Home / ಕವನ / ಕವಿತೆ / ಸಂಚಲನ

ಸಂಚಲನ

ಈ ನೆಲ ಬರಡಾಗಿ ಬಿದ್ದಿದೆ ಜಡವಾಗಿ
ಇದನ್ನೆಬ್ಬಿಸಿ ಹಸಿರ ಚಿಗುರಿಸುವುದು ಹೇಗೆ?
ಈ ಗಿಡಗಳು ಬಾಡಿ ಬರಲಾಗಿವೆ
ಇವು ಹೂಗಳ ಬಿಟ್ಟು ಕಾಯಿ ಹಣ್ಣುಗಳಾಗಿ
ಸಫಲವಾಗುವುದು ಹೇಗೆ?

ಮಾನವರ ನಡುವೆ ಗೋಡೆ ಗೋಡೆಗಳು
ಸಂದುಗೊಂದುಗಳಲ್ಲೇ ನೋಟಗಳು
ಇವನೆಲ್ಲ ಕೆಡವಿ ಎಲ್ಲರೂ ಒಂದೇ
ಆಕಾಶ ನೋಡುತ್ತ ಬಯಲಲ್ಲಿ ಹಾಡುತ್ತ
ಕುಣಿಯುವಂತೆ ಮಾಡುವುದು ಹೇಗೆ?

ಈ ಬಂಡಿ ಮುಂದೆ ಹೋಗಲೇ ಒಲ್ಲದು
ಎತ್ತುಗಳು ನೆಲಕಚ್ಚಿ ಬಿದ್ದಿದೆ
ಇವುಗಳ ಬಾಲ ತಿರುವಿ ಮೇಲಕ್ಕೆಬ್ಬಿಸಿ
ಬಂಡಿ ಮುಂದೆ ಹೋಗಲು
ಎಳೆಯುವಂತೆ ಮಾಡುವುದು ಹೇಗೆ?

ಈ ಕಣ್ಣುಗಳು ಮತ ಧರ್ಮಗಳ
ಬಣ್ಣ ಗಾಜುಗಳಿಂದ ಅಲಂಕೃತವಾಗಿವೆ
ನೋಡಿದ್ದೆಲ್ಲ ಬಣ್ಣ ಬಣ್ಣ
ಗಾಜುಗಳ ಒಡೆದು ವರ್ಣರಹಿತವಾದ
ನಿಜ ಮಾನವನ ಎದೆಯಾಗಸವ
ನೋಡುವಂತೆ ಮಾಡುವುದು ಹೇಗೆ?

ಈ ಬಳ್ಳಿಗಳು ಅಲ್ಲಲ್ಲಿಗೆ ಅಲ್ಲಲ್ಲಿಗೆ
ಮುರುಟಿಕೊಂಡು ಸಂದುಗೊಂದುಗಳಲ್ಲಿ
ತೂರಿಕೊಳ್ಳುತ್ತಿವೆ ಕತ್ತಲಲ್ಲೇ ಸುತ್ತುತ್ತಿವೆ
ಇವು ಗಾಳಿ ಬೆಳಕುಗಳಿಗೆ
ಚಾಚಿಕೊಂಡು ಅಗಲ ಉದ್ದವಾಗಿ
ಹಬ್ಬುವಂತೆ ಮಾಡುವುದು ಹೇಗೆ?

ಈ ಹುಳುಗಳು ತಮ್ಮ ಸುತ್ತಲೇ ಸುತ್ತುತ್ತ
ತಮ್ಮ ಬಾಲಗಳ ತಾವೇ ನುಂಗುತ್ತ
ಒದ್ದಾಡುವುದ ಬಿಡಿಸಿ
ಮೈಸೆಟಸಿ ನೆಟ್ಟಗೆ ಮುಂದಕ್ಕೆ
ಸಾಗುವಂತೆ ಮಾಡುವುದು ಹೇಗೆ?

ಬಕಪಕ್ಷಿಗಳು ತೇಲುಗಣ್ಣು ಮಾಡಿಕೊಂಡು
ಗದ್ದುಗೆಯೇರಿ ಕುಳಿತುಕೊಂಡು
ಮೇಲುಮೇಲಕ್ಕೆ ಕೈ ಮಾಡಿ ಗುಂಡಿಗಳಲ್ಲಿ
ಎಲ್ಲ ಮೀನುಗಳ ಬಳಿಗೆ ಸೇರಿಸಿಕೊಂಡು
ತೇಲಾಡುವಂತೆ ಮಾಡುತ್ತಿವೆ
ಅವುಗಳನ್ನು ಬಿಡಿಸಿ ಹಾಯಾಗಿ
ಸಾಗರದಪಾರ ತಿಳಿ ಜಲದ ಮೇಲೆ
ಲೀಲಾಜಾಲವಾಗಿ ಈಜಾಡುವಂತೆ
ಮಾಡುವುದು ಹೇಗೆ?

ಕಟ್ಟಿದ ಸಂಕೋಲೆಗಳಿಂದ
ಕೆಸರೂಳಗೆ ಕಾಲುಗಳ ಕೀಳಲಾರದೆ
ಕೀಳಲು ಸೆಣಸಾಡುತ್ತ ಎಳೆದಾಡುವ
ಈ ಪ್ರಾಣಿಗಳ ಬೇಡಿಗಳ ಬಿಡಿಸಿ
ಗಟ್ಟಿ ನೆಲದ ಮೇಲೆ
ಓಡಾಡುವಂತೆ ಮಾಡುವುದು ಹೇಗೆ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...