Home / ಕವನ / ಕವಿತೆ / ಕವಿಗಳು

ಕವಿಗಳು

ಇವರ ಕಣ್ಣಿಗೆ ಇಲ್ಲೆಲ್ಲಾ ಓರೆಕೋರೆಗಳೇ ಕಾಣುತ್ತವೆ
ನೇರಮಾಡಲು ಇವರು ಸೆಣಸುತ್ತಾರೆ
ಇವರ ನೋಟಕತ್ತಿಗಳು ವಕ್ರತೆಗಳ ಕತ್ತರಿಸುವಂತೆ ನೋಡುತ್ತವೆ
ಇವರ ಎದೆ ಏನೇನೋ ಹಾಡುತ್ತದೆ
ಆ ಹಾಡ ಕಡಲಿಂದ ನುಡಿಬಟ್ಟಲಲ್ಲಿ ಇವರು ಮೊಗೆದೇ
ಮೊಗೆಯುತ್ತಾರೆ
ಅಸಂಖ್ಯ ಅಭಿನಯ ದೃಶ್ಯ ತರಂಗ

ಏನು ರಸತುಂಬಿ ಕಳಿಸಿರುವನೋ ಅವನು ಇವರೆದೆಯಲ್ಲಿ
ಅದು ಗಾಳಿಯಲೆಗೂ ಕಲಕಲಗೊಳ್ಳುತ್ತದೆ
ತುಮುಲಗೊಳ್ಳುತ್ತದೆ ಕೊನೆಗೆ ಕುದಿಯತೊಡಗುತ್ತದೆ
ಇವರು ಆ ಕುದಿಯನುಕ್ಕಿಸುತ್ತಾರೆ ಕಕ್ಕುತ್ತಾರೆ
ನೂರೆನೂರೆ ಬಿಸಿಬಿಸಿ ಸಿಡಿಲಂತೆ ಕೆಂಡದ ಮಳೆಯಂತೆ

ಇವರ ವೀಣೆಯ ತಂತಿ ಬಲು ಕೋಮಲ
ಇತರೆಲ್ಲ ತಂತಿಗಳು ಮಿಡಿಯದ ತಾನಗಳಲ್ಲಿ
ಇವು ಮಿಡಿಯುತ್ತವೆ ನುಡಿಯುತ್ತವೆ
ಇತರರು ಅಂದುಕೊಳ್ಳಲೂ ಆಗದುದನು
ಇವರು ಅನುಭವಿಸಿ ದನಿದೋರುತ್ತಾರೆ
ನಿಮ್ಮ ಕಟ್ಟೆಯೇರಿಗಳಿವರಿಗೆ ಸೆರೆಮನೆ

ನಿಂತ ಹೊಂಡು ನೀರೆಂದೂ ಇವರಾಗಲಾರರು
ಹನಿಹನಿ ಜಿನುಗುವ ಒರತೆಯಾದರೂ ಸರಿ
ಕ್ಷಣ ಕ್ಷಣಕೂ ಸೃಷ್ಟಿಯು ಇವರನ್ನು
ಕುಂತಲ್ಲಿ ಕುಳ್ಳಿರಿಸದೆ, ನಿಂತಲ್ಲಿ ನಿಲ್ಲಿಸದೆ, ಮಲಗಗೊಡದೆ
ಹರಿದಾಡಿಸುತ್ತದೆ ಸ್ವಚ್ಛಂಧ ನಿರ್ಝರಿಯಂತೆ
ಧಾರೆ ಧಾರೆ ಜಲಪಾತದಂತೆ, ನೆಲಮುದ್ದಿಸುವ ಮಳೆಯಂತೆ
ಇವರ ನೀರಾಳ ನಿಮ್ಮಳತೆಗೆ ಸಿಗುವುದಂತೂ ಅಲ್ಲ
ನಿಮಗಂತೂ ಇವರ ನಡೆ ಸೊಟ್ಟು, ಹೆಜ್ಜೆ ಹುಚ್ಚುಚ್ಚಾರ
ನುಡಿ ಒಗಟು, ಚರಿತ್ರೆ ವಿಚಿತ್ರ, ನೀತಿ ಅತೀತ
ಇವರ ಬಟ್ಟೆ ಕಂಡಾಬಟ್ಟೆ, ಇವರ ವರ್ತನೆ
ಅದ್ವೈತ-ಅಯೋಮಯ….
*****

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...