ದುಡ್ಡು ಕೆಟ್ಟದ್ದೊ ಮನುಜಾ

ದುಡ್ಡು ಕೆಟ್ಟದ್ದೊ ಮನುಜಾ ಈ ಲೋಕದಿ
ದುಡ್ಡು ಕೆಟ್ಟದ್ದೊ ಮನುಜಾ ||ಪ||
ಹೆಡ್ಡ ಮೂಢಾತ್ಮನೆ ದೊಡ್ಡ ದೊಡ್ಡವರನು
ಮಡ್ಡು ಇಳಿಸುತ್ತಲೀ ಅಡ್ಡಬೀಳಿಸುವದು ||ಅ.ಪ||

ಹರನ ಪೂಜೆಯ ಕೆಡಿಸಿ ಸದ್ಗುರುವಿನ
ವರಮಂತ್ರವನು ಬಿಡಿಸಿ
ಗುರುಶಿಷ್ಯಭಾವವನರುಹಿ ಲಕ್ಷ್ಮೀಯೆಂಬ
ಕೊರವಿಯು ನರರನು ಅರವುಗೆಡಿಸುವಳು ||೧||

ಆಸೆಯ ಮನಗೊನಿಯು
ಸಂಸಾರವು ಕಸಿನ ಘನತೆನಿಯು
ಭಾಸುರ ಶಿಶುನಾಳಧೀಶ ಸದ್ಗುರುವಿಗೆ
ಆಸೆಯ ಕಲಿಸಲು ಏಸರವಳವ್ವ ಈಕಿ ||೨||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾರಿವಾಳ ಮತ್ತು ಮನುಷ್ಯ
Next post ಆಂತರ್ಯ

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…