Home / ಕವನ / ಕವಿತೆ / ಹಾರಿ ಹೋಗತದ ಹಕ್ಕೀ

ಹಾರಿ ಹೋಗತದ ಹಕ್ಕೀ

ಅಂತೂ ಇಂತೂ ಒಂದು ದಿನ ಒಂದೇ ಕ್ಷಣಾ ಈ
ಕಂತೇ ಒಗೆಯುವುದು ನಿಶ್ಚಿತ
ಇರುವುದರಾಗೇ ಸಾಧಿಸಬೇಕು ಜನ್ಮ ಹುಟ್ಟಿಬಂದಭಿಮತ

ಹಾಂಗೂ ಹೀಂಗೂ ಸಾಗಿ ಹೋಗುತದ ಕಾಲ ಎಂಬ ಗಾಡೀ
ಇಬ್ಬನಿಯಂಗೆ ಕನಸಿನಹಂಗೆ ಮ್ಯಾಲಿನ ಮೋಡದ ಮೋಡೀ

ಹಿಡಿ ಹಿಡಿ ಹಿಡಿ ಹಿಡಿ ಅನ್ನೋದರಾಗ ಹಾರಿ ಹೋಗುತದ ಹಕ್ಕೀ
ಬೆರಳ ಸಂದಿನ್ಯಾಗ ಸೋರಿ ಹೋಗತಾವ ಬದುಕಿನ ಲೆಕ್ಕದ ಅಕ್ಕೀ

ಹಾರಾಡುತ್ತಿದೆ ಹದ್ದು ತಲಿ ಮ್ಯಾಲೆ ಜೀವದ ಹಕ್ಕೀ ಹಿಡಿಯಾಕ
ಕುಂತ ಕುಂತಲ್ಲೊ ದಾರಿ ದಾಟುವಾಗೊ ಅಪ್ಪಳಿಸುತ್ತದ ನೆಲಕ

ಗಬಕ್ಕನ ಕಚ್ಚಿ ಹಾರಿ ಹೋಗತದ ಬಾಯ್ಬಯ್ ಬಿಡ್ತಾವ ಸುತ್ತ
ಲಬಲಬ ಎದೆ ಬಡಕೊಂಡರು ಇಲ್ಲಾ ತಿರುಗಿ ಬರೋದಿಲ್ಲ ಮತ್ತ

ಕಾಲ ಎಂಬ ಇಲಿ ಮೂಸಿ ನೋಡತದ ಬೀಪೀ ಷುಗರ್ರು ಪಾರ್ಶೀ
ಕ್ಯಾನ್ಸರ್ ಏಡ್ಸೋ ಹುಣ್ಣೋ ಮಣ್ಣೋ ಯಾವುದೋ ರೋಗಾ ಸೇರ್ಸಿ
***

ರೊಕ್ಕಾ ರೊಕ್ಕಾ ಗಳಿಸೂ ಗಳಿಸೂ ಬೊಜ್ಜ ಮೈಯಾ ಬೆಳಸೂ
ಸುತ್ತಲಿನವರು ಸತ್ರೂ ಕೆಟ್ರೂ ಕಟುಕಸ್ವಾರ್ಥದಲೆ ಗಳಸೂ

ತಂದೆ ತಾಯಿಗಳ ಕಾಲಲಿ ತಡಕೂ ಬಂಧೂ ಬಳಗಾ ಕಸಾ
ನಿಂದೇ ನೀನು ಹೆಂಡ್ರು ಮಕ್ಳೂ ನೀನೇ ಜಗತ್ತು ರಸಾ

ಆಶೆ ಮುಚ್ಚಿಕೊಂಡು ಪಾಶ ಹಚ್ಚಿಕೊಂಡು ಒಂದಿನ ಗೊಟಕ್ಕ ಅಂತಿ
ಮೋಸ ತಗಲು ವಿಷ ಕೂಪದಿ ಬಿದ್ದು ಜೀವನ ಮರ್ಮವ ಮರತಿ
***

ನಾಯಿ ನರಿಹಂಗೆ ಕಾಗೆ ಗೂಗಿ ಹಂಗೆ ಕತ್ತೆ ಕೋಣನ್ಹಂಗೆ
ಹಂದಿ ಹದ್ದಿನಂಗೆ ಇಲಿ ಹೆಗ್ಗಣದಂಗೆ ಕ್ರೂರಮೃಗಗಳಂಗೆ

ಪ್ರಾಣಿ ಪಕ್ಷಗಳ ಹೋಲಿಸಿ ಮಾನವ ಶ್ರೇಷ್ಠನೆಂಬುವುದು ತಪ್ಪು
ಅವುಗಳ ಗುಣಗಳು ಇವನಲ್ಲಿರುವುವೆ ಯೋಚಿಸಿ ನೋಡಿ ಒಪ್ಪು

ಹೇಗಿರಬೇಕೊ ಆಯಾ ಪ್ರಾಣೀ ಹಾಂಗೇ ಅವು ಬಾಳ್ತಾವೇ
ಸುಮ್ಮ ಸುಮ್ಮನೇ ಅವುಗಳ ನಿಂದಿಸಿ ಅಪಮಾನ ಮಾಡುತಿರುವೆ
****

ಹಿಂದಿನ ಹಿರೇರು ಹೇಳ್ತಾ ಬಂದ್ರು ನೀರಿನ ಗುಳ್ಳೇ ಜನ್ಮಾ
ಆದರು ಅದನ್ನೆ ಗಟ್ಯಾಗಿ ಹಿಡಿಕೊಂಡು ಸಾಗ್ಯಾದ ನಮ್ಮ ಕರ್ಮ

ಆತ್ಮಾ ಆತ್ಮಾ ಸಾದ್ಸು ಅಂದ್ರು ಅತ್ಮದ ಚಿಂತಿ ಬ್ಯಾಡೋ
ಇರುವ ಬದುಕನೇ ಸಾರ್ಥಕ ಹ್ಯಾಂಗೆ ಮಾಡಿಕೊಬೇಕು ನೋಡೊ

ನ್ಯಾಯದ ದಾರಿ ಸತ್ಯದ ದಾರಿ ಗಟ್ಟಿಯ ದಾರಿ ಹಿಡಿಯೊ
ನನ್ನ ಜನಗಳು ನಾನೂ ಒಂದೇ ಎಂಬುವ ವಿಚಾರ ಪಡಿಯೊ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...