Home / ಕವನ / ಕವಿತೆ / ಬಯಲಾಟ

ಬಯಲಾಟ

ಈ ಹಾಡಾಹಗಲೇ ದೇಶರಂಗಮಂಚದಲ್ಲಿ
ಬಟಾಬಯಲಾಟ ನೋಡಿರಣ್ಣಾ
ಬರೀ ರಕ್ಕಸ ಪಾತ್ರಗಳಣ್ಣಾ
ತಿರುಗಾ ಮುರುಗಾ ಅಡ್ಡಾತಿಡ್ಡೀ ಕುಣಿತವಣ್ಣಾ
ಹಾಡಿಗೂ ಕುಣಿತಕ್ಕೂ ತಾಳಕ್ಕೂ ಸಂಗೀತಕ್ಕೂ
ಮುಮ್ಮೇಳ ಹಿಮ್ಮೇಳಕ್ಕೂ ತಾಳಮೇಳವಿಲ್ಲ
ಒಂದಾಟವಾಡಲು, ಅನೇಕ ರಸಪ್ರಸಂಗಗಳ ತೋರಿಸಲು
ಫೋಷಣೆ-ಭಾಷಣ, ಆದವಣ್ಣಾ,

ರಂಗದ ಮೇಲೆ ಪರ ಪರಸಂಗಗಳ
ಬಣ್ಣ ಬದಲಿಸಿ ವೇಷ ಬದಲಿಸಿ ಆಡುವರಣ್ಣಾ,
ಊಸರವಳ್ಳಿಗಳೂ ಇದನು ನೋಡಿ ನಾಚಿದವಣ್ಣಾ,
ನಿಸ್ಸಹಾಯ ಪ್ರೇಕ್ಷಕರ ಹರಣ ಕೀಳುವರಣ್ಣಾ

ಅವರ ಕೂಗಾಟ ಒದರಾಟಗಳ ಕೇಳಿ ಕೇಳಿ,
ಇವರು ಕಿವುಡರಾಗಿದ್ದಾರೆ.
ಅದು ಬೇಡ ಇದು ಬೇಕು ಎಂದೆಂದು ಕೂಗಿ ಕೂಗಿ
ಇವರ ಗಂಟಲು ಬಿದ್ದು ಈಗಿವರು ಬರಿ ಮೂಕರಾಗಿದ್ದಾರೆ
ಆಟದವರಂತೂ ತಮ್ಮ ರಸಾನಂದದಲ್ಲೇ ತಲ್ಲಿನರಣ್ಣಾ

ಕ್ಷಣಕ್ಷಣಕ್ಕೂ ಬೆಳೆಯುವ ಇವರ ಕಳ್ಳ ಬಸುರು ಡೊಳ್ಳ ಹೊಟ್ಟೆಗಳಿಗೆ
ರಂಗ ಮಂಚ ಸಾಲದಾಗಿದೆಯಣ್ಣಾ ಪೂರಾ ಸಾಲದ್ದೇ ಆಗಿದೆಯಣ್ಣಾ
ನೋಡಿ ನೋಡಿ ಜನ ಬೆಂಡಾದರಣ್ಣಾ
ಬೆಂಡಾದಂತೆಲ್ಲಾ ಅವರ ಬಂಡಾಟ ಬಯಲಾಟ ರಂಗೇರಿತಣ್ಣಾ
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್