ಶಿವರಾತ್ರಿ – ಪಾರಣೆ

ಶಿವರಾತ್ರಿ – ಪಾರಣೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಗಂಡನು ಶಿವರಾತ್ರಿಯ ದಿನ ಉಪವಾಸ ಮಾಡುವನೆಂದು ತಿಳಿದು ಹೆಂಡತಿ ತಾನೂ ಉಪವಾಸ ಮಾಡುವುದನ್ನು ನಿರ್ಧರಿಸಿದಳು. ಉಪವಾಸವೆಂದರೂ ಹಳ್ಳಿಯಲ್ಲಿ ಗೆಣಸು, ಬಾಳೆಹಣ್ಣು, ಕಜ್ಜೂರಿ, ಸೇಂಗಾ ತಿನ್ನುವುದು ವಾಡಿಕೆಯಾಗಿದೆ. ಆ ಪ್ರಕಾರ ಗಂಡ ಹೆಂಡಿರು ಸಾಯಂಕಾಲದಲ್ಲಿ ಫಲಾಹಾರ ಮಾಡಿದರು. ಮರುದಿನ ಹೊತ್ತು ಹೊರಡುವ ವೇಳೆಗೆ ಪಾರಣೆ. ಅದಕ್ಕಾಗಿ ಹಿಟ್ಟು, ಬೇಳೆ, ಬೆಲ್ಲ, ಅಕ್ಕಿಗಳನ್ನು ಸಾವರಿಸಿಟ್ಟಳು.

ಶಿವರಾತ್ರಿಯದಿನ ಇಡಿಯರಾತ್ರಿ ಮಹಾದೇವನ ಗುಡಿಯಲ್ಲಿ ನಡೆಯುವ ಭಜನೆಯಲ್ಲಿ ಭಾಗವಹಿಸಿಲು ಗಂಡನು ಹೊರಟನು “ನೀನೂ ಗುಡಿಗೆ ಬಂದುಬಿಡು ನನ್ನೊಡನೆ. ಭಜನೆ ಕೇಳುವಿಯಂತೆ. ಸಾಕಷ್ಟು ಹೆಣ್ಣು ಮಕ್ಕಳು ಬಂದಿರುತ್ತಾರೆ” ಎಂದು ಹೆಂಡತಿಗೆ ಹೇಳಲು, ಆಕೆ ಗಂಡನ ಬಿಡೆಯಕ್ಕಾಗಿ ಗುಡಿಗೆ ಹೋದಳು.

ಭಜನೆ ಆರಂಭವಾಗಿ ಒಳ್ಳೆಯ ಭರಕ್ಕೆ ಬರತೊಡಗಿತ್ತು. ಅಂಥ ಪ್ರಸಂಗದಲ್ಲಿ ಆಕೆಯ ಮನಸ್ಸು ಮನೆಯತ್ತ ಎಳೆಯತೊಡಗಿತು. ಬೇಕಾದಷ್ಟು ಫಲಾಹಾರ ಮಾಡಿದ್ದರೂ ಆಕೆಗೆ ಉಂಡಷ್ಟು ತೃಪ್ತಿಯಾಗಿರಲಿಲ್ಲ. ಹಸಿವೆಯೆನಿಸಹತ್ತಿದ್ದರಿಂದ ಮನೆಗೆ ಹೋಗಿ, ಏನಾದರೂ ಮಾಡಿಕೊಂಡು ತಿಂದು ಮಲಗಬೇಕೆಂದು ಯೋಚಿಸಿದಳು. “ಗಂಡನಂತೂ ಭಜನೆಯಲ್ಲಿ ಭಾಗಿಯಾಗಿದ್ದರಿಂದ ಅಡ್ಡಹೊತ್ತಿನಲ್ಲಿ ಮನೆಗೆ ಬರುವಂತಿಲ್ಲ. ಆದ್ದರಿಂದ ನನ್ನ ಉದ್ದೇಶವು ನಿರ್ಬಾಧವಾಗಿ ನೆರವೇರುತ್ತದೆ” – ಎಂದು ಎದ್ದು ಮನೆಯ ಹಾದಿ ಹಿಡಿದಳು. ಮನೆಗೆ ಬಂದವಳೇ ಒಲೆಹೊತ್ತಿಸಿ, ಭಾಂಡೆಯಲ್ಲಿ ಸಟ್ಟುಗವನ್ನು ಅಟ್ಟು, ಕೋಣಮಗಿಯಲ್ಲಿ ಆರಹಾಕಿದಳು. ತಾಬಾಣದಲ್ಲಿ ಅಷ್ಟಷ್ಟು ತೆಗೆದುಕೊಂಡು ತಿಂದರಾಯಿತೆಂದು. ತಾಬಾಣ ತೆಗೆದುಕೊಳ್ಳುವಷ್ಟರಲ್ಲಿ ಗುಡಿಯಿಂದ ಗಂಡ ಬಂದು. ಬಾಗಿಲು ತೆಗೆಯೆಂದು ಕೂಗಿದನು. ಹೆಂಡತಿ ಲಗುಬಗೆಯಿಂದ ಅದೆಲ್ಲವನ್ನೂ ಮುಚ್ಚಿಟ್ಟು ದಡದಡನೆ ಬಾಗಿಲಿಗೆ ಬಂದು ಕದ ತೆರೆದಳು.

“ಗುಡಿಯಿಂದ ತೀವ್ರವೇ ಬಂದುಬಿಟ್ಟೆಯಲ್ಲ ! ಏಕೆ ?” ಎಂದು ಕೇಳಿದನು ಗಂಡ.

ನನಗೇನು ತಿಳಿಯುವದೇ – ಹೊಳೆಯುವದೇ ? ಆದ್ದರಿಂದ ಬೇಸರವೆನಿಸಿತು. ಓಡಿ ಮನೆಗೆ ಬಂದೆ.”

“ಒಳ್ಳೆಯದೇ ಆಯಿತು. ಮಲಗಿಕೊಂಡುಬಿಡೋಣ ಹಾಗಾದರೆ” ಎಂದು ಗಂಡನು ಮಲಗುವದಕ್ಕೆ ಅಣಿಯಾದನು.

“ಅನಕಾ ಒಂದು ಕಥೇಯನ್ನಾದರೂ ಹೇಳಿರಿ” ಎಂದಳು ಹೆಂಡತಿ.

“ನಿದ್ದೆಯ ಹೊತ್ತಿನಲ್ಲಿ ಕಥೆ ಕೇಳಬೇಕನ್ನುವಳಲ್ಲ” ಎಂದು, ಬೇಸರದಿಂದ ಎಂಥದೋ ಕತೆಯನ್ನು ಹೇಳಲು ಆರಂಭಿಸಿದನು ಗಂಡ.

“ಕತ್ತಲದಾಗ ಕಡೋಡಿ, ಕೊಣಮಗ್ಯಾಗ ತೊಡೋಡಿ, ಸುಮ್ಮನೆ ಮನಗ ಬಿದ್ದೋಡಿ” ಎಂದು ಚೇಷ್ಟೆಯಿಂದಾಡಿದ ಲಲ್ಲೆಯನ್ನು ಕೇಳಿ ಹೆಂಡತಿ ಕಕ್ಕಾ ವಿಕ್ಕಿಯಾದಳು. “ಇವನಿಗೆ ಗೊತ್ತಾಗದಂತೆ ಮಾಡಿದ್ದೆಲ್ಲ ತಿಳಿದೇ ಬಿಟ್ಟಿದೆಯಲ್ಲ” ಎನ್ನುತ್ತ ತಾನು ಮಾಡಿದ್ದನ್ನೆಲ್ಲ ವಿವರಿಸಿದಳು-

“ಸುಳ್ಳೇಕೆ ಹೇಳಲಿ ? ಭಜನೆ ಕೇಳಬೇಕೆಂದರೆ ಹಸಿವೆ ಮನೆಯತ್ತ ಎಳೆದುತಂದು ಸಜ್ಜಿಗೆ ಮಾಡಿಸಿತು. ನೀವು ಬರುವಷ್ಟರಲ್ಲಿ ತಿಂದುಮುಗಿಸಿ, ಉಪವಾಸ ಮಾಡಿದವರಂತೆಯೇ ಮಲಗಿಬಿಟ್ಟು, ನೀವು ಬಂದಾಗ ಬಾಗಿಲು ತೆರೆಯಬೇಕೆಂದು ಯೋಚಿಸಿದ್ದೆ. ಆದರೆ ನಾನು ತಾಬಾಣ ಸಾವರಿಸುವಷ್ಟರಲ್ಲಿ ನೀವು ಬಂದೇ ಬಿಟ್ಟಿದ್ದರಿಂದ, ಮಾಡಿದ್ದನ್ನೆಲ್ಲ ಮುಚ್ಚಿಟ್ಟು ಓಡಿಬಂದು ಬಾಗಿಲು ತೆರೆದೆ, ನನ್ನದೇನಿದೆ ತಪ್ಪು ? ಹಸಿವೆ ತಾಳದೆ ಹೀಗೆ ಮಾಡಿದೆ. ನಿಮಗೆಲ್ಲ ತಿಳಿದೇ ಬಿಟ್ಟಿದೆಯಲ್ಲ ? ಹೊಟ್ಟೆಯಲ್ಲಿ ಹಾಕಿಕೊಳ್ಳಿರಿ” ಎಂದು ವಿನಯದಿಂದ ಕೇಳಿಕೊಂಡಳು.

ಗಂಡನು, ಅಂದು ರಾತ್ರಿ ಹೆಂಡತಿಯು ಮಾಡಿದ ಅಚಾತುರ್ಯವನ್ನೂ, ಮರುದಿನ ಬೆಳಗಾದ ಬಳಿಕ ಆಕೆ ಮಾಡಿದ ಸಜ್ಜಗೆಯನ್ನೂ ಆಕೆಯ ವಿನಂತಿಯನ್ನು ಮನ್ನಿಸಿ ಹೊಟ್ಟೆಯಲ್ಲಿ ಹಾಕಿಕೊಂಡನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಾರ್ಥಿಗಳು
Next post ಮಿಂಚುಳ್ಳಿ ಬೆಳಕಿಂಡಿ – ೨೮

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

cheap jordans|wholesale air max|wholesale jordans|wholesale jewelry|wholesale jerseys