Home / ಕಥೆ / ಜನಪದ / ಹುರಮುಂಜಗೇಡಿ

ಹುರಮುಂಜಗೇಡಿ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ ತಮಗೆ ಬೇಕಾದ ಸಾಮಾನು ಕೊಂಡುಕೊಳ್ಳುವುದು ವಾಡಿಕೆ. ದುಡ್ಡು ತಂದು ವ್ಯಾಪಾರ ಮಾಡಿಕೊಳ್ಳುವವರು ಬಹಳ ಕಡಿಮೆ.

ಹಬ್ಬ ಹುಣ್ಣಿಮೆ ದಿವಸ ಇಲ್ಲವೆ ಸೋಮವಾರ ದಿವಸ ಗಿರಾಕಿಗಳ ಗೊಂದಲ ಹೆಚ್ಚಿಗಿರುತ್ತದೆ. ಸರತಿಯ ಮೇಲೆ ಗಿರಾಕಿಗಳು ವ್ಯಾಪಾರ  ಗಿಟ್ಟಿಸಬೇಕಾಗುತ್ತದೆ. ಒಂದು ಸಾರೆ ಗೌಡರ ಮನೆಯಲ್ಲಿ ತೊತ್ತುಗೆಲಸಮಾಡುವ ಬಂಡೆವ್ವ ಮುದಿಕೆ ಉಡಿಯಲ್ಲಿ ಜೋಳ ಕಟ್ಟಿಕೊಂಡು ಬಂದು ಸರತಿ ಕಾಯುತ್ತ ನಿಂತೇ ನಿಂತಳು. ಮುಂದಿನ ಗಿರಾಕಿಗಳು ಹೊರಟು ಹೋದ ಬಳಿಕ, ಮುದಿಕೆ ತನ್ನ ಉಡಿಯೊಳಗಿನ ಜೋಳವನ್ನು ಅಳೆದು ಹಾಕಿದಳು.

“ಏನು ಕೊಡಲಿ” ಎಂದನು ಅಂಗಡಿಕಾರ.

“ಗೌಡತಿ ಏನೋ ಹೇಳಿದ್ದಾಳೆರೀ” ಎಂದು ನೆನಪು ಮಾಡಿಕೊಳ್ಳಹತ್ತಿದಳು.

“ಅಲ್ಲ” ಮುದಿಕೆಯ ಸೊಲ್ಲು.

“ಇಂಗು ಜೀರಿಗೆ ?”

“ಅದು ಅಲ್ಲ.”

“ಶುಂಠಿ, ಮೆಣಸು ?”

“ಊಂ! ಹು !”

“ಅಡಿಕೆ, ಕಾಚು ?”

ಅಲ್ಲವೆನ್ನುವಂತೆ ಮುದಿಕೆ ಗೋಣುಕೊಡಹಿದಳು. ಅಂಗಡಿಕಾರನಿಗೆ ಬೇಸರಾಯಿತು. ಹಿಂದೆ ನಿಂತ ಗಿರಾಕಿಗಳು ಅವಸರ ಮಾಡತೊಡಗಿದ್ದನ್ನು ಕಂಡು ಸಿಟ್ಟಿನಿಂದ ಆ ಮುದಿಕೆಗೆ “ಕೇಳಿದ್ದಕ್ಕೆಲ್ಲ ಅಲ್ಲವೆನ್ನುತ್ತ ಮತ್ತೇಕೆ ನಿಂತೆ ? ನಿನ್ನ ಜೋಳ ತೆಗೆದುಕೊಂಡು ಹೋಗು, ಹುರಮುಂಜಗೇಡೀ” ಎಂದು ಗದ್ದರಿಸುವಷ್ಟರಲ್ಲಿ – “ಅದೇ ನೋಡೋ ಅಪ್ಪಾ, ನನಗೆ ಬೇಕಾಗಿದ್ದು ಹುರಮುಂಜ. ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿ ಬಯ್ದಾಳು ಬಹಳ ಹೊತ್ತಾಯ್ತು ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...