Home / ಕವನ / ಜನಪದ / ನಮ್ಮೂರ ಹೋಳಿ ಹಾಡು – ೯

ನಮ್ಮೂರ ಹೋಳಿ ಹಾಡು – ೯

ಕಾಮ ನೀನು ಧೂಮವಾದಿ
ಸೋಮನಾಥನ ಕಣ್ಣಿಗೆ
ಪ್ರೇಮದಾ ನುಡಿ ಏನು ಹೇಳಿದಿ
ಕಾಮಿನಿ ರತಿ ದೇವಿಗೆ

ನಿನ್ನ ಪೋಲುವೆ ಪುರುಷರು
ಜಗದೊಳಿನ್ನೂ
ಹುಟ್ಯಾರೆಂದಿಗೆ?
ನನ್ನ ಮುತ್ತೈದೆ ತನಕೆ
ಭಂಗ ತಂದ್ಯಾ ಇಂದಿಗೆ ||೧||

ಮಾರ ನಿನ್ನ ರೂಪ ನೋಡಿ
ಸೈರಿಸದೀ ಅಮರ್‍ಯಾರೋ
ದೂರಿ ಎಲ್ಲರೂ
ಶಿವನ ಕಣ್ಣಿಗೆ ಮಾರುಗೊಟ್ಟ
ಪಾಪತ್ಮರೂ ||೨||

ಸ್ಮರನೆ ನಿನ್ನಯ ಮನಕೆ
ತಾರಕನುಪದ್ರವ ಕೊಟ್ಟನೆ
ಹರಿವಿರಂಚಿಯೂ
ಗುರುಬೃಹಸ್ಪತಿ
ಕರೆದು ಪೇಳಿದರ್‍ಯೋಚನೆ ||೩||

ಮೋಸದಿಂದಲಿ
ಭಾಷೆಗೊಂಡರು
ಈಸನಗ್ನಿಗಣ್ಣಿಗೆ ನಾಶಗೈದನು
ಗುರುವರನು ಬಹು
ದೊರೆಯಾದನು ಭೂಮಿಗೆ ||೪||

ಕಡು ಚೆಲುವ ಕಂದರ್ಪ
ನಿನ್ನಯ ಮಡದಿ ರತಿಯಳ ದುಃಖವಾ
ಬಿಡುವಳೋ ಸೈ
ಗಡಗಡ ನೇ ತಾ
ಹುಡಿಯೊಳಗೆ ಹೊರಳಾಡುತಾ ||೫||

ಮಾರ ಬಾಣಕೆ ಮನು – ಮುನ್ಯಾದಿಯ
ದಾರಿ ತಪ್ಪಿಸಿ ಮುತ್ತಿದೆ|
ಮೂರು ಲೋಕದಿ ನಿನ್ನ
ಮಿಕ್ಕುವರಾರು
ಕದನದೊಳಿಂದಿಗೆ ||೬||

ಭೂಮಿಯೊಳುತ್ಪತ್ಯವೆಂಬುದು
ಕಾಮ ನಿನ್ನಿಂದಲ್ಲದೇ!
ನೀ ಮರಣ ಹೊಂದಿದರೆ
ಜಗತ್ರಯ ತಾ
ಮುಳಿಗಿ ಹೋಯಿತಲ್ಲದೆ ||೭||

ಕ್ಷಿತಿಯೊಳಗೆ ಪತಿವ್ರತಾ
ಶಿರೋಮಣಿಯಾ|
ರತಿ ಎಂಬ ಚೆಲುವೆಯಾ
ಪತಿವಳಿದ ರಂಡೆತನವ ವಹಿಸಿ
ಕ್ಷಿತಿಗೆಯಾದಳು ಪಾಪಿಯಾ ||೮||

ಕಾಲಕಾಲಾಂತರದಿ ರತಿಯಾ
ತಾಳಿಕರಿಮಣಿಯ ತೆಗೆಯದೆ
ಪಾಲನೇತ್ರನ ದಯದಿ
ಬಾಲೆ ನಿನ್ನನು ನೆನೆಲದೆ ||೯||

ನೆನಪಿದಾಕ್ಷಣ ಮನಸಿಜನು ಎಂದೆನೆಸಿ
ರತಿಯಳ ಪಾಲಿಸೋ|
ತನು ಕಳೆದರೂ ಮನದಿಗೂಡಿ
ಜೀವ ಜಗತ್ರಯವನು ಪಾಲಿಸೋ ||೧೦||

ಕ್ಷಿತಿಗೆ ರತಿ ಮನ್ಮಥರಿಬ್ಬರೂ
ಪತಿ ಸೋಮೇಶನ ಕರುಣದಿ |
ಸಕಲನುಚರಾಚರೆಗೆವುಪ
ಸಮ ರತಿಯ ಗೂಡುತಾ ಸೌಖ್ಯದಿ ||೧೧||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...