Home / ಕವನ / ಜನಪದ / ನಮ್ಮೂರ ಹೋಳಿ ಹಾಡು – ೫

ನಮ್ಮೂರ ಹೋಳಿ ಹಾಡು – ೫

ಹೇ ಕೃಷ್ಣ ತಂದೆ ಏನುಕಾರ್ಯ
ಹೇಳಿದೆ ಎನಗೆ?
ಮನಸಾಯಿತೆ ನಿನಗೆ ||ಪ||
ಹಡೆದ ಮಕ್ಕಳ ಮೇಲೆ
ಪಿತಗೆ ಹರುವಿಲ್ಲವೋ
ಇದು ಕಠಿಣವಲ್ಲವೋ ||೧||

ಹರನ ಉರಿಯಗಣ್ಣಿನೆದುರು
ನಿಲ್ಲುವರ್‍ಯಾರೋ?
ಆವ ಪುರುಷರ ತೋರೋ ||೨||

ಬೆಂಕಿಯೊಳಗೆ ನೂಕಬಾರದೆ
ಬ್ಯಾಸರವಾದರೆ?
ಪರರು ಕೇಳಿ ಸೈರಿಪರೆ ||೩||

ಲೋಕ ಬಾಂಧವನೆಂದು
ನಿನ್ನ ಲೋಕವೆಂಬುದೋ
ಆವ ನ್ಯಾಯವೋ ಇದು ||೪||

ಪರರ ಮಕ್ಕಳ ನೋವ
ನೋಡಿ ಮಿಡುಕುತಲಿಹರೋ
ದೈವ ಭಾವ ಉಳ್ಳವರೋ ||೫||

ಎನ್ನ ಧೋರಣವೇನು
ತಂದೆ ಪನ್ನಗ ಶಯನ
ಹೆಣೆದ್ಯಾಕೋ ಈ ಹದನ ||೬||

ಹರನು ಮುನಿದ ಮೇಲೆ
ಲೋಕ ಉರಿದು ಹೋಗದೆ
ಅವಕಾಶವಾಗ್ವುದೆ ||೭||

ಶೂರನಾದರೇನು ನಾನು
ಶೂಲಿಗೆ ಎದುರೇ?
ನಾನಾತಗೆ ನದರೇ ||೮||

ಆನೆ ಸಿಂಹ ಕೆಣಕಲದಲಕೆ
ಹಾನಿಯಲ್ಲದೆ
ಪ್ರಾಣ ಬೇರೆ ಉಳಿವದೆ ||೯||

ಏಸುದಿನದಲಿಂದ
ಈಶನ ಕಣ್ಣ ಮುಂದಕೆ
ಹಾಕಬೇಕೆಂಬ ಬಯಕೆ ತೀರಿತೆ ||೧೦||

ನಿನ್ನ ಬಯಕೆ ತೀರಿತೆ
ನಿನ್ನ ಮನಸ್ಸಿನ ಕನಸು ಹೋಯಿತೆ
ಇನ್ನು ಬಾಕಿ ಉಳಿಯಿತೆ ||೧೧||

ಹಡೆದವರು ದುರ್ಬುದ್ಧಿ
ತೋರಿರುವರೆ ಮಕ್ಕಳಿಗೆ
ಕೆಣಕುವರೆ ಜಗದೊಳಗೆ ||೧೨||

ನನ್ನ ದೈವ ನಿನ್ನೊಳು ಹೊಕ್ಕು
ಮಾಡಲೀ ಪರಿಯಾ
ಮಾಡಲೇನು ಶ್ರೀ ಹರಿಯೇ ||೧೩||

ಇನ್ನು ನಿನ್ನ ಪಾದ ಎನಗೆ
ಎರವು ಗೈದೆಯಾ
ಹೇ ರುಕ್ಮಿಣೀ ಪ್ರಿಯಾ ||೧೪||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...