ಯುಗಧರ್ಮದ ಹಕ್ಕಿ

ಹಕ್ಕಿಯೊಂದು ಮೇಲೆ ಹಾರಿ ತೇಲಿಹೋಯಿತು
ಚಿಕ್ಕಿಯಾಗಿ ಬಾನಿನಲ್ಲಿ ಸೇರಿ ಹೋಯಿತು

ಇದೇ ಮಣ್ಣಿನಲಿ ಹುಟ್ಟಿ ರೆಕ್ಕೆ ಪುಕ್ಕಗಳನು ತಳೆದು
ಬಿಳಿಯ ಹಂಸವಾಗಿ ಮಹಿಮೆ ಪಡೆದುಕೊಂಡಿತು
ಹದ್ದು ಕಾಗೆ ಗೂಗೆಗಳಲೆ ಬೆಳೆದು ನಿಂತಿತು
ಎನಿತೊ ಬೆಳ್ಳಕ್ಕಿಗಳನು ಸೃಷ್ಟಿ ಮಾಡಿತು

ಯುಗಯುಗಳ ಜನಮನದಲಿ ತತ್ತಿ ಮೂಡಿ ಕಾವು ಕುಳಿತು
ಯುಗಧರ್ಮದ ಸಾರ ರೂಪ ಹಕ್ಕಿಯಾಯಿತು
ಊರು ಸೀಮೆ ನಾಡು ದೇಶಗಳನು ಮೀರಿತು
ಭೂಮಂಡಲದ ಉದ್ದಗಲಕು ಬೆಳೆದು ನಿಂತಿತು

ಮತಮತಗಳ ಗೂಡುಗಳನು ದಾಟಿ ಮೇಲೆ ಕುಳಿತುಕೊಂಡು
ಎಲ್ಲ ಹಕ್ಕಿಗಳನೊಂದೇ ಬಾನಂಗಳಕೆ ಕರೆದುಕೊಂಡು
ಮಾನವತೆಯ ಮಂತ್ರದಲ್ಲಿ ಮೋಡಿ ಮಾಡಿತು
ಬಂಧನ ಬೇಡಿಯ ಕಳಚಲು ದಾರಿ ಮಾಡಿತು

ಮೂಡಣ ಪಡುವಣದಗಲಕು ತನ್ನ ರೆಕ್ಕೆಗಳನು ಚಾಚಿ
ಬಿಳಿಯ ಕರಿಯ ಬಣ್ಣಗಳನು ಗೌಣ ಮಾಡಿತು
ಒಳಗಿನಂತರಂಗ ತಂತಿ ಮೀಟಿ ಒಂದೆ ರಾಗ ಹಾಡಿ
ಹಿಂಸೆ ಕ್ರೌರ್ಯಗಳಿಗೆ ಎದುರು ಮಾರ್ಗ ತೋರಿತು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಕೃತಿ
Next post ಚಂದ್ರನ ಚಾಳಿ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys