ಹುರಮುಂಜಗೇಡಿ

ಹುರಮುಂಜಗೇಡಿ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ ತಮಗೆ ಬೇಕಾದ ಸಾಮಾನು ಕೊಂಡುಕೊಳ್ಳುವುದು ವಾಡಿಕೆ. ದುಡ್ಡು ತಂದು ವ್ಯಾಪಾರ ಮಾಡಿಕೊಳ್ಳುವವರು ಬಹಳ ಕಡಿಮೆ.

ಹಬ್ಬ ಹುಣ್ಣಿಮೆ ದಿವಸ ಇಲ್ಲವೆ ಸೋಮವಾರ ದಿವಸ ಗಿರಾಕಿಗಳ ಗೊಂದಲ ಹೆಚ್ಚಿಗಿರುತ್ತದೆ. ಸರತಿಯ ಮೇಲೆ ಗಿರಾಕಿಗಳು ವ್ಯಾಪಾರ  ಗಿಟ್ಟಿಸಬೇಕಾಗುತ್ತದೆ. ಒಂದು ಸಾರೆ ಗೌಡರ ಮನೆಯಲ್ಲಿ ತೊತ್ತುಗೆಲಸಮಾಡುವ ಬಂಡೆವ್ವ ಮುದಿಕೆ ಉಡಿಯಲ್ಲಿ ಜೋಳ ಕಟ್ಟಿಕೊಂಡು ಬಂದು ಸರತಿ ಕಾಯುತ್ತ ನಿಂತೇ ನಿಂತಳು. ಮುಂದಿನ ಗಿರಾಕಿಗಳು ಹೊರಟು ಹೋದ ಬಳಿಕ, ಮುದಿಕೆ ತನ್ನ ಉಡಿಯೊಳಗಿನ ಜೋಳವನ್ನು ಅಳೆದು ಹಾಕಿದಳು.

“ಏನು ಕೊಡಲಿ” ಎಂದನು ಅಂಗಡಿಕಾರ.

“ಗೌಡತಿ ಏನೋ ಹೇಳಿದ್ದಾಳೆರೀ” ಎಂದು ನೆನಪು ಮಾಡಿಕೊಳ್ಳಹತ್ತಿದಳು.

“ಅಲ್ಲ” ಮುದಿಕೆಯ ಸೊಲ್ಲು.

“ಇಂಗು ಜೀರಿಗೆ ?”

“ಅದು ಅಲ್ಲ.”

“ಶುಂಠಿ, ಮೆಣಸು ?”

“ಊಂ! ಹು !”

“ಅಡಿಕೆ, ಕಾಚು ?”

ಅಲ್ಲವೆನ್ನುವಂತೆ ಮುದಿಕೆ ಗೋಣುಕೊಡಹಿದಳು. ಅಂಗಡಿಕಾರನಿಗೆ ಬೇಸರಾಯಿತು. ಹಿಂದೆ ನಿಂತ ಗಿರಾಕಿಗಳು ಅವಸರ ಮಾಡತೊಡಗಿದ್ದನ್ನು ಕಂಡು ಸಿಟ್ಟಿನಿಂದ ಆ ಮುದಿಕೆಗೆ “ಕೇಳಿದ್ದಕ್ಕೆಲ್ಲ ಅಲ್ಲವೆನ್ನುತ್ತ ಮತ್ತೇಕೆ ನಿಂತೆ ? ನಿನ್ನ ಜೋಳ ತೆಗೆದುಕೊಂಡು ಹೋಗು, ಹುರಮುಂಜಗೇಡೀ” ಎಂದು ಗದ್ದರಿಸುವಷ್ಟರಲ್ಲಿ – “ಅದೇ ನೋಡೋ ಅಪ್ಪಾ, ನನಗೆ ಬೇಕಾಗಿದ್ದು ಹುರಮುಂಜ. ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿ ಬಯ್ದಾಳು ಬಹಳ ಹೊತ್ತಾಯ್ತು ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಳೆ
Next post ಮಿಂಚುಳ್ಳಿ ಬೆಳಕಿಂಡಿ – ೧೬

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…