Home / ಕವನ / ಕವಿತೆ / ರಸಕಾವ್ಯ

ರಸಕಾವ್ಯ

ನಿನ್ನ ನೂರಾರು ಹಸ್ತಗಳು ತೂರಿ ನೆಲದೆದೆಯ ತಬ್ಬಿಹವು
ಆಹಾ ಅದೆಷ್ಟು ಆಳವೋ ನಿನ್ನ ಪ್ರೀತಿ
ಎಂದೋ ನೆಲವ ಮುದ್ದಿಸಿತು ಬೀಜ-ನೀನೆದ್ದೆ ಮುದ್ದಿನ ಚೆಲುಮೆ
ಎನಿತೊ ನೋವು ಸುಂಕಗಳ ತೆತ್ತು ಸ್ಥಿರವಾಯಿತು ಅಸ್ಥಿ-ಮಾಂಸ-
ಮಜ್ಜಾಕಾಯ
ದಿನೆ ದಿನೇ ಭದ್ರವಾಯಿತು-ಹಸರಿಸಿತು ನಂಟು

ನಲಿವಿನ ಕೋಟಿ ಪುಳಕಗಳೆನೆ, ಚೆಲುವಿನ ಚಿರನೂತನ ಕೈಚಳಕವೆನೆ
ಮೈತುಂಬ ಎಲೆ‌ಎಲೆ ಕಲೆಯ ರೋಮಾಂಚನ
ತಾಯ್ತನದಿ ಹೂತು, ಕನಸು ನನಸಾಗಿ ಕಾತು, ಶಾಶ್ವತಿಯ ಸೇತು,
ಅನಂತ ರೂಪನ ರಸಪೂರಣ ಆಯಿತು ಗರ್ಭಧಾರಣ
ಸತ್ಫಲಗಳಿಂದ ಕೃತಕೃತ್ಯವಾಗಲು ಜೀವಮಾನ

ನಿನ್ನ ಮುತ್ತನುಂಡು ಬೆಳೆದಿದ್ದರೂ ಎಲ್ಲವೂ ಮುತ್ತಲ್ಲ,
ಅಲ್ಲಲ್ಲಿ ಕೆಲವಳಿದು, ಉಳಿದುದರಲ್ಲಿ ಜೊಳ್ಳುಗಳ ಕಳೆದು,
ಅಸಂಖ್ಯಾತವು ಅನೇಕ ಬಾಯಿಗಳ ಸೇರಿ,
ನಿನ್ನ ಬಾಳಗುರಿಯ ಪೂಣ್ಕೆಗಾಗುವುವು ಒಂದೆರಡು ಕಾಣ್ಕೆ
ಅಷ್ಟರಿಂದಲೇ ನೀನು ತೃಪ್ತೆ. ನಿನ್ನ ಬದುಕು ನಿತ್ಯ-ಸತ್ಯದ ರಸಕಾವ್ಯ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...