Home / ಕವನ / ಕವಿತೆ / ಹಾರಿ ಹೋಗತದ ಹಕ್ಕೀ

ಹಾರಿ ಹೋಗತದ ಹಕ್ಕೀ

ಅಂತೂ ಇಂತೂ ಒಂದು ದಿನ ಒಂದೇ ಕ್ಷಣಾ ಈ
ಕಂತೇ ಒಗೆಯುವುದು ನಿಶ್ಚಿತ
ಇರುವುದರಾಗೇ ಸಾಧಿಸಬೇಕು ಜನ್ಮ ಹುಟ್ಟಿಬಂದಭಿಮತ

ಹಾಂಗೂ ಹೀಂಗೂ ಸಾಗಿ ಹೋಗುತದ ಕಾಲ ಎಂಬ ಗಾಡೀ
ಇಬ್ಬನಿಯಂಗೆ ಕನಸಿನಹಂಗೆ ಮ್ಯಾಲಿನ ಮೋಡದ ಮೋಡೀ

ಹಿಡಿ ಹಿಡಿ ಹಿಡಿ ಹಿಡಿ ಅನ್ನೋದರಾಗ ಹಾರಿ ಹೋಗುತದ ಹಕ್ಕೀ
ಬೆರಳ ಸಂದಿನ್ಯಾಗ ಸೋರಿ ಹೋಗತಾವ ಬದುಕಿನ ಲೆಕ್ಕದ ಅಕ್ಕೀ

ಹಾರಾಡುತ್ತಿದೆ ಹದ್ದು ತಲಿ ಮ್ಯಾಲೆ ಜೀವದ ಹಕ್ಕೀ ಹಿಡಿಯಾಕ
ಕುಂತ ಕುಂತಲ್ಲೊ ದಾರಿ ದಾಟುವಾಗೊ ಅಪ್ಪಳಿಸುತ್ತದ ನೆಲಕ

ಗಬಕ್ಕನ ಕಚ್ಚಿ ಹಾರಿ ಹೋಗತದ ಬಾಯ್ಬಯ್ ಬಿಡ್ತಾವ ಸುತ್ತ
ಲಬಲಬ ಎದೆ ಬಡಕೊಂಡರು ಇಲ್ಲಾ ತಿರುಗಿ ಬರೋದಿಲ್ಲ ಮತ್ತ

ಕಾಲ ಎಂಬ ಇಲಿ ಮೂಸಿ ನೋಡತದ ಬೀಪೀ ಷುಗರ್ರು ಪಾರ್ಶೀ
ಕ್ಯಾನ್ಸರ್ ಏಡ್ಸೋ ಹುಣ್ಣೋ ಮಣ್ಣೋ ಯಾವುದೋ ರೋಗಾ ಸೇರ್ಸಿ
***

ರೊಕ್ಕಾ ರೊಕ್ಕಾ ಗಳಿಸೂ ಗಳಿಸೂ ಬೊಜ್ಜ ಮೈಯಾ ಬೆಳಸೂ
ಸುತ್ತಲಿನವರು ಸತ್ರೂ ಕೆಟ್ರೂ ಕಟುಕಸ್ವಾರ್ಥದಲೆ ಗಳಸೂ

ತಂದೆ ತಾಯಿಗಳ ಕಾಲಲಿ ತಡಕೂ ಬಂಧೂ ಬಳಗಾ ಕಸಾ
ನಿಂದೇ ನೀನು ಹೆಂಡ್ರು ಮಕ್ಳೂ ನೀನೇ ಜಗತ್ತು ರಸಾ

ಆಶೆ ಮುಚ್ಚಿಕೊಂಡು ಪಾಶ ಹಚ್ಚಿಕೊಂಡು ಒಂದಿನ ಗೊಟಕ್ಕ ಅಂತಿ
ಮೋಸ ತಗಲು ವಿಷ ಕೂಪದಿ ಬಿದ್ದು ಜೀವನ ಮರ್ಮವ ಮರತಿ
***

ನಾಯಿ ನರಿಹಂಗೆ ಕಾಗೆ ಗೂಗಿ ಹಂಗೆ ಕತ್ತೆ ಕೋಣನ್ಹಂಗೆ
ಹಂದಿ ಹದ್ದಿನಂಗೆ ಇಲಿ ಹೆಗ್ಗಣದಂಗೆ ಕ್ರೂರಮೃಗಗಳಂಗೆ

ಪ್ರಾಣಿ ಪಕ್ಷಗಳ ಹೋಲಿಸಿ ಮಾನವ ಶ್ರೇಷ್ಠನೆಂಬುವುದು ತಪ್ಪು
ಅವುಗಳ ಗುಣಗಳು ಇವನಲ್ಲಿರುವುವೆ ಯೋಚಿಸಿ ನೋಡಿ ಒಪ್ಪು

ಹೇಗಿರಬೇಕೊ ಆಯಾ ಪ್ರಾಣೀ ಹಾಂಗೇ ಅವು ಬಾಳ್ತಾವೇ
ಸುಮ್ಮ ಸುಮ್ಮನೇ ಅವುಗಳ ನಿಂದಿಸಿ ಅಪಮಾನ ಮಾಡುತಿರುವೆ
****

ಹಿಂದಿನ ಹಿರೇರು ಹೇಳ್ತಾ ಬಂದ್ರು ನೀರಿನ ಗುಳ್ಳೇ ಜನ್ಮಾ
ಆದರು ಅದನ್ನೆ ಗಟ್ಯಾಗಿ ಹಿಡಿಕೊಂಡು ಸಾಗ್ಯಾದ ನಮ್ಮ ಕರ್ಮ

ಆತ್ಮಾ ಆತ್ಮಾ ಸಾದ್ಸು ಅಂದ್ರು ಅತ್ಮದ ಚಿಂತಿ ಬ್ಯಾಡೋ
ಇರುವ ಬದುಕನೇ ಸಾರ್ಥಕ ಹ್ಯಾಂಗೆ ಮಾಡಿಕೊಬೇಕು ನೋಡೊ

ನ್ಯಾಯದ ದಾರಿ ಸತ್ಯದ ದಾರಿ ಗಟ್ಟಿಯ ದಾರಿ ಹಿಡಿಯೊ
ನನ್ನ ಜನಗಳು ನಾನೂ ಒಂದೇ ಎಂಬುವ ವಿಚಾರ ಪಡಿಯೊ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...