Home / ಕವನ / ಕವಿತೆ / ಗಾಂಧಿ

ಗಾಂಧಿ

ಮೋಹನದಾಸ ಕರಮಚಂದ್ ಗಾಂಧೀ ನೀನೇ
ಭಾರತ ದೇಶದ ತಂದೀ
ಗುಜರಾತಿನ ಪೋರ್ಬಂದರಿನಲಿ ಹುಟ್ಟಿಬಂದಿ
ಜಗದಗಲ ಮುಗಿಲಗಲ ಬೆಳೆದು ವ್ಯಾಪಿಸಿ ನಿಂದಿ

ನಮ್ಮಂತೆ ಸಾಮಾನ್ಯನಾಗಿಯೆ ಹುಟ್ಟಿದಿ
ಜಗಕೆಲ್ಲ ಸನ್ಮಾನ್ಯ ಮಹಾತ್ಮನೆನಿಸಿದಿ
ಬುದ್ಧ ಏಸುವಿನಂತೆ ಪೈಗಂಬರನಂತೆ
ಮಾನವ ಕುಲಕೆಲ್ಲ ಕುಲದೀಪ ನೀನಾದಿ

ಯುಗಕೊಮ್ಮೆ ಮೂಡುವ ಜನಮನದಾದರ್ಶ
ಯುಗದ ಅಚ್ಚರಿ ನೀನು ನವಯುಗದ ಕರ್ತ
ಕೆಳಗೆ ಬಿದ್ದವರನು ದೀನ ದಲಿತರನ್ನು
ತಬ್ಬಿ ಮೇಲೆತ್ತಲು ಬಂದೆಯೊ ತಾತ

ನಿನ್ನ ಪ್ರತಿಮೆಗಳನು ಸರ್ಕಲುಗಳಲಿಟ್ಟು
ನಿನ್ನ ಹೆಸರನು ಬೀದಿ ಬಾಜಾರಗಳಿಗಿಟ್ಟು
ನಿನ್ನ ಚಿತ್ರವ ನೋಟು ನಾಣ್ಯಗಳ ಮೇಲಿಟ್ಟು
ನಿನ್ನನ್ನೆ ಮರೆತೀವೊ ನಾಚಿಕೆ ಬಿಟ್ಟು

ಈಶ್ವರ ಅಲ್ಲಾನು ರಾಮ ರಹೀಮನು
ಒಬ್ಬನೆ ದೇವನು ಎಂದು ನೀನೆಂದರು
ಧರ್ಮಗಳ ಹೆಸರಲ್ಲಿ ಹಿಂಸಾಕರ್ಮಗಳಲ್ಲಿ
ಕಚ್ಚಾಡಿ ಕೊಲ್ಲುವರು ಮತಾಂಧರು

ಹದ್ದು ನರಿಗಳು ತುಂಬಿ ಗುದ್ದಾಡುತೈದಾವೆ
ದೇಶವಾಗಿದೆ ಇಂದು ಕೊಳೆತು ನಾರುವ ಹೊಂಡ
ಶುದ್ಧ ಜೀವನಕೊಂದು ಮಾದರಿಯಾಗಿದ್ದಿ
ಇಂದು ನಮ್ಮನು ನೋಡಿ ಆಗುವಿ ಕೆಂಡ

ಹಣವೆ ಆಳುವುದೀಗ ಸ್ವಾರ್ಥಕ್ಕೆ ಗದ್ದುಗೆ
ರಾಜಕಾರಣ ಸೂಳೆ ಅಟ್ಟಹಾಸ
ನಿನ್ನ ಆದರ್ಶಗಳ ಗಾಳಿಗೆ ತೂರುತ್ತ
ಸಾಮಾನ್ಯ ಜನರಿಗೆ ಪೂರಾ ಮೋಸ

ಏನಂತ ನೆನೆಯಲಿ ಏನೆಂದು ನೆನೆಯಲಿ
ವರುಷಕೊಮ್ಮೆ ನಿನ್ನ ಗಾಂಧಿ ತಾತ
ಕತ್ತಲೆ ತುಂಬಿದ ದೇಶದಲಿ ಬೆಳಕನ್ನು
ಹೇಗೆ ತರುವಿಯೋ ನೋಡೊ ನೀನೆ ತ್ರಾತ ||
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...