Home / ಕವನ / ಕವಿತೆ / ಕವಿಗಳು

ಕವಿಗಳು

ಇವರ ಕಣ್ಣಿಗೆ ಇಲ್ಲೆಲ್ಲಾ ಓರೆಕೋರೆಗಳೇ ಕಾಣುತ್ತವೆ
ನೇರಮಾಡಲು ಇವರು ಸೆಣಸುತ್ತಾರೆ
ಇವರ ನೋಟಕತ್ತಿಗಳು ವಕ್ರತೆಗಳ ಕತ್ತರಿಸುವಂತೆ ನೋಡುತ್ತವೆ
ಇವರ ಎದೆ ಏನೇನೋ ಹಾಡುತ್ತದೆ
ಆ ಹಾಡ ಕಡಲಿಂದ ನುಡಿಬಟ್ಟಲಲ್ಲಿ ಇವರು ಮೊಗೆದೇ
ಮೊಗೆಯುತ್ತಾರೆ
ಅಸಂಖ್ಯ ಅಭಿನಯ ದೃಶ್ಯ ತರಂಗ

ಏನು ರಸತುಂಬಿ ಕಳಿಸಿರುವನೋ ಅವನು ಇವರೆದೆಯಲ್ಲಿ
ಅದು ಗಾಳಿಯಲೆಗೂ ಕಲಕಲಗೊಳ್ಳುತ್ತದೆ
ತುಮುಲಗೊಳ್ಳುತ್ತದೆ ಕೊನೆಗೆ ಕುದಿಯತೊಡಗುತ್ತದೆ
ಇವರು ಆ ಕುದಿಯನುಕ್ಕಿಸುತ್ತಾರೆ ಕಕ್ಕುತ್ತಾರೆ
ನೂರೆನೂರೆ ಬಿಸಿಬಿಸಿ ಸಿಡಿಲಂತೆ ಕೆಂಡದ ಮಳೆಯಂತೆ

ಇವರ ವೀಣೆಯ ತಂತಿ ಬಲು ಕೋಮಲ
ಇತರೆಲ್ಲ ತಂತಿಗಳು ಮಿಡಿಯದ ತಾನಗಳಲ್ಲಿ
ಇವು ಮಿಡಿಯುತ್ತವೆ ನುಡಿಯುತ್ತವೆ
ಇತರರು ಅಂದುಕೊಳ್ಳಲೂ ಆಗದುದನು
ಇವರು ಅನುಭವಿಸಿ ದನಿದೋರುತ್ತಾರೆ
ನಿಮ್ಮ ಕಟ್ಟೆಯೇರಿಗಳಿವರಿಗೆ ಸೆರೆಮನೆ

ನಿಂತ ಹೊಂಡು ನೀರೆಂದೂ ಇವರಾಗಲಾರರು
ಹನಿಹನಿ ಜಿನುಗುವ ಒರತೆಯಾದರೂ ಸರಿ
ಕ್ಷಣ ಕ್ಷಣಕೂ ಸೃಷ್ಟಿಯು ಇವರನ್ನು
ಕುಂತಲ್ಲಿ ಕುಳ್ಳಿರಿಸದೆ, ನಿಂತಲ್ಲಿ ನಿಲ್ಲಿಸದೆ, ಮಲಗಗೊಡದೆ
ಹರಿದಾಡಿಸುತ್ತದೆ ಸ್ವಚ್ಛಂಧ ನಿರ್ಝರಿಯಂತೆ
ಧಾರೆ ಧಾರೆ ಜಲಪಾತದಂತೆ, ನೆಲಮುದ್ದಿಸುವ ಮಳೆಯಂತೆ
ಇವರ ನೀರಾಳ ನಿಮ್ಮಳತೆಗೆ ಸಿಗುವುದಂತೂ ಅಲ್ಲ
ನಿಮಗಂತೂ ಇವರ ನಡೆ ಸೊಟ್ಟು, ಹೆಜ್ಜೆ ಹುಚ್ಚುಚ್ಚಾರ
ನುಡಿ ಒಗಟು, ಚರಿತ್ರೆ ವಿಚಿತ್ರ, ನೀತಿ ಅತೀತ
ಇವರ ಬಟ್ಟೆ ಕಂಡಾಬಟ್ಟೆ, ಇವರ ವರ್ತನೆ
ಅದ್ವೈತ-ಅಯೋಮಯ….
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...