ಹುರಮುಂಜಗೇಡಿ

ಹುರಮುಂಜಗೇಡಿ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ ತಮಗೆ ಬೇಕಾದ ಸಾಮಾನು ಕೊಂಡುಕೊಳ್ಳುವುದು ವಾಡಿಕೆ. ದುಡ್ಡು ತಂದು ವ್ಯಾಪಾರ ಮಾಡಿಕೊಳ್ಳುವವರು ಬಹಳ ಕಡಿಮೆ.

ಹಬ್ಬ ಹುಣ್ಣಿಮೆ ದಿವಸ ಇಲ್ಲವೆ ಸೋಮವಾರ ದಿವಸ ಗಿರಾಕಿಗಳ ಗೊಂದಲ ಹೆಚ್ಚಿಗಿರುತ್ತದೆ. ಸರತಿಯ ಮೇಲೆ ಗಿರಾಕಿಗಳು ವ್ಯಾಪಾರ  ಗಿಟ್ಟಿಸಬೇಕಾಗುತ್ತದೆ. ಒಂದು ಸಾರೆ ಗೌಡರ ಮನೆಯಲ್ಲಿ ತೊತ್ತುಗೆಲಸಮಾಡುವ ಬಂಡೆವ್ವ ಮುದಿಕೆ ಉಡಿಯಲ್ಲಿ ಜೋಳ ಕಟ್ಟಿಕೊಂಡು ಬಂದು ಸರತಿ ಕಾಯುತ್ತ ನಿಂತೇ ನಿಂತಳು. ಮುಂದಿನ ಗಿರಾಕಿಗಳು ಹೊರಟು ಹೋದ ಬಳಿಕ, ಮುದಿಕೆ ತನ್ನ ಉಡಿಯೊಳಗಿನ ಜೋಳವನ್ನು ಅಳೆದು ಹಾಕಿದಳು.

“ಏನು ಕೊಡಲಿ” ಎಂದನು ಅಂಗಡಿಕಾರ.

“ಗೌಡತಿ ಏನೋ ಹೇಳಿದ್ದಾಳೆರೀ” ಎಂದು ನೆನಪು ಮಾಡಿಕೊಳ್ಳಹತ್ತಿದಳು.

“ಅಲ್ಲ” ಮುದಿಕೆಯ ಸೊಲ್ಲು.

“ಇಂಗು ಜೀರಿಗೆ ?”

“ಅದು ಅಲ್ಲ.”

“ಶುಂಠಿ, ಮೆಣಸು ?”

“ಊಂ! ಹು !”

“ಅಡಿಕೆ, ಕಾಚು ?”

ಅಲ್ಲವೆನ್ನುವಂತೆ ಮುದಿಕೆ ಗೋಣುಕೊಡಹಿದಳು. ಅಂಗಡಿಕಾರನಿಗೆ ಬೇಸರಾಯಿತು. ಹಿಂದೆ ನಿಂತ ಗಿರಾಕಿಗಳು ಅವಸರ ಮಾಡತೊಡಗಿದ್ದನ್ನು ಕಂಡು ಸಿಟ್ಟಿನಿಂದ ಆ ಮುದಿಕೆಗೆ “ಕೇಳಿದ್ದಕ್ಕೆಲ್ಲ ಅಲ್ಲವೆನ್ನುತ್ತ ಮತ್ತೇಕೆ ನಿಂತೆ ? ನಿನ್ನ ಜೋಳ ತೆಗೆದುಕೊಂಡು ಹೋಗು, ಹುರಮುಂಜಗೇಡೀ” ಎಂದು ಗದ್ದರಿಸುವಷ್ಟರಲ್ಲಿ – “ಅದೇ ನೋಡೋ ಅಪ್ಪಾ, ನನಗೆ ಬೇಕಾಗಿದ್ದು ಹುರಮುಂಜ. ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿ ಬಯ್ದಾಳು ಬಹಳ ಹೊತ್ತಾಯ್ತು ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಳೆ
Next post ಮಿಂಚುಳ್ಳಿ ಬೆಳಕಿಂಡಿ – ೧೬

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…