ನಮ್ಮೂರ ಹೋಳಿ ಹಾಡು – ೬

ಮಾರ ವೀರ ತನ್ನ ಮನದಿ
ಧೈರ್ಯ ಮಾಡಿ
ಹರನ ತಪವ ಸೂರೆಗೊಂಬುದಕೆ
ತನ್ನ ಸೈನ್ಯವೆಲ್ಲ ಕೂಡಿಸಿ ||ಪ||

ಅಳಿಯು ಗಿಳಿಯು ಕೋಗಿಲೆಗಳ
ಬಳಗವೆಲ್ಲಾ ಮುಂದೆ
ಹೈಮಾಚಲಕೆ ತೆರಳ ಹೇಳಿ
ಪುಷ್ಪದಲರು ಬಿಲ್ಲಿಗೇರಿಸಿ ||೧||

ಅಂಗಜನು ಪೋಗಿ ಮಾತಂಗ
ಪರ್ವತವನು ಏರಿ
ತುಂಗವಿಕ್ರಮನಾ ಶರವ
ಲಂಗಿಸಿಟ್ಟನಾಕ್ಷಣ ||೨||

ರಸದಾಳಿಯ ಚಾಪಕ್ಗಿನ್ನು
ಕುಸುಮ ಬಾಣವನ್ನು ಹೂಡಿ
ಎಸೆಯುವಾಗ ಮುನಿ ಸಮೂಹ
ದೆಶೆಯಗೆಟ್ಟರೆಲ್ಲರೋ ||೩||

ಇಟ್ಟ ಕುಸುಮ ಬಾಣಕಿನ್ನು
ಭ್ರಷ್ಟವಾಯ್ತು ಶಿವನ ತಪವು
ನೆಟ್ಟನುರಿಗಣ್ಣು ತೆರೆಯೆ
ಸುಟ್ಟ ಮದನ ಕಾಮನು ||೪||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪದ ಬೆಳಕು…
Next post ನಮ್ಮ ಚಂದ್ರಾಮ

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…