Home / ಕವನ / ಕವಿತೆ / ಸಾಕು ಮಾಡೋಣ

ಸಾಕು ಮಾಡೋಣ

ಪುರಾಣ ಪುಣ್ಯಕಥೆಗಳ ಮಿಥ್ಯಾಲಾಪಗಳು ಇನ್ನು ಸಾಕು
ಮುಗಿಲ ಮಲ್ಲಿಗೆಗಳ ಮೂಸುವ ಭ್ರಮೆ ಇನ್ನು ಸಾಕು,
ಕಾಣದುದರ ಕೈಕಾಲುಗಳಿಗೆ ಜೋತಾಡಿ
ಕರ್ರಗೆ ಕಲೆಕಲೆ ಮಾಡಿದ್ದ ಕಂತೆಗಳು ಇನ್ನು ಸಾಕು

ಇದೋ ನೋಡಿ ನಿಮ್ಮ ಮುಂದಿರುವುದು
ಪುಣ್ಯ ಗಣ್ಯ ಭೂಮಿ ಭಾರತವಲ್ಲ
ಹಂದೆಗಳ ಹಡೆಯುವ ದಾರಿದ್ರ್ಯ ದಳ್ಳುರಿಯ
ಆತ್ಮಘಾತಕತನದ ಗಟಾರಮತಿಗಳ ಒಣನೆಲವಾಗಿದೆ.
ನಾವೀಗ ನಿಜವನರಿಯದ ಕೂಪಮಂಡೂಕಗಳು
ಹಲವು ಹಲ್ಕಟ್ತನಗಳ ಮುಚ್ಚಿ ಆದರ್ಶ ಹಾಡುವವರು,
ಸಂಪನ್ನ ರಾಮರೊಳಗೆ ಹುದುಗಿರುವ ರಾವಣರು,
ಪತಿವ್ರತಾ ಮೇಕಪ್ಪಿನೊಳಗೆ ಮಿಡುಕುವ ಪತಿತೆಯರು,

ಜಗವನ್ನೇ ಬೆಳಗುವ ರವಿಕಿರಣಗಳು
ಈ ಒಣಕಾಡಿನೆಲೆಗಳಿಗೂ ಸೋಕವು
ನೆಲವ ಬೆಳಗುವುದನ್ನಂತು ಕೇಳಬೇಡ
ಇಲ್ಲಿಯ ಕಾಗೆ ಗೂಗೆಗಳಿಗೆ ಹೊಸಪಾಠ ಕಲಿಸಿದರೆ
ಅವು ಕೂಗುವುದು ಮತ್ತದೇ ಕಾಕಾ ಗೂಗೂ
ಇಲ್ಲಿಯ ನಾಯಿಗಳಿಗೆ ಹೊಸ ಶಾಸ್ತ್ರ ಕಲಿಸಿದರೆ
ಅವು ಊಳಿಡುವುದು ಮತ್ತದೇ ಬೌಬೌ
ನವ ವೇಷ ಭೂಷಣಗಳೊಳಗೆ
ಅದೇ ಪಾಚಿಗಟ್ಟಿದ ಭೂತಬುದ್ಧಿ,

ಯಾವ ಹೊಸಗಾಳಿಗೂ ಮೈತೆರೆಯದ ಹಳಸಲು ಬಾವಿ ಇದು
ಯಾವ ಹೊಸ ಪ್ರಭಾವಗಳಿಗೂ ಪಕ್ಕಾಗದ ಮೋಟು ಮರವಿದು
ಯಾವ ಹೊಸ ಬೀಜವೂ ನಾಟದ ಕಗ್ಗಲ್ಲಿದು
ಇಲ್ಲಿಯವರೆಗೆ ವಿಧಿ ನಿಷೇಧಗಳ
ಋಣಮಾರ್ಗದಲ್ಲಿ ನಡೆದದ್ದಾಯಿತು
ಹುಲಿ ಹಲ್ಲು ಕಿತ್ತು ಆಕಳ ಮಾಡುವ ಯತ್ನ ನಡೆಯಿತು
ಆಡುವ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು
ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು
ಸುರುವಿ
ಕಡಿವ ಕತ್ತಿಯನು ಬಂಡೆಗೆ ಹೊಡೆದು ಮೊಂಡಾಗಿಸಿ
ಜೀವಚ್ಛವವಾದೆವು
ಭಕ್ತಿಯ ಬೋಳೆತನ, ಅಹಿಂಸೆಯ ಹೇಡಿತನ, ಸ್ವರ್ಗದ
ದುರ್ಮಾರ್ಗತನ,
ಬ್ರಹ್ಮಚರ್ಯದ ಭಾನಗಡಿತನ, ಯೋಗದ ಗಂಡುಜೋಗತಿತನ,
ಇವನ್ನೆಲ್ಲ ಇನ್ನಾದರೂ ಸಾಕು ಮಾಡೋಣ
ಚೆನ್ನಾಗಿ ಉಳುವ-ಬೆಳೆವ, ಚೆನ್ನಾಗಿ ಉಣ್ಣುವ-ಉಡುವ,
ಮೈತುಂಬ ಕೆಲಸ ತುಂಬಿ ಕಾಯ ಕಲ್ಲಾಗಿಸುವಾ,
ಮನ ತುಂಬ ಸೊಗವುಂಡು ಭಾವಪೂರ ಹರಿಸುವಾ,

ನಮ್ಮ ಬೆನ್ನಿಗಂಟಿದ ಹೊಟ್ಟೆ ತುಂಬಿಸಿ ತೇಗುವ,
ಕಣ್ತುಂಬ ನಿದ್ರಿಸಿ ಪುನರ್ಜನ್ಮವನಣಕಿಸುವ
ಇಹ ಸಾರ್ಥಕತೆಯ ಧನಮಾರ್ಗ ಹಿಡಿಯೋಣ
ಎಲ್ಲಿ ಬೇಡದು ಕೂಡದು ಬಾರದುಗಳು ಬಂಧಿಸವೋ
ಎಲ್ಲಿ ಬೇಕು ಮಾಡು ಕೂಡುನಲಿಯುವಿಕೆಗಳು
ತಂತಾವೇ ಆಳುವುವೋ
ಹಾಗೆಯೇ ಬಾಳೋಣ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...