Home / ಕಥೆ / ಜನಪದ / ಹುರಮುಂಜಗೇಡಿ

ಹುರಮುಂಜಗೇಡಿ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ –  ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ ತಮಗೆ ಬೇಕಾದ ಸಾಮಾನು ಕೊಂಡುಕೊಳ್ಳುವುದು ವಾಡಿಕೆ. ದುಡ್ಡು ತಂದು ವ್ಯಾಪಾರ ಮಾಡಿಕೊಳ್ಳುವವರು ಬಹಳ ಕಡಿಮೆ.

ಹಬ್ಬ ಹುಣ್ಣಿಮೆ ದಿವಸ ಇಲ್ಲವೆ ಸೋಮವಾರ ದಿವಸ ಗಿರಾಕಿಗಳ ಗೊಂದಲ ಹೆಚ್ಚಿಗಿರುತ್ತದೆ. ಸರತಿಯ ಮೇಲೆ ಗಿರಾಕಿಗಳು ವ್ಯಾಪಾರ  ಗಿಟ್ಟಿಸಬೇಕಾಗುತ್ತದೆ. ಒಂದು ಸಾರೆ ಗೌಡರ ಮನೆಯಲ್ಲಿ ತೊತ್ತುಗೆಲಸಮಾಡುವ ಬಂಡೆವ್ವ ಮುದಿಕೆ ಉಡಿಯಲ್ಲಿ ಜೋಳ ಕಟ್ಟಿಕೊಂಡು ಬಂದು ಸರತಿ ಕಾಯುತ್ತ ನಿಂತೇ ನಿಂತಳು. ಮುಂದಿನ ಗಿರಾಕಿಗಳು ಹೊರಟು ಹೋದ ಬಳಿಕ, ಮುದಿಕೆ ತನ್ನ ಉಡಿಯೊಳಗಿನ ಜೋಳವನ್ನು ಅಳೆದು ಹಾಕಿದಳು.

“ಏನು ಕೊಡಲಿ” ಎಂದನು ಅಂಗಡಿಕಾರ.

“ಗೌಡತಿ ಏನೋ ಹೇಳಿದ್ದಾಳೆರೀ” ಎಂದು ನೆನಪು ಮಾಡಿಕೊಳ್ಳಹತ್ತಿದಳು.

“ಅಲ್ಲ” ಮುದಿಕೆಯ ಸೊಲ್ಲು.

“ಇಂಗು ಜೀರಿಗೆ ?”

“ಅದು ಅಲ್ಲ.”

“ಶುಂಠಿ, ಮೆಣಸು ?”

“ಊಂ! ಹು !”

“ಅಡಿಕೆ, ಕಾಚು ?”

ಅಲ್ಲವೆನ್ನುವಂತೆ ಮುದಿಕೆ ಗೋಣುಕೊಡಹಿದಳು. ಅಂಗಡಿಕಾರನಿಗೆ ಬೇಸರಾಯಿತು. ಹಿಂದೆ ನಿಂತ ಗಿರಾಕಿಗಳು ಅವಸರ ಮಾಡತೊಡಗಿದ್ದನ್ನು ಕಂಡು ಸಿಟ್ಟಿನಿಂದ ಆ ಮುದಿಕೆಗೆ “ಕೇಳಿದ್ದಕ್ಕೆಲ್ಲ ಅಲ್ಲವೆನ್ನುತ್ತ ಮತ್ತೇಕೆ ನಿಂತೆ ? ನಿನ್ನ ಜೋಳ ತೆಗೆದುಕೊಂಡು ಹೋಗು, ಹುರಮುಂಜಗೇಡೀ” ಎಂದು ಗದ್ದರಿಸುವಷ್ಟರಲ್ಲಿ – “ಅದೇ ನೋಡೋ ಅಪ್ಪಾ, ನನಗೆ ಬೇಕಾಗಿದ್ದು ಹುರಮುಂಜ. ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿ ಬಯ್ದಾಳು ಬಹಳ ಹೊತ್ತಾಯ್ತು ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...