ಹುರಮುಂಜಗೇಡಿ

ಹುರಮುಂಜಗೇಡಿ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ ತಮಗೆ ಬೇಕಾದ ಸಾಮಾನು ಕೊಂಡುಕೊಳ್ಳುವುದು ವಾಡಿಕೆ. ದುಡ್ಡು ತಂದು ವ್ಯಾಪಾರ ಮಾಡಿಕೊಳ್ಳುವವರು ಬಹಳ ಕಡಿಮೆ.

ಹಬ್ಬ ಹುಣ್ಣಿಮೆ ದಿವಸ ಇಲ್ಲವೆ ಸೋಮವಾರ ದಿವಸ ಗಿರಾಕಿಗಳ ಗೊಂದಲ ಹೆಚ್ಚಿಗಿರುತ್ತದೆ. ಸರತಿಯ ಮೇಲೆ ಗಿರಾಕಿಗಳು ವ್ಯಾಪಾರ  ಗಿಟ್ಟಿಸಬೇಕಾಗುತ್ತದೆ. ಒಂದು ಸಾರೆ ಗೌಡರ ಮನೆಯಲ್ಲಿ ತೊತ್ತುಗೆಲಸಮಾಡುವ ಬಂಡೆವ್ವ ಮುದಿಕೆ ಉಡಿಯಲ್ಲಿ ಜೋಳ ಕಟ್ಟಿಕೊಂಡು ಬಂದು ಸರತಿ ಕಾಯುತ್ತ ನಿಂತೇ ನಿಂತಳು. ಮುಂದಿನ ಗಿರಾಕಿಗಳು ಹೊರಟು ಹೋದ ಬಳಿಕ, ಮುದಿಕೆ ತನ್ನ ಉಡಿಯೊಳಗಿನ ಜೋಳವನ್ನು ಅಳೆದು ಹಾಕಿದಳು.

“ಏನು ಕೊಡಲಿ” ಎಂದನು ಅಂಗಡಿಕಾರ.

“ಗೌಡತಿ ಏನೋ ಹೇಳಿದ್ದಾಳೆರೀ” ಎಂದು ನೆನಪು ಮಾಡಿಕೊಳ್ಳಹತ್ತಿದಳು.

“ಅಲ್ಲ” ಮುದಿಕೆಯ ಸೊಲ್ಲು.

“ಇಂಗು ಜೀರಿಗೆ ?”

“ಅದು ಅಲ್ಲ.”

“ಶುಂಠಿ, ಮೆಣಸು ?”

“ಊಂ! ಹು !”

“ಅಡಿಕೆ, ಕಾಚು ?”

ಅಲ್ಲವೆನ್ನುವಂತೆ ಮುದಿಕೆ ಗೋಣುಕೊಡಹಿದಳು. ಅಂಗಡಿಕಾರನಿಗೆ ಬೇಸರಾಯಿತು. ಹಿಂದೆ ನಿಂತ ಗಿರಾಕಿಗಳು ಅವಸರ ಮಾಡತೊಡಗಿದ್ದನ್ನು ಕಂಡು ಸಿಟ್ಟಿನಿಂದ ಆ ಮುದಿಕೆಗೆ “ಕೇಳಿದ್ದಕ್ಕೆಲ್ಲ ಅಲ್ಲವೆನ್ನುತ್ತ ಮತ್ತೇಕೆ ನಿಂತೆ ? ನಿನ್ನ ಜೋಳ ತೆಗೆದುಕೊಂಡು ಹೋಗು, ಹುರಮುಂಜಗೇಡೀ” ಎಂದು ಗದ್ದರಿಸುವಷ್ಟರಲ್ಲಿ – “ಅದೇ ನೋಡೋ ಅಪ್ಪಾ, ನನಗೆ ಬೇಕಾಗಿದ್ದು ಹುರಮುಂಜ. ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿ ಬಯ್ದಾಳು ಬಹಳ ಹೊತ್ತಾಯ್ತು ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಳೆ
Next post ಮಿಂಚುಳ್ಳಿ ಬೆಳಕಿಂಡಿ – ೧೬

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…