ರಸಕಾವ್ಯ

ನಿನ್ನ ನೂರಾರು ಹಸ್ತಗಳು ತೂರಿ ನೆಲದೆದೆಯ ತಬ್ಬಿಹವು
ಆಹಾ ಅದೆಷ್ಟು ಆಳವೋ ನಿನ್ನ ಪ್ರೀತಿ
ಎಂದೋ ನೆಲವ ಮುದ್ದಿಸಿತು ಬೀಜ-ನೀನೆದ್ದೆ ಮುದ್ದಿನ ಚೆಲುಮೆ
ಎನಿತೊ ನೋವು ಸುಂಕಗಳ ತೆತ್ತು ಸ್ಥಿರವಾಯಿತು ಅಸ್ಥಿ-ಮಾಂಸ-
ಮಜ್ಜಾಕಾಯ
ದಿನೆ ದಿನೇ ಭದ್ರವಾಯಿತು-ಹಸರಿಸಿತು ನಂಟು

ನಲಿವಿನ ಕೋಟಿ ಪುಳಕಗಳೆನೆ, ಚೆಲುವಿನ ಚಿರನೂತನ ಕೈಚಳಕವೆನೆ
ಮೈತುಂಬ ಎಲೆ‌ಎಲೆ ಕಲೆಯ ರೋಮಾಂಚನ
ತಾಯ್ತನದಿ ಹೂತು, ಕನಸು ನನಸಾಗಿ ಕಾತು, ಶಾಶ್ವತಿಯ ಸೇತು,
ಅನಂತ ರೂಪನ ರಸಪೂರಣ ಆಯಿತು ಗರ್ಭಧಾರಣ
ಸತ್ಫಲಗಳಿಂದ ಕೃತಕೃತ್ಯವಾಗಲು ಜೀವಮಾನ

ನಿನ್ನ ಮುತ್ತನುಂಡು ಬೆಳೆದಿದ್ದರೂ ಎಲ್ಲವೂ ಮುತ್ತಲ್ಲ,
ಅಲ್ಲಲ್ಲಿ ಕೆಲವಳಿದು, ಉಳಿದುದರಲ್ಲಿ ಜೊಳ್ಳುಗಳ ಕಳೆದು,
ಅಸಂಖ್ಯಾತವು ಅನೇಕ ಬಾಯಿಗಳ ಸೇರಿ,
ನಿನ್ನ ಬಾಳಗುರಿಯ ಪೂಣ್ಕೆಗಾಗುವುವು ಒಂದೆರಡು ಕಾಣ್ಕೆ
ಅಷ್ಟರಿಂದಲೇ ನೀನು ತೃಪ್ತೆ. ನಿನ್ನ ಬದುಕು ನಿತ್ಯ-ಸತ್ಯದ ರಸಕಾವ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಜಕಾರಣಿ
Next post ರಾತ್ರಿ ರಾಣಿಯರು

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…