Home / ಕವನ / ಕವಿತೆ / ಡಾಲರ್ ಬಿರುಗಾಳಿ

ಡಾಲರ್ ಬಿರುಗಾಳಿ

ಪಶ್ಚಿಮದಿಂದೆದ್ದ ಹೊಸ ಬಿರುಗಾಳಿ
ಪೂರ್ವವನ್ನೆಲ್ಲ ಹಾರಿಸಿ ಧೂಳಿಪಟ ಮಾಡಿದೆ
ಕಾಣುತ್ತಿಲ್ಲ ಅಶ್ವಿನಿ ಭರಣಿ ಕೃತ್ತಿಕೆಯರು
ಮಾಯವಾಗಿವೆ ಧ್ರುವ ನಕ್ಷತ್ರ ಸಪ್ತರ್ಷಿಮಂಡಲ
ಋತವ ಸಾರಿದ ವೇದ ಉಷನಿಷತ್ತುಗಳು
ಕಣ್ಮರೆಯಾದವು ಸದ್ದುಗದ್ದಲದಲ್ಲಿ
ಏಕಪತ್ನೀವ್ರತಸ್ಥ ಬೆಡಗಿಯರ ಬೆಂಬತ್ತಿದ್ದಾನೆ
ಸಹನೆ ತಾಳ್ಮೆ ಎಂದು ಕನವರಿಸಿದ ಧರ್ಮ
ಯಾರಿಗೂ ಬೇಡವಾದ ಜಡ ಕರ್ಮ
ಅಹಿಂಸೆ ಪರಧರ್ಮ ಎಂದ ಸಿದ್ಧಾಂತಗಳು
ಕಾಲು ಕಸ ಕೊಳೆತ ತಿಪ್ಪೆಗಳು
ಆಧ್ಯಾತ್ಮ ವೈರಾಗ್ಯ ತ್ಯಾಗ ಭಕ್ತಿ
ಜಪ ತಪಾದಿಗಳು ಪಾಚಿ ಗಟ್ಟಿಹೋಗಿವೆ
ಪಾತಿವ್ರತ್ಯ ಸೋದರ ಪ್ರೇಮ ಸ್ನೇಹ ವಾತ್ಸಲ್ಯ
ಮಾತಾಪಿತೃ ಗುರು ಭಕ್ತಿಗಳು
ಮಾನವೀಯ ಸಂಬಂಧಗಳು
ಅಂತರಂಗ ಶುದ್ದಿ ಆಚಾರ ವಿಚಾರ
ಎಲ್ಲಾ ಎಲ್ಲಾ ಈ ಬಿರುಗಾಳಿಯಲ್ಲಿ
ತೂರಿ ಹೋಗಿವೆ
ಬಣ್ಣ ಬಣ್ಣದ ಗರಿಗಳ ಜಾನಪದ ಹಕ್ಕಿಗಳು
ಅನಾದಿ ಕಾಲದಿಂದ ನಮ್ಮಂಗಳದಲ್ಲಿ
ಆಡಿಕೊಂಡಿದ್ದವು
ಅವು ಬೆದರಿ ಕಂಗಾಲಾಗಿ
ಆಕಾಶಕ್ಕೆ ಹಾರಿದವು
ನೀತಿ ನಿಯಮ ಸಂಯಮ ಸೌಜನ್ಯಗಳ
ದಾರಗಳು ಫಟ್ ಫಟ್ಟೆಂದು ಕಿತ್ತಿ ಹೋದವು
ದೇಶೀ ಊಟ ಪಾಟ ಉಡಿಗೆ ತೊಡಿಗೆಗಳು
ಅಯ್ಯೋ ಪರದೇಶಿಯಾದವು
ರೋಡ್ ರೋಲರ್ ಡಾಲರ್ ದಾಳಿಯಡಿ
ಕೋಮಲಭಾವಗಳ ಹಸುಗೂಸು ಕಂದಮ್ಮಗಳು
ಪುಟಾಣಿ ಹೂಗಿಡಗಳು ಮೊಳಕೆಗಳು
ಅಪ್ಪಚ್ಚಿಯಾಗಿ ಹೋದವು
ನಮ್ಮದೆಯು ಹೆಮ್ಮೆಯಿಂದ ಬೀಗುತ್ತಿದ್ದ
ಇತಿಹಾಸ ಪುರುಷರು ಅವರ ಆದರ್ಶಗಳು
ತ್ಯಾಗ ಬಲಿದಾನ ಸೇವೆಗಳ ಕತೆಗಳು
ವೀರ ವಿದ್ಯುನ್ಮಣಿಗಳು ಧೀರ ವಿದ್ವನ್ಮಣಿಗಳು
ದಾಸರು ಶರಣರು ಸಂತರು
ಕವಿವರೇಣ್ಯರ ದಿವ್ಯವಾಣಿಗಳು
ಶಿಲ್ಪ ಚಿತ್ರ ನಾಟ್ಯಾದಿ ಕಲಾಕುಸುಮಗಳು
ನೆಮ್ಮದಿಯ ಗೂಡಿನಲ್ಲಿ ಬೆಚ್ಚಗಿದ್ದ
ಹಕ್ಕಿಗಳು ಎಲ್ಲ ಎಲ್ಲ ಮನದ ಪರದೆಯಿಂದ ಮಾಯವಾಗಿವೆ
ಎಂಥೆಂಥ ಚಂಡಮಾರುತಗಳಿಗೂ
ಅಲ್ಲಾಡದ ಗಾಜಿನ ಬುರುಡೆಯೊಳಗಿನ
ನಂದಾ ದೀಪದಂತಿದ್ದ ಆತ್ಮ ಚಿಂತನ
ಪರಲೋಕ ಧ್ಯಾನದ ಹಣತೆ
ನೆಲಕ್ಕುರುಳಿ ಹೋಗಿ
ಕಮಟು ಹೊಗೆ ವಾಸನೆ ಮಾತ್ರ
ಗಾಳಿಯಲ್ಲಿ ಹರಡಿ ಕರಗಿ ಹೋಗಿದೆ
ಮಾನವರೆಲ್ಲ ಬುರುಗು ಭೋಗದ
ಮೆರಗು ಮಾಯೆಯ ನೋಟು ಗಿಲೀಟಿನ
ಷೋಕಿ ಸುಖಲೋಲುಪ್ತಿಯ ದಟ್ಟ
ಪಡುವಲ ಬಿರುಗಾಳಿಗೆ ಸಿಕ್ಕು
ತರಗೆಲೆಗಳಾಗಿದ್ದಾರೆ….
ಓಡಾಡುವ ಬೆಂತರಗಳಾಗಿದ್ದಾರೆ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...