Home / ಕವನ / ಕವಿತೆ / ಡಾಲರ್ ಬಿರುಗಾಳಿ

ಡಾಲರ್ ಬಿರುಗಾಳಿ

ಪಶ್ಚಿಮದಿಂದೆದ್ದ ಹೊಸ ಬಿರುಗಾಳಿ
ಪೂರ್ವವನ್ನೆಲ್ಲ ಹಾರಿಸಿ ಧೂಳಿಪಟ ಮಾಡಿದೆ
ಕಾಣುತ್ತಿಲ್ಲ ಅಶ್ವಿನಿ ಭರಣಿ ಕೃತ್ತಿಕೆಯರು
ಮಾಯವಾಗಿವೆ ಧ್ರುವ ನಕ್ಷತ್ರ ಸಪ್ತರ್ಷಿಮಂಡಲ
ಋತವ ಸಾರಿದ ವೇದ ಉಷನಿಷತ್ತುಗಳು
ಕಣ್ಮರೆಯಾದವು ಸದ್ದುಗದ್ದಲದಲ್ಲಿ
ಏಕಪತ್ನೀವ್ರತಸ್ಥ ಬೆಡಗಿಯರ ಬೆಂಬತ್ತಿದ್ದಾನೆ
ಸಹನೆ ತಾಳ್ಮೆ ಎಂದು ಕನವರಿಸಿದ ಧರ್ಮ
ಯಾರಿಗೂ ಬೇಡವಾದ ಜಡ ಕರ್ಮ
ಅಹಿಂಸೆ ಪರಧರ್ಮ ಎಂದ ಸಿದ್ಧಾಂತಗಳು
ಕಾಲು ಕಸ ಕೊಳೆತ ತಿಪ್ಪೆಗಳು
ಆಧ್ಯಾತ್ಮ ವೈರಾಗ್ಯ ತ್ಯಾಗ ಭಕ್ತಿ
ಜಪ ತಪಾದಿಗಳು ಪಾಚಿ ಗಟ್ಟಿಹೋಗಿವೆ
ಪಾತಿವ್ರತ್ಯ ಸೋದರ ಪ್ರೇಮ ಸ್ನೇಹ ವಾತ್ಸಲ್ಯ
ಮಾತಾಪಿತೃ ಗುರು ಭಕ್ತಿಗಳು
ಮಾನವೀಯ ಸಂಬಂಧಗಳು
ಅಂತರಂಗ ಶುದ್ದಿ ಆಚಾರ ವಿಚಾರ
ಎಲ್ಲಾ ಎಲ್ಲಾ ಈ ಬಿರುಗಾಳಿಯಲ್ಲಿ
ತೂರಿ ಹೋಗಿವೆ
ಬಣ್ಣ ಬಣ್ಣದ ಗರಿಗಳ ಜಾನಪದ ಹಕ್ಕಿಗಳು
ಅನಾದಿ ಕಾಲದಿಂದ ನಮ್ಮಂಗಳದಲ್ಲಿ
ಆಡಿಕೊಂಡಿದ್ದವು
ಅವು ಬೆದರಿ ಕಂಗಾಲಾಗಿ
ಆಕಾಶಕ್ಕೆ ಹಾರಿದವು
ನೀತಿ ನಿಯಮ ಸಂಯಮ ಸೌಜನ್ಯಗಳ
ದಾರಗಳು ಫಟ್ ಫಟ್ಟೆಂದು ಕಿತ್ತಿ ಹೋದವು
ದೇಶೀ ಊಟ ಪಾಟ ಉಡಿಗೆ ತೊಡಿಗೆಗಳು
ಅಯ್ಯೋ ಪರದೇಶಿಯಾದವು
ರೋಡ್ ರೋಲರ್ ಡಾಲರ್ ದಾಳಿಯಡಿ
ಕೋಮಲಭಾವಗಳ ಹಸುಗೂಸು ಕಂದಮ್ಮಗಳು
ಪುಟಾಣಿ ಹೂಗಿಡಗಳು ಮೊಳಕೆಗಳು
ಅಪ್ಪಚ್ಚಿಯಾಗಿ ಹೋದವು
ನಮ್ಮದೆಯು ಹೆಮ್ಮೆಯಿಂದ ಬೀಗುತ್ತಿದ್ದ
ಇತಿಹಾಸ ಪುರುಷರು ಅವರ ಆದರ್ಶಗಳು
ತ್ಯಾಗ ಬಲಿದಾನ ಸೇವೆಗಳ ಕತೆಗಳು
ವೀರ ವಿದ್ಯುನ್ಮಣಿಗಳು ಧೀರ ವಿದ್ವನ್ಮಣಿಗಳು
ದಾಸರು ಶರಣರು ಸಂತರು
ಕವಿವರೇಣ್ಯರ ದಿವ್ಯವಾಣಿಗಳು
ಶಿಲ್ಪ ಚಿತ್ರ ನಾಟ್ಯಾದಿ ಕಲಾಕುಸುಮಗಳು
ನೆಮ್ಮದಿಯ ಗೂಡಿನಲ್ಲಿ ಬೆಚ್ಚಗಿದ್ದ
ಹಕ್ಕಿಗಳು ಎಲ್ಲ ಎಲ್ಲ ಮನದ ಪರದೆಯಿಂದ ಮಾಯವಾಗಿವೆ
ಎಂಥೆಂಥ ಚಂಡಮಾರುತಗಳಿಗೂ
ಅಲ್ಲಾಡದ ಗಾಜಿನ ಬುರುಡೆಯೊಳಗಿನ
ನಂದಾ ದೀಪದಂತಿದ್ದ ಆತ್ಮ ಚಿಂತನ
ಪರಲೋಕ ಧ್ಯಾನದ ಹಣತೆ
ನೆಲಕ್ಕುರುಳಿ ಹೋಗಿ
ಕಮಟು ಹೊಗೆ ವಾಸನೆ ಮಾತ್ರ
ಗಾಳಿಯಲ್ಲಿ ಹರಡಿ ಕರಗಿ ಹೋಗಿದೆ
ಮಾನವರೆಲ್ಲ ಬುರುಗು ಭೋಗದ
ಮೆರಗು ಮಾಯೆಯ ನೋಟು ಗಿಲೀಟಿನ
ಷೋಕಿ ಸುಖಲೋಲುಪ್ತಿಯ ದಟ್ಟ
ಪಡುವಲ ಬಿರುಗಾಳಿಗೆ ಸಿಕ್ಕು
ತರಗೆಲೆಗಳಾಗಿದ್ದಾರೆ….
ಓಡಾಡುವ ಬೆಂತರಗಳಾಗಿದ್ದಾರೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...