Home / ಕವನ / ಕವಿತೆ / ಡಾಲರ್ ಬಿರುಗಾಳಿ

ಡಾಲರ್ ಬಿರುಗಾಳಿ

ಪಶ್ಚಿಮದಿಂದೆದ್ದ ಹೊಸ ಬಿರುಗಾಳಿ
ಪೂರ್ವವನ್ನೆಲ್ಲ ಹಾರಿಸಿ ಧೂಳಿಪಟ ಮಾಡಿದೆ
ಕಾಣುತ್ತಿಲ್ಲ ಅಶ್ವಿನಿ ಭರಣಿ ಕೃತ್ತಿಕೆಯರು
ಮಾಯವಾಗಿವೆ ಧ್ರುವ ನಕ್ಷತ್ರ ಸಪ್ತರ್ಷಿಮಂಡಲ
ಋತವ ಸಾರಿದ ವೇದ ಉಷನಿಷತ್ತುಗಳು
ಕಣ್ಮರೆಯಾದವು ಸದ್ದುಗದ್ದಲದಲ್ಲಿ
ಏಕಪತ್ನೀವ್ರತಸ್ಥ ಬೆಡಗಿಯರ ಬೆಂಬತ್ತಿದ್ದಾನೆ
ಸಹನೆ ತಾಳ್ಮೆ ಎಂದು ಕನವರಿಸಿದ ಧರ್ಮ
ಯಾರಿಗೂ ಬೇಡವಾದ ಜಡ ಕರ್ಮ
ಅಹಿಂಸೆ ಪರಧರ್ಮ ಎಂದ ಸಿದ್ಧಾಂತಗಳು
ಕಾಲು ಕಸ ಕೊಳೆತ ತಿಪ್ಪೆಗಳು
ಆಧ್ಯಾತ್ಮ ವೈರಾಗ್ಯ ತ್ಯಾಗ ಭಕ್ತಿ
ಜಪ ತಪಾದಿಗಳು ಪಾಚಿ ಗಟ್ಟಿಹೋಗಿವೆ
ಪಾತಿವ್ರತ್ಯ ಸೋದರ ಪ್ರೇಮ ಸ್ನೇಹ ವಾತ್ಸಲ್ಯ
ಮಾತಾಪಿತೃ ಗುರು ಭಕ್ತಿಗಳು
ಮಾನವೀಯ ಸಂಬಂಧಗಳು
ಅಂತರಂಗ ಶುದ್ದಿ ಆಚಾರ ವಿಚಾರ
ಎಲ್ಲಾ ಎಲ್ಲಾ ಈ ಬಿರುಗಾಳಿಯಲ್ಲಿ
ತೂರಿ ಹೋಗಿವೆ
ಬಣ್ಣ ಬಣ್ಣದ ಗರಿಗಳ ಜಾನಪದ ಹಕ್ಕಿಗಳು
ಅನಾದಿ ಕಾಲದಿಂದ ನಮ್ಮಂಗಳದಲ್ಲಿ
ಆಡಿಕೊಂಡಿದ್ದವು
ಅವು ಬೆದರಿ ಕಂಗಾಲಾಗಿ
ಆಕಾಶಕ್ಕೆ ಹಾರಿದವು
ನೀತಿ ನಿಯಮ ಸಂಯಮ ಸೌಜನ್ಯಗಳ
ದಾರಗಳು ಫಟ್ ಫಟ್ಟೆಂದು ಕಿತ್ತಿ ಹೋದವು
ದೇಶೀ ಊಟ ಪಾಟ ಉಡಿಗೆ ತೊಡಿಗೆಗಳು
ಅಯ್ಯೋ ಪರದೇಶಿಯಾದವು
ರೋಡ್ ರೋಲರ್ ಡಾಲರ್ ದಾಳಿಯಡಿ
ಕೋಮಲಭಾವಗಳ ಹಸುಗೂಸು ಕಂದಮ್ಮಗಳು
ಪುಟಾಣಿ ಹೂಗಿಡಗಳು ಮೊಳಕೆಗಳು
ಅಪ್ಪಚ್ಚಿಯಾಗಿ ಹೋದವು
ನಮ್ಮದೆಯು ಹೆಮ್ಮೆಯಿಂದ ಬೀಗುತ್ತಿದ್ದ
ಇತಿಹಾಸ ಪುರುಷರು ಅವರ ಆದರ್ಶಗಳು
ತ್ಯಾಗ ಬಲಿದಾನ ಸೇವೆಗಳ ಕತೆಗಳು
ವೀರ ವಿದ್ಯುನ್ಮಣಿಗಳು ಧೀರ ವಿದ್ವನ್ಮಣಿಗಳು
ದಾಸರು ಶರಣರು ಸಂತರು
ಕವಿವರೇಣ್ಯರ ದಿವ್ಯವಾಣಿಗಳು
ಶಿಲ್ಪ ಚಿತ್ರ ನಾಟ್ಯಾದಿ ಕಲಾಕುಸುಮಗಳು
ನೆಮ್ಮದಿಯ ಗೂಡಿನಲ್ಲಿ ಬೆಚ್ಚಗಿದ್ದ
ಹಕ್ಕಿಗಳು ಎಲ್ಲ ಎಲ್ಲ ಮನದ ಪರದೆಯಿಂದ ಮಾಯವಾಗಿವೆ
ಎಂಥೆಂಥ ಚಂಡಮಾರುತಗಳಿಗೂ
ಅಲ್ಲಾಡದ ಗಾಜಿನ ಬುರುಡೆಯೊಳಗಿನ
ನಂದಾ ದೀಪದಂತಿದ್ದ ಆತ್ಮ ಚಿಂತನ
ಪರಲೋಕ ಧ್ಯಾನದ ಹಣತೆ
ನೆಲಕ್ಕುರುಳಿ ಹೋಗಿ
ಕಮಟು ಹೊಗೆ ವಾಸನೆ ಮಾತ್ರ
ಗಾಳಿಯಲ್ಲಿ ಹರಡಿ ಕರಗಿ ಹೋಗಿದೆ
ಮಾನವರೆಲ್ಲ ಬುರುಗು ಭೋಗದ
ಮೆರಗು ಮಾಯೆಯ ನೋಟು ಗಿಲೀಟಿನ
ಷೋಕಿ ಸುಖಲೋಲುಪ್ತಿಯ ದಟ್ಟ
ಪಡುವಲ ಬಿರುಗಾಳಿಗೆ ಸಿಕ್ಕು
ತರಗೆಲೆಗಳಾಗಿದ್ದಾರೆ….
ಓಡಾಡುವ ಬೆಂತರಗಳಾಗಿದ್ದಾರೆ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...