Home / ಕವನ / ಕವಿತೆ / ಸಂಚಲನ

ಸಂಚಲನ

ಈ ನೆಲ ಬರಡಾಗಿ ಬಿದ್ದಿದೆ ಜಡವಾಗಿ
ಇದನ್ನೆಬ್ಬಿಸಿ ಹಸಿರ ಚಿಗುರಿಸುವುದು ಹೇಗೆ?
ಈ ಗಿಡಗಳು ಬಾಡಿ ಬರಲಾಗಿವೆ
ಇವು ಹೂಗಳ ಬಿಟ್ಟು ಕಾಯಿ ಹಣ್ಣುಗಳಾಗಿ
ಸಫಲವಾಗುವುದು ಹೇಗೆ?

ಮಾನವರ ನಡುವೆ ಗೋಡೆ ಗೋಡೆಗಳು
ಸಂದುಗೊಂದುಗಳಲ್ಲೇ ನೋಟಗಳು
ಇವನೆಲ್ಲ ಕೆಡವಿ ಎಲ್ಲರೂ ಒಂದೇ
ಆಕಾಶ ನೋಡುತ್ತ ಬಯಲಲ್ಲಿ ಹಾಡುತ್ತ
ಕುಣಿಯುವಂತೆ ಮಾಡುವುದು ಹೇಗೆ?

ಈ ಬಂಡಿ ಮುಂದೆ ಹೋಗಲೇ ಒಲ್ಲದು
ಎತ್ತುಗಳು ನೆಲಕಚ್ಚಿ ಬಿದ್ದಿದೆ
ಇವುಗಳ ಬಾಲ ತಿರುವಿ ಮೇಲಕ್ಕೆಬ್ಬಿಸಿ
ಬಂಡಿ ಮುಂದೆ ಹೋಗಲು
ಎಳೆಯುವಂತೆ ಮಾಡುವುದು ಹೇಗೆ?

ಈ ಕಣ್ಣುಗಳು ಮತ ಧರ್ಮಗಳ
ಬಣ್ಣ ಗಾಜುಗಳಿಂದ ಅಲಂಕೃತವಾಗಿವೆ
ನೋಡಿದ್ದೆಲ್ಲ ಬಣ್ಣ ಬಣ್ಣ
ಗಾಜುಗಳ ಒಡೆದು ವರ್ಣರಹಿತವಾದ
ನಿಜ ಮಾನವನ ಎದೆಯಾಗಸವ
ನೋಡುವಂತೆ ಮಾಡುವುದು ಹೇಗೆ?

ಈ ಬಳ್ಳಿಗಳು ಅಲ್ಲಲ್ಲಿಗೆ ಅಲ್ಲಲ್ಲಿಗೆ
ಮುರುಟಿಕೊಂಡು ಸಂದುಗೊಂದುಗಳಲ್ಲಿ
ತೂರಿಕೊಳ್ಳುತ್ತಿವೆ ಕತ್ತಲಲ್ಲೇ ಸುತ್ತುತ್ತಿವೆ
ಇವು ಗಾಳಿ ಬೆಳಕುಗಳಿಗೆ
ಚಾಚಿಕೊಂಡು ಅಗಲ ಉದ್ದವಾಗಿ
ಹಬ್ಬುವಂತೆ ಮಾಡುವುದು ಹೇಗೆ?

ಈ ಹುಳುಗಳು ತಮ್ಮ ಸುತ್ತಲೇ ಸುತ್ತುತ್ತ
ತಮ್ಮ ಬಾಲಗಳ ತಾವೇ ನುಂಗುತ್ತ
ಒದ್ದಾಡುವುದ ಬಿಡಿಸಿ
ಮೈಸೆಟಸಿ ನೆಟ್ಟಗೆ ಮುಂದಕ್ಕೆ
ಸಾಗುವಂತೆ ಮಾಡುವುದು ಹೇಗೆ?

ಬಕಪಕ್ಷಿಗಳು ತೇಲುಗಣ್ಣು ಮಾಡಿಕೊಂಡು
ಗದ್ದುಗೆಯೇರಿ ಕುಳಿತುಕೊಂಡು
ಮೇಲುಮೇಲಕ್ಕೆ ಕೈ ಮಾಡಿ ಗುಂಡಿಗಳಲ್ಲಿ
ಎಲ್ಲ ಮೀನುಗಳ ಬಳಿಗೆ ಸೇರಿಸಿಕೊಂಡು
ತೇಲಾಡುವಂತೆ ಮಾಡುತ್ತಿವೆ
ಅವುಗಳನ್ನು ಬಿಡಿಸಿ ಹಾಯಾಗಿ
ಸಾಗರದಪಾರ ತಿಳಿ ಜಲದ ಮೇಲೆ
ಲೀಲಾಜಾಲವಾಗಿ ಈಜಾಡುವಂತೆ
ಮಾಡುವುದು ಹೇಗೆ?

ಕಟ್ಟಿದ ಸಂಕೋಲೆಗಳಿಂದ
ಕೆಸರೂಳಗೆ ಕಾಲುಗಳ ಕೀಳಲಾರದೆ
ಕೀಳಲು ಸೆಣಸಾಡುತ್ತ ಎಳೆದಾಡುವ
ಈ ಪ್ರಾಣಿಗಳ ಬೇಡಿಗಳ ಬಿಡಿಸಿ
ಗಟ್ಟಿ ನೆಲದ ಮೇಲೆ
ಓಡಾಡುವಂತೆ ಮಾಡುವುದು ಹೇಗೆ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...