Home / ಕವನ / ಕವಿತೆ / ಸಾಕು ಮಾಡೋಣ

ಸಾಕು ಮಾಡೋಣ

ಪುರಾಣ ಪುಣ್ಯಕಥೆಗಳ ಮಿಥ್ಯಾಲಾಪಗಳು ಇನ್ನು ಸಾಕು
ಮುಗಿಲ ಮಲ್ಲಿಗೆಗಳ ಮೂಸುವ ಭ್ರಮೆ ಇನ್ನು ಸಾಕು,
ಕಾಣದುದರ ಕೈಕಾಲುಗಳಿಗೆ ಜೋತಾಡಿ
ಕರ್ರಗೆ ಕಲೆಕಲೆ ಮಾಡಿದ್ದ ಕಂತೆಗಳು ಇನ್ನು ಸಾಕು

ಇದೋ ನೋಡಿ ನಿಮ್ಮ ಮುಂದಿರುವುದು
ಪುಣ್ಯ ಗಣ್ಯ ಭೂಮಿ ಭಾರತವಲ್ಲ
ಹಂದೆಗಳ ಹಡೆಯುವ ದಾರಿದ್ರ್ಯ ದಳ್ಳುರಿಯ
ಆತ್ಮಘಾತಕತನದ ಗಟಾರಮತಿಗಳ ಒಣನೆಲವಾಗಿದೆ.
ನಾವೀಗ ನಿಜವನರಿಯದ ಕೂಪಮಂಡೂಕಗಳು
ಹಲವು ಹಲ್ಕಟ್ತನಗಳ ಮುಚ್ಚಿ ಆದರ್ಶ ಹಾಡುವವರು,
ಸಂಪನ್ನ ರಾಮರೊಳಗೆ ಹುದುಗಿರುವ ರಾವಣರು,
ಪತಿವ್ರತಾ ಮೇಕಪ್ಪಿನೊಳಗೆ ಮಿಡುಕುವ ಪತಿತೆಯರು,

ಜಗವನ್ನೇ ಬೆಳಗುವ ರವಿಕಿರಣಗಳು
ಈ ಒಣಕಾಡಿನೆಲೆಗಳಿಗೂ ಸೋಕವು
ನೆಲವ ಬೆಳಗುವುದನ್ನಂತು ಕೇಳಬೇಡ
ಇಲ್ಲಿಯ ಕಾಗೆ ಗೂಗೆಗಳಿಗೆ ಹೊಸಪಾಠ ಕಲಿಸಿದರೆ
ಅವು ಕೂಗುವುದು ಮತ್ತದೇ ಕಾಕಾ ಗೂಗೂ
ಇಲ್ಲಿಯ ನಾಯಿಗಳಿಗೆ ಹೊಸ ಶಾಸ್ತ್ರ ಕಲಿಸಿದರೆ
ಅವು ಊಳಿಡುವುದು ಮತ್ತದೇ ಬೌಬೌ
ನವ ವೇಷ ಭೂಷಣಗಳೊಳಗೆ
ಅದೇ ಪಾಚಿಗಟ್ಟಿದ ಭೂತಬುದ್ಧಿ,

ಯಾವ ಹೊಸಗಾಳಿಗೂ ಮೈತೆರೆಯದ ಹಳಸಲು ಬಾವಿ ಇದು
ಯಾವ ಹೊಸ ಪ್ರಭಾವಗಳಿಗೂ ಪಕ್ಕಾಗದ ಮೋಟು ಮರವಿದು
ಯಾವ ಹೊಸ ಬೀಜವೂ ನಾಟದ ಕಗ್ಗಲ್ಲಿದು
ಇಲ್ಲಿಯವರೆಗೆ ವಿಧಿ ನಿಷೇಧಗಳ
ಋಣಮಾರ್ಗದಲ್ಲಿ ನಡೆದದ್ದಾಯಿತು
ಹುಲಿ ಹಲ್ಲು ಕಿತ್ತು ಆಕಳ ಮಾಡುವ ಯತ್ನ ನಡೆಯಿತು
ಆಡುವ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು
ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು
ಸುರುವಿ
ಕಡಿವ ಕತ್ತಿಯನು ಬಂಡೆಗೆ ಹೊಡೆದು ಮೊಂಡಾಗಿಸಿ
ಜೀವಚ್ಛವವಾದೆವು
ಭಕ್ತಿಯ ಬೋಳೆತನ, ಅಹಿಂಸೆಯ ಹೇಡಿತನ, ಸ್ವರ್ಗದ
ದುರ್ಮಾರ್ಗತನ,
ಬ್ರಹ್ಮಚರ್ಯದ ಭಾನಗಡಿತನ, ಯೋಗದ ಗಂಡುಜೋಗತಿತನ,
ಇವನ್ನೆಲ್ಲ ಇನ್ನಾದರೂ ಸಾಕು ಮಾಡೋಣ
ಚೆನ್ನಾಗಿ ಉಳುವ-ಬೆಳೆವ, ಚೆನ್ನಾಗಿ ಉಣ್ಣುವ-ಉಡುವ,
ಮೈತುಂಬ ಕೆಲಸ ತುಂಬಿ ಕಾಯ ಕಲ್ಲಾಗಿಸುವಾ,
ಮನ ತುಂಬ ಸೊಗವುಂಡು ಭಾವಪೂರ ಹರಿಸುವಾ,

ನಮ್ಮ ಬೆನ್ನಿಗಂಟಿದ ಹೊಟ್ಟೆ ತುಂಬಿಸಿ ತೇಗುವ,
ಕಣ್ತುಂಬ ನಿದ್ರಿಸಿ ಪುನರ್ಜನ್ಮವನಣಕಿಸುವ
ಇಹ ಸಾರ್ಥಕತೆಯ ಧನಮಾರ್ಗ ಹಿಡಿಯೋಣ
ಎಲ್ಲಿ ಬೇಡದು ಕೂಡದು ಬಾರದುಗಳು ಬಂಧಿಸವೋ
ಎಲ್ಲಿ ಬೇಕು ಮಾಡು ಕೂಡುನಲಿಯುವಿಕೆಗಳು
ತಂತಾವೇ ಆಳುವುವೋ
ಹಾಗೆಯೇ ಬಾಳೋಣ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...