Home / ಕವನ / ಜನಪದ / ನಮ್ಮೂರ ಹೋಳಿ ಹಾಡು – ೯

ನಮ್ಮೂರ ಹೋಳಿ ಹಾಡು – ೯

ಕಾಮ ನೀನು ಧೂಮವಾದಿ
ಸೋಮನಾಥನ ಕಣ್ಣಿಗೆ
ಪ್ರೇಮದಾ ನುಡಿ ಏನು ಹೇಳಿದಿ
ಕಾಮಿನಿ ರತಿ ದೇವಿಗೆ

ನಿನ್ನ ಪೋಲುವೆ ಪುರುಷರು
ಜಗದೊಳಿನ್ನೂ
ಹುಟ್ಯಾರೆಂದಿಗೆ?
ನನ್ನ ಮುತ್ತೈದೆ ತನಕೆ
ಭಂಗ ತಂದ್ಯಾ ಇಂದಿಗೆ ||೧||

ಮಾರ ನಿನ್ನ ರೂಪ ನೋಡಿ
ಸೈರಿಸದೀ ಅಮರ್‍ಯಾರೋ
ದೂರಿ ಎಲ್ಲರೂ
ಶಿವನ ಕಣ್ಣಿಗೆ ಮಾರುಗೊಟ್ಟ
ಪಾಪತ್ಮರೂ ||೨||

ಸ್ಮರನೆ ನಿನ್ನಯ ಮನಕೆ
ತಾರಕನುಪದ್ರವ ಕೊಟ್ಟನೆ
ಹರಿವಿರಂಚಿಯೂ
ಗುರುಬೃಹಸ್ಪತಿ
ಕರೆದು ಪೇಳಿದರ್‍ಯೋಚನೆ ||೩||

ಮೋಸದಿಂದಲಿ
ಭಾಷೆಗೊಂಡರು
ಈಸನಗ್ನಿಗಣ್ಣಿಗೆ ನಾಶಗೈದನು
ಗುರುವರನು ಬಹು
ದೊರೆಯಾದನು ಭೂಮಿಗೆ ||೪||

ಕಡು ಚೆಲುವ ಕಂದರ್ಪ
ನಿನ್ನಯ ಮಡದಿ ರತಿಯಳ ದುಃಖವಾ
ಬಿಡುವಳೋ ಸೈ
ಗಡಗಡ ನೇ ತಾ
ಹುಡಿಯೊಳಗೆ ಹೊರಳಾಡುತಾ ||೫||

ಮಾರ ಬಾಣಕೆ ಮನು – ಮುನ್ಯಾದಿಯ
ದಾರಿ ತಪ್ಪಿಸಿ ಮುತ್ತಿದೆ|
ಮೂರು ಲೋಕದಿ ನಿನ್ನ
ಮಿಕ್ಕುವರಾರು
ಕದನದೊಳಿಂದಿಗೆ ||೬||

ಭೂಮಿಯೊಳುತ್ಪತ್ಯವೆಂಬುದು
ಕಾಮ ನಿನ್ನಿಂದಲ್ಲದೇ!
ನೀ ಮರಣ ಹೊಂದಿದರೆ
ಜಗತ್ರಯ ತಾ
ಮುಳಿಗಿ ಹೋಯಿತಲ್ಲದೆ ||೭||

ಕ್ಷಿತಿಯೊಳಗೆ ಪತಿವ್ರತಾ
ಶಿರೋಮಣಿಯಾ|
ರತಿ ಎಂಬ ಚೆಲುವೆಯಾ
ಪತಿವಳಿದ ರಂಡೆತನವ ವಹಿಸಿ
ಕ್ಷಿತಿಗೆಯಾದಳು ಪಾಪಿಯಾ ||೮||

ಕಾಲಕಾಲಾಂತರದಿ ರತಿಯಾ
ತಾಳಿಕರಿಮಣಿಯ ತೆಗೆಯದೆ
ಪಾಲನೇತ್ರನ ದಯದಿ
ಬಾಲೆ ನಿನ್ನನು ನೆನೆಲದೆ ||೯||

ನೆನಪಿದಾಕ್ಷಣ ಮನಸಿಜನು ಎಂದೆನೆಸಿ
ರತಿಯಳ ಪಾಲಿಸೋ|
ತನು ಕಳೆದರೂ ಮನದಿಗೂಡಿ
ಜೀವ ಜಗತ್ರಯವನು ಪಾಲಿಸೋ ||೧೦||

ಕ್ಷಿತಿಗೆ ರತಿ ಮನ್ಮಥರಿಬ್ಬರೂ
ಪತಿ ಸೋಮೇಶನ ಕರುಣದಿ |
ಸಕಲನುಚರಾಚರೆಗೆವುಪ
ಸಮ ರತಿಯ ಗೂಡುತಾ ಸೌಖ್ಯದಿ ||೧೧||
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...