಬೇಕೋ
ಕಡುಮದದೊಳಿರಬೇಕೋ
ದುರ್ಜನರಾ ನಡತಿಯ ಬಿಡಬೇಕೋ
ಪೊಡವಿಪ ಶಿಷುನಾಳ ಒಡಿಯನ ಕಂಡು
ಗುಡಿಪುರ ಕಲ್ಮನ ಕೂಡಿರಬೇಕು ||೩||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಿನಮಾನ ಬಲು ಕೆಟ್ಟವೋ
Next post ನಗೆ ಡಂಗುರ – ೩

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

cheap jordans|wholesale air max|wholesale jordans|wholesale jewelry|wholesale jerseys