ಒಳ್ಳೇ ನಾರಿ ಕಂಡೆ ಈಗಲೇ

ಒಳ್ಳೇ ನಾರಿ ಕಂಡೆ ಈಗಲೇ
ಒಳ್ಳೇ ನಾರಿ ಕಂಡೆ ||ಪ||

ಇಳೆಯ ತಳದಿ ಕಳೆವರ ಭಲೆ
ಋಷಿಗಳ ಮರುಳು ಮಾಡುವ ||ಅ.ಪ.||

ಕೈಯು ಕಾಲು ಇಲ್ಲಾ
ಮೈಯೊಳು ಉಸುರು ಅಡಗಿತಲ್ಲಾ
ವಿಷಯಸುಖದ ಪರಮಾತ್ಮ ಬ್ರಹ್ಮೋದಯ
ನಿಶಿಕರದೊಳು ನಲಿದಾಡುತಿಹಳೋ ||೧||

ಮುಟ್ಟಲು ಕೊಲ್ಲುವಳೋ ಕಾಮನ
ಕಟ್ಟಿ ಅಳುತಿಹಳೋ
ಬಟ್ಟ ಕುಚಕ ಬರೆದಿಟ್ಟ ಕುಪ್ಪಸಕ
ನಟ್ಟ ಮನಸು ನಡೆಗೆಟ್ಟು ನಿಂತಿತು ||೨||

ವಸುಧೆಯೊಳಗೆ ಇವಳು
ಶಿಶುನಾಳಧೀಶನ ಒಲಿಸಿದಳೋ
ಪಸರಿಸಿ ಗುಡಿಪುರ
ಅಸಮ ರಸಿಕರಿಗೆ ಗುರುಗೋವಿಂದನ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನರಿ ಸತ್ತು ಹೋಯ್ತು ಬೇಡಿ ಹುಲಿಯ ಬಣ್ಣಾ
Next post ಪಾರಿವಾಳ ಮತ್ತು ಮನುಷ್ಯ

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…