ಕವಿಗಳ ಕಷ್ಟ

ಅಯ್ಯೋ ಈ ಕವಿಗಳ ಕೆಲಸ ಬಲು ಕಷ್ಟ
ಹಿಡಿಯಷ್ಟು ಸಾಮಗ್ರಿಯಿಂದ
ಪೂರೈಸಬೇಕು ಎಲ್ಲರ ಇಷ್ಟ
ಇಲ್ಲಿ ಇಲ್ಲದ್ದನ್ನು ಸೃಷ್ಟಿಸಬೇಕು
ಬ್ರಹ್ಮನಿಗೆ ಸವಾಲಿನಂತೆ ಪ್ರತಿ ಸೃಷ್ಟಿಸಬೇಕು
ಕಪ್ಪು ಕರಾಳ ಕುರೂಪದೊಳಗೇ
ಸುಂದರ ಲೋಕ ತೆರೆದು ತೋರಿಸಬೇಕು
ದಿನದಿನವೂ ಹೊಸಹೂಸದನ್ನೇ ಕಾಣಬೇಕು
ಮೂರನೆ ಕಣ್ಣಿಂದ
ಕಂಡದ್ದು ಶಬ್ದಜಾಲದ ಮೋಡಿಯಲ್ಲಿ
ಬಣ್ಣಿಸಬೇಕು ಬಣ್ಣ ಬಣ್ಣ
ಅವರ ಕೈಯಲ್ಲೇನಿದೆ ಬಂಡವಾಳ

ಅದೇ ಹಿಡಿಯಷ್ಟು ಚಿಕ್ಕಿಗಳು
ತಟ್ಟೆಗಳಂಥ ಸೂರ್ಯಚಂದ್ರರು
ಅದೇ ಗಿಡ ಮರ ಬಳ್ಳಿಗಳು
ಅವುಗಳಲೊಂದಿಷ್ಟು ಮೊಗ್ಗು ಕಾಯಿ ಹೀಚು ಹಣ್ಣು
ಅವುಗಳ ಸುತ್ತಾಡುವ ಚಿಟ್ಟೆಗಳು
ಗಿಳಿ ಕೋಗಿಲೆ ಕಾಜಾಣ ಪಾರಿವಾಳ ನವಿಲುಗಳು
ಕೊಳದಲ್ಲಿ ನೀರಿದ್ದರೆ ಅಲ್ಲೊಂದಿಷ್ಟು
ಕಮಲಗಳು ಹಂಸಗಳು (ಈಗೀಗ ಇವು ಕನಸುಗಳು)
ಇವನೆಲ್ಲ ಅಂಗಾಂಗಗಳಲ್ಲಿ
ಮೆತ್ತಿಕೊಂಡ ಮಾನಿನಿಯರು ಚೆಲುವೆಯರು
ಕವಿಗಳ ನಿರಂತರ ಸ್ಪೂರ್ತಿಯ ಚಿಲುಮೆಗಳು
ಇವರ ಬಿಟ್ಟರೆ ಅಥವಾ ಇವಳ ಬಿಟ್ಟರೆ
ಕವಿಗಳಿಗೆ ಉಳಿಯುವುದೇನು ಮಣ್ಣು

ಸ್ವಲ್ಪ ಕಣ್ಣು ಆಚೆ ಹಾಯಿಸಿದರೆ
ನದಿಗಳ ಬಳುಕೋ ಕಡಲಿನ ಮಿಡುಕೋ
ಅದೇ ನೆಲ ಜಲ ಅದೇ ಭೂಮಿ ಬಾನು
ಗಿರಿಸಾನು- ಬಾನಲ್ಲಷ್ಟು ಗಾಳಿಯ ಗೊಂದಲ

ಮೋಡ ಮಿಂಚುಗಳ ಗದ್ದಲ ಅಪರೂಪಕ್ಕೆ
ಅದೇ ಅರುಣೋದಯ ಸೂರ್ಯೋದಯ
ಸೂರ್ಯಾಸ್ತಗಳ ತಿರುಗು ಮುರುಗು
ಇನ್ನೇನಿದೆ ಕವಿಗಳ ಕೈಗಳಲ್ಲಿ ಮಣ್ಣು ಮಸಿ
ಉಪಮೆ ರೂಪಕಾದಿಗಳ ನುಣ್ಣು ನುಸಿ
ವೇದಗಳ ಕಾಲದ ಉಷೆ ಸೂರ್ಯೋಪಾಸನೆ
ಗಿಡಮರಗಳ ನಡುವೆ ಬೆಂಕಿ ತುಪ್ಪದ ವಾಸನೆ
ಅಲ್ಲಿಂದ ಹಿಡಿದು ಇಲ್ಲಿಯವರೆಗೂ
ಕವಿಗಳಿಗೆ ಅವೇ ಸಾಮಗ್ರಿಗಳು
ನಿಸರ್ಗ ನೀಡುವ ಪರಿಕರಣಗಳು
ಅವುಗಳಿಂದಲೇ ಹೆಣೆಯಬೇಕು
ನವರಸಾದಿಗಳ ಕುಣಿಕೆಗಳ
ಮಾನವನ ನೂರಾರು ಭಾವಭಣಿತೆಗಳ
ಅಯ್ಯೋ ಈ ಕವಿಗಳ ಕೆಲಸ ಬಲು ಕಷ್ಟ
ಹಿಡಿಯಷ್ಟು ಅವೇ ಹಳಸಲು ವಸ್ತುಗಳಿಂದ
ಪೂರೈಸಬೇಕು ಎಲ್ಲರ ಇಷ್ಟ

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೇಮ
Next post ಮತ್ತದೇ ಪ್ರಶ್ನೆ

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

cheap jordans|wholesale air max|wholesale jordans|wholesale jewelry|wholesale jerseys