Home / ಕವನ / ಕವಿತೆ / ಕವಿಗಳ ಕಷ್ಟ

ಕವಿಗಳ ಕಷ್ಟ

ಅಯ್ಯೋ ಈ ಕವಿಗಳ ಕೆಲಸ ಬಲು ಕಷ್ಟ
ಹಿಡಿಯಷ್ಟು ಸಾಮಗ್ರಿಯಿಂದ
ಪೂರೈಸಬೇಕು ಎಲ್ಲರ ಇಷ್ಟ
ಇಲ್ಲಿ ಇಲ್ಲದ್ದನ್ನು ಸೃಷ್ಟಿಸಬೇಕು
ಬ್ರಹ್ಮನಿಗೆ ಸವಾಲಿನಂತೆ ಪ್ರತಿ ಸೃಷ್ಟಿಸಬೇಕು
ಕಪ್ಪು ಕರಾಳ ಕುರೂಪದೊಳಗೇ
ಸುಂದರ ಲೋಕ ತೆರೆದು ತೋರಿಸಬೇಕು
ದಿನದಿನವೂ ಹೊಸಹೂಸದನ್ನೇ ಕಾಣಬೇಕು
ಮೂರನೆ ಕಣ್ಣಿಂದ
ಕಂಡದ್ದು ಶಬ್ದಜಾಲದ ಮೋಡಿಯಲ್ಲಿ
ಬಣ್ಣಿಸಬೇಕು ಬಣ್ಣ ಬಣ್ಣ
ಅವರ ಕೈಯಲ್ಲೇನಿದೆ ಬಂಡವಾಳ

ಅದೇ ಹಿಡಿಯಷ್ಟು ಚಿಕ್ಕಿಗಳು
ತಟ್ಟೆಗಳಂಥ ಸೂರ್ಯಚಂದ್ರರು
ಅದೇ ಗಿಡ ಮರ ಬಳ್ಳಿಗಳು
ಅವುಗಳಲೊಂದಿಷ್ಟು ಮೊಗ್ಗು ಕಾಯಿ ಹೀಚು ಹಣ್ಣು
ಅವುಗಳ ಸುತ್ತಾಡುವ ಚಿಟ್ಟೆಗಳು
ಗಿಳಿ ಕೋಗಿಲೆ ಕಾಜಾಣ ಪಾರಿವಾಳ ನವಿಲುಗಳು
ಕೊಳದಲ್ಲಿ ನೀರಿದ್ದರೆ ಅಲ್ಲೊಂದಿಷ್ಟು
ಕಮಲಗಳು ಹಂಸಗಳು (ಈಗೀಗ ಇವು ಕನಸುಗಳು)
ಇವನೆಲ್ಲ ಅಂಗಾಂಗಗಳಲ್ಲಿ
ಮೆತ್ತಿಕೊಂಡ ಮಾನಿನಿಯರು ಚೆಲುವೆಯರು
ಕವಿಗಳ ನಿರಂತರ ಸ್ಪೂರ್ತಿಯ ಚಿಲುಮೆಗಳು
ಇವರ ಬಿಟ್ಟರೆ ಅಥವಾ ಇವಳ ಬಿಟ್ಟರೆ
ಕವಿಗಳಿಗೆ ಉಳಿಯುವುದೇನು ಮಣ್ಣು

ಸ್ವಲ್ಪ ಕಣ್ಣು ಆಚೆ ಹಾಯಿಸಿದರೆ
ನದಿಗಳ ಬಳುಕೋ ಕಡಲಿನ ಮಿಡುಕೋ
ಅದೇ ನೆಲ ಜಲ ಅದೇ ಭೂಮಿ ಬಾನು
ಗಿರಿಸಾನು- ಬಾನಲ್ಲಷ್ಟು ಗಾಳಿಯ ಗೊಂದಲ

ಮೋಡ ಮಿಂಚುಗಳ ಗದ್ದಲ ಅಪರೂಪಕ್ಕೆ
ಅದೇ ಅರುಣೋದಯ ಸೂರ್ಯೋದಯ
ಸೂರ್ಯಾಸ್ತಗಳ ತಿರುಗು ಮುರುಗು
ಇನ್ನೇನಿದೆ ಕವಿಗಳ ಕೈಗಳಲ್ಲಿ ಮಣ್ಣು ಮಸಿ
ಉಪಮೆ ರೂಪಕಾದಿಗಳ ನುಣ್ಣು ನುಸಿ
ವೇದಗಳ ಕಾಲದ ಉಷೆ ಸೂರ್ಯೋಪಾಸನೆ
ಗಿಡಮರಗಳ ನಡುವೆ ಬೆಂಕಿ ತುಪ್ಪದ ವಾಸನೆ
ಅಲ್ಲಿಂದ ಹಿಡಿದು ಇಲ್ಲಿಯವರೆಗೂ
ಕವಿಗಳಿಗೆ ಅವೇ ಸಾಮಗ್ರಿಗಳು
ನಿಸರ್ಗ ನೀಡುವ ಪರಿಕರಣಗಳು
ಅವುಗಳಿಂದಲೇ ಹೆಣೆಯಬೇಕು
ನವರಸಾದಿಗಳ ಕುಣಿಕೆಗಳ
ಮಾನವನ ನೂರಾರು ಭಾವಭಣಿತೆಗಳ
ಅಯ್ಯೋ ಈ ಕವಿಗಳ ಕೆಲಸ ಬಲು ಕಷ್ಟ
ಹಿಡಿಯಷ್ಟು ಅವೇ ಹಳಸಲು ವಸ್ತುಗಳಿಂದ
ಪೂರೈಸಬೇಕು ಎಲ್ಲರ ಇಷ್ಟ

*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...