ಸಾಕು ಮಾಡೋಣ

ಪುರಾಣ ಪುಣ್ಯಕಥೆಗಳ ಮಿಥ್ಯಾಲಾಪಗಳು ಇನ್ನು ಸಾಕು
ಮುಗಿಲ ಮಲ್ಲಿಗೆಗಳ ಮೂಸುವ ಭ್ರಮೆ ಇನ್ನು ಸಾಕು,
ಕಾಣದುದರ ಕೈಕಾಲುಗಳಿಗೆ ಜೋತಾಡಿ
ಕರ್ರಗೆ ಕಲೆಕಲೆ ಮಾಡಿದ್ದ ಕಂತೆಗಳು ಇನ್ನು ಸಾಕು

ಇದೋ ನೋಡಿ ನಿಮ್ಮ ಮುಂದಿರುವುದು
ಪುಣ್ಯ ಗಣ್ಯ ಭೂಮಿ ಭಾರತವಲ್ಲ
ಹಂದೆಗಳ ಹಡೆಯುವ ದಾರಿದ್ರ್ಯ ದಳ್ಳುರಿಯ
ಆತ್ಮಘಾತಕತನದ ಗಟಾರಮತಿಗಳ ಒಣನೆಲವಾಗಿದೆ.
ನಾವೀಗ ನಿಜವನರಿಯದ ಕೂಪಮಂಡೂಕಗಳು
ಹಲವು ಹಲ್ಕಟ್ತನಗಳ ಮುಚ್ಚಿ ಆದರ್ಶ ಹಾಡುವವರು,
ಸಂಪನ್ನ ರಾಮರೊಳಗೆ ಹುದುಗಿರುವ ರಾವಣರು,
ಪತಿವ್ರತಾ ಮೇಕಪ್ಪಿನೊಳಗೆ ಮಿಡುಕುವ ಪತಿತೆಯರು,

ಜಗವನ್ನೇ ಬೆಳಗುವ ರವಿಕಿರಣಗಳು
ಈ ಒಣಕಾಡಿನೆಲೆಗಳಿಗೂ ಸೋಕವು
ನೆಲವ ಬೆಳಗುವುದನ್ನಂತು ಕೇಳಬೇಡ
ಇಲ್ಲಿಯ ಕಾಗೆ ಗೂಗೆಗಳಿಗೆ ಹೊಸಪಾಠ ಕಲಿಸಿದರೆ
ಅವು ಕೂಗುವುದು ಮತ್ತದೇ ಕಾಕಾ ಗೂಗೂ
ಇಲ್ಲಿಯ ನಾಯಿಗಳಿಗೆ ಹೊಸ ಶಾಸ್ತ್ರ ಕಲಿಸಿದರೆ
ಅವು ಊಳಿಡುವುದು ಮತ್ತದೇ ಬೌಬೌ
ನವ ವೇಷ ಭೂಷಣಗಳೊಳಗೆ
ಅದೇ ಪಾಚಿಗಟ್ಟಿದ ಭೂತಬುದ್ಧಿ,

ಯಾವ ಹೊಸಗಾಳಿಗೂ ಮೈತೆರೆಯದ ಹಳಸಲು ಬಾವಿ ಇದು
ಯಾವ ಹೊಸ ಪ್ರಭಾವಗಳಿಗೂ ಪಕ್ಕಾಗದ ಮೋಟು ಮರವಿದು
ಯಾವ ಹೊಸ ಬೀಜವೂ ನಾಟದ ಕಗ್ಗಲ್ಲಿದು
ಇಲ್ಲಿಯವರೆಗೆ ವಿಧಿ ನಿಷೇಧಗಳ
ಋಣಮಾರ್ಗದಲ್ಲಿ ನಡೆದದ್ದಾಯಿತು
ಹುಲಿ ಹಲ್ಲು ಕಿತ್ತು ಆಕಳ ಮಾಡುವ ಯತ್ನ ನಡೆಯಿತು
ಆಡುವ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು
ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು
ಸುರುವಿ
ಕಡಿವ ಕತ್ತಿಯನು ಬಂಡೆಗೆ ಹೊಡೆದು ಮೊಂಡಾಗಿಸಿ
ಜೀವಚ್ಛವವಾದೆವು
ಭಕ್ತಿಯ ಬೋಳೆತನ, ಅಹಿಂಸೆಯ ಹೇಡಿತನ, ಸ್ವರ್ಗದ
ದುರ್ಮಾರ್ಗತನ,
ಬ್ರಹ್ಮಚರ್ಯದ ಭಾನಗಡಿತನ, ಯೋಗದ ಗಂಡುಜೋಗತಿತನ,
ಇವನ್ನೆಲ್ಲ ಇನ್ನಾದರೂ ಸಾಕು ಮಾಡೋಣ
ಚೆನ್ನಾಗಿ ಉಳುವ-ಬೆಳೆವ, ಚೆನ್ನಾಗಿ ಉಣ್ಣುವ-ಉಡುವ,
ಮೈತುಂಬ ಕೆಲಸ ತುಂಬಿ ಕಾಯ ಕಲ್ಲಾಗಿಸುವಾ,
ಮನ ತುಂಬ ಸೊಗವುಂಡು ಭಾವಪೂರ ಹರಿಸುವಾ,

ನಮ್ಮ ಬೆನ್ನಿಗಂಟಿದ ಹೊಟ್ಟೆ ತುಂಬಿಸಿ ತೇಗುವ,
ಕಣ್ತುಂಬ ನಿದ್ರಿಸಿ ಪುನರ್ಜನ್ಮವನಣಕಿಸುವ
ಇಹ ಸಾರ್ಥಕತೆಯ ಧನಮಾರ್ಗ ಹಿಡಿಯೋಣ
ಎಲ್ಲಿ ಬೇಡದು ಕೂಡದು ಬಾರದುಗಳು ಬಂಧಿಸವೋ
ಎಲ್ಲಿ ಬೇಕು ಮಾಡು ಕೂಡುನಲಿಯುವಿಕೆಗಳು
ತಂತಾವೇ ಆಳುವುವೋ
ಹಾಗೆಯೇ ಬಾಳೋಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೆಣ್ಣು
Next post ಚಂದ್ರನಿಗೊಂದು ಬುದ್ಧಿವಾದ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys