ಅಗ್ನಿದೀಕ್ಷೆ

ಅವಳ ಮೈಗೆ ಮಣ್ಣ ಬಣ್ಣ, ಮನಕ್ಕೂ ಮಣ್ಣ ಸತ್ವ,
ಅವಳು, ಆಗಾಗ ಹರಿಸುತ್ತಾಳೆ ನಲ್ಮೆಯ ನಗುವನ್ನು,
ಮೈತುಂಬಿಕೊಂಡ ತೊರೆಯನ್ನು.

ಕೆಲವು ದಿನ ಎಲುಬು ಮೈಯಲ್ಲಿ ನರನರ ಬರಲಾದ
ಮರದಂತಿರುತ್ತಾಳೆ, ‘ಎಷ್ಟು ಸೊರಗಿರುವಿಯಲ್ಲೇ ತಾಯಿ’ ಎಂದರೆ
ಅಯ್ಯೋ ಬಿಡಪ್ಪಾ ಇದೇನು ಮಹಾ!
ಮರದೆಲೆ ಚಿಗುರೀತು ಉದುರೀತು,
ಮರ ಅಮರವಲ್ಲವೆ? ಎಂದು ತತ್ವ ಹೇಳುತ್ತಾಳೆ
ತನ್ನುಡಿಗೆಯನ್ನೇ ಉರಿಸಿಕೊಂಡು ಉರಿಯ ಮಣಿಮಾಲೆಯನ್ನು
ಕೊರಳಲ್ಲಲಂಕರಿಸಿಕೊಂಡು ಅಗ್ನಿದೀಕ್ಷೆ ಪಡೆಯುವುದು
ನಿಜವಾಗಿಯೂ ನೋಟಕ್ಕೆ ರುದ್ರ-ಸುಂದರ

ಅದು ಆಕೆಗೆ, ಹಳೆ ವಸ್ತ್ರ ಕಳಚಿ ಹೊಸದು ಪಡೆವ ರೀತಿಯಂತೆ,
ಹಳೆಯದಾದರೂ ಬರುವ ನಾಳಿನ ಬೇರಿಗೆ ಕೊಳೆತು
ಗೊಬ್ಬರವಾಗಿಯೋ
ಉರಿದು ಧೂಪವಾಗಿಯೋ, ಪವಿತ್ರ ಪಾಪವಾಗಿಯೋ
ಆಗಬೇಕೆಂಬ ಯಜ್ಞ ರಹಸ್ಯವು ಆಕೆಯ ನಿತ್ಯನೂತನತೆಯ ಗುಟ್ಟು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಾಂಪತ್ಯ
Next post ಸಂಚು

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys