Home / ಕವನ / ಕವಿತೆ / ಸಂಚಲನ

ಸಂಚಲನ

ಈ ನೆಲ ಬರಡಾಗಿ ಬಿದ್ದಿದೆ ಜಡವಾಗಿ
ಇದನ್ನೆಬ್ಬಿಸಿ ಹಸಿರ ಚಿಗುರಿಸುವುದು ಹೇಗೆ?
ಈ ಗಿಡಗಳು ಬಾಡಿ ಬರಲಾಗಿವೆ
ಇವು ಹೂಗಳ ಬಿಟ್ಟು ಕಾಯಿ ಹಣ್ಣುಗಳಾಗಿ
ಸಫಲವಾಗುವುದು ಹೇಗೆ?

ಮಾನವರ ನಡುವೆ ಗೋಡೆ ಗೋಡೆಗಳು
ಸಂದುಗೊಂದುಗಳಲ್ಲೇ ನೋಟಗಳು
ಇವನೆಲ್ಲ ಕೆಡವಿ ಎಲ್ಲರೂ ಒಂದೇ
ಆಕಾಶ ನೋಡುತ್ತ ಬಯಲಲ್ಲಿ ಹಾಡುತ್ತ
ಕುಣಿಯುವಂತೆ ಮಾಡುವುದು ಹೇಗೆ?

ಈ ಬಂಡಿ ಮುಂದೆ ಹೋಗಲೇ ಒಲ್ಲದು
ಎತ್ತುಗಳು ನೆಲಕಚ್ಚಿ ಬಿದ್ದಿದೆ
ಇವುಗಳ ಬಾಲ ತಿರುವಿ ಮೇಲಕ್ಕೆಬ್ಬಿಸಿ
ಬಂಡಿ ಮುಂದೆ ಹೋಗಲು
ಎಳೆಯುವಂತೆ ಮಾಡುವುದು ಹೇಗೆ?

ಈ ಕಣ್ಣುಗಳು ಮತ ಧರ್ಮಗಳ
ಬಣ್ಣ ಗಾಜುಗಳಿಂದ ಅಲಂಕೃತವಾಗಿವೆ
ನೋಡಿದ್ದೆಲ್ಲ ಬಣ್ಣ ಬಣ್ಣ
ಗಾಜುಗಳ ಒಡೆದು ವರ್ಣರಹಿತವಾದ
ನಿಜ ಮಾನವನ ಎದೆಯಾಗಸವ
ನೋಡುವಂತೆ ಮಾಡುವುದು ಹೇಗೆ?

ಈ ಬಳ್ಳಿಗಳು ಅಲ್ಲಲ್ಲಿಗೆ ಅಲ್ಲಲ್ಲಿಗೆ
ಮುರುಟಿಕೊಂಡು ಸಂದುಗೊಂದುಗಳಲ್ಲಿ
ತೂರಿಕೊಳ್ಳುತ್ತಿವೆ ಕತ್ತಲಲ್ಲೇ ಸುತ್ತುತ್ತಿವೆ
ಇವು ಗಾಳಿ ಬೆಳಕುಗಳಿಗೆ
ಚಾಚಿಕೊಂಡು ಅಗಲ ಉದ್ದವಾಗಿ
ಹಬ್ಬುವಂತೆ ಮಾಡುವುದು ಹೇಗೆ?

ಈ ಹುಳುಗಳು ತಮ್ಮ ಸುತ್ತಲೇ ಸುತ್ತುತ್ತ
ತಮ್ಮ ಬಾಲಗಳ ತಾವೇ ನುಂಗುತ್ತ
ಒದ್ದಾಡುವುದ ಬಿಡಿಸಿ
ಮೈಸೆಟಸಿ ನೆಟ್ಟಗೆ ಮುಂದಕ್ಕೆ
ಸಾಗುವಂತೆ ಮಾಡುವುದು ಹೇಗೆ?

ಬಕಪಕ್ಷಿಗಳು ತೇಲುಗಣ್ಣು ಮಾಡಿಕೊಂಡು
ಗದ್ದುಗೆಯೇರಿ ಕುಳಿತುಕೊಂಡು
ಮೇಲುಮೇಲಕ್ಕೆ ಕೈ ಮಾಡಿ ಗುಂಡಿಗಳಲ್ಲಿ
ಎಲ್ಲ ಮೀನುಗಳ ಬಳಿಗೆ ಸೇರಿಸಿಕೊಂಡು
ತೇಲಾಡುವಂತೆ ಮಾಡುತ್ತಿವೆ
ಅವುಗಳನ್ನು ಬಿಡಿಸಿ ಹಾಯಾಗಿ
ಸಾಗರದಪಾರ ತಿಳಿ ಜಲದ ಮೇಲೆ
ಲೀಲಾಜಾಲವಾಗಿ ಈಜಾಡುವಂತೆ
ಮಾಡುವುದು ಹೇಗೆ?

ಕಟ್ಟಿದ ಸಂಕೋಲೆಗಳಿಂದ
ಕೆಸರೂಳಗೆ ಕಾಲುಗಳ ಕೀಳಲಾರದೆ
ಕೀಳಲು ಸೆಣಸಾಡುತ್ತ ಎಳೆದಾಡುವ
ಈ ಪ್ರಾಣಿಗಳ ಬೇಡಿಗಳ ಬಿಡಿಸಿ
ಗಟ್ಟಿ ನೆಲದ ಮೇಲೆ
ಓಡಾಡುವಂತೆ ಮಾಡುವುದು ಹೇಗೆ?
*****

Tagged:

Leave a Reply

Your email address will not be published. Required fields are marked *

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...