ದಿನವು ಸಂಧಿಸಿ ಹೋಗುತದೆ ಮರುಳೆ

ದಿನವು ಸಂಧಿಸಿ ಹೋಗುತದೆ ಮರುಳೆ
ಘನಮೂರ್ತಿನಾಮವನು ನೆನಹಿಕೋ ಮೂರ್ಖಾ
ಕನಸಿನಂತೆ ಶರೀರ ಮನವೆಂಬ ಆಲಯದಿ
ಅನುದಿನ ಜೀವನೇಶ್ವರನಿರುವತನಕಾ ||ಪ||

ಧರೆಯೊಳಗೆ ನರದೇಹ ಸ್ಥಿರವಲ್ಲ ಸಹಜವಿದು
ಇರುತಿಹುದು ನೀರಮೇಲಿನ ಗುಳ್ಳೆಯಂತೆ
ಕರಗಿಹೋದರೆ ಬರುವದು ಈ ಪರಿ ಕಷ್ಟ
ಕರುಣಬಲದಿಂದ ಅರಿತುಕೊಳ್ಳಯ್ಯಾ ||೧||

ಪೊಡವಿಯೊಳಗೆ ಛಂದ ಮೃಡನ ತಂತ್ರದ ಗೊಂಬೆ
ಹಿಡಿದಾಡಿಸುತ್ತಲಿಹ ಗುರುಸೂತ್ರದಿಂದ
ಒಡೆಯನಂತಃಕರುಣ ತಪ್ಪಿದರೆ ಯಮಗಾಳಿ
ಬಡಿದು ಹೋಗಿಹ ಸೊಡರಿನ ತೆರನಂತೆ ||೨||

ಕೆಸರೊಳಗೆ ಕಮಲ ಉದ್ಭವಿಸಿ ಸುವಾಸನೆಯು
ಹಸನಾಗಿ ದೆಸೆದೆಸೆಗೆ ಎಸಗುತಿಹುದು
ಮುಸುಕಿರ್ದ ಮಾಯಾಂಧಕಾರವನು ಬೆಳಗಿಸುವ
ಶಿಶುರೇಶನ ಹೊಂದಿ ಪರಮಸುಖವ ಬಯಸೋ ||೩||

*****

:

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೪
Next post ನಗೆ ಡಂಗುರ – ೧೫

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys