Home / ಕಥೆ / ಜನಪದ / ಶಿವರಾತ್ರಿ – ಪಾರಣೆ

ಶಿವರಾತ್ರಿ – ಪಾರಣೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಗಂಡನು ಶಿವರಾತ್ರಿಯ ದಿನ ಉಪವಾಸ ಮಾಡುವನೆಂದು ತಿಳಿದು ಹೆಂಡತಿ ತಾನೂ ಉಪವಾಸ ಮಾಡುವುದನ್ನು ನಿರ್ಧರಿಸಿದಳು. ಉಪವಾಸವೆಂದರೂ ಹಳ್ಳಿಯಲ್ಲಿ ಗೆಣಸು, ಬಾಳೆಹಣ್ಣು, ಕಜ್ಜೂರಿ, ಸೇಂಗಾ ತಿನ್ನುವುದು ವಾಡಿಕೆಯಾಗಿದೆ. ಆ ಪ್ರಕಾರ ಗಂಡ ಹೆಂಡಿರು ಸಾಯಂಕಾಲದಲ್ಲಿ ಫಲಾಹಾರ ಮಾಡಿದರು. ಮರುದಿನ ಹೊತ್ತು ಹೊರಡುವ ವೇಳೆಗೆ ಪಾರಣೆ. ಅದಕ್ಕಾಗಿ ಹಿಟ್ಟು, ಬೇಳೆ, ಬೆಲ್ಲ, ಅಕ್ಕಿಗಳನ್ನು ಸಾವರಿಸಿಟ್ಟಳು.

ಶಿವರಾತ್ರಿಯದಿನ ಇಡಿಯರಾತ್ರಿ ಮಹಾದೇವನ ಗುಡಿಯಲ್ಲಿ ನಡೆಯುವ ಭಜನೆಯಲ್ಲಿ ಭಾಗವಹಿಸಿಲು ಗಂಡನು ಹೊರಟನು “ನೀನೂ ಗುಡಿಗೆ ಬಂದುಬಿಡು ನನ್ನೊಡನೆ. ಭಜನೆ ಕೇಳುವಿಯಂತೆ. ಸಾಕಷ್ಟು ಹೆಣ್ಣು ಮಕ್ಕಳು ಬಂದಿರುತ್ತಾರೆ” ಎಂದು ಹೆಂಡತಿಗೆ ಹೇಳಲು, ಆಕೆ ಗಂಡನ ಬಿಡೆಯಕ್ಕಾಗಿ ಗುಡಿಗೆ ಹೋದಳು.

ಭಜನೆ ಆರಂಭವಾಗಿ ಒಳ್ಳೆಯ ಭರಕ್ಕೆ ಬರತೊಡಗಿತ್ತು. ಅಂಥ ಪ್ರಸಂಗದಲ್ಲಿ ಆಕೆಯ ಮನಸ್ಸು ಮನೆಯತ್ತ ಎಳೆಯತೊಡಗಿತು. ಬೇಕಾದಷ್ಟು ಫಲಾಹಾರ ಮಾಡಿದ್ದರೂ ಆಕೆಗೆ ಉಂಡಷ್ಟು ತೃಪ್ತಿಯಾಗಿರಲಿಲ್ಲ. ಹಸಿವೆಯೆನಿಸಹತ್ತಿದ್ದರಿಂದ ಮನೆಗೆ ಹೋಗಿ, ಏನಾದರೂ ಮಾಡಿಕೊಂಡು ತಿಂದು ಮಲಗಬೇಕೆಂದು ಯೋಚಿಸಿದಳು. “ಗಂಡನಂತೂ ಭಜನೆಯಲ್ಲಿ ಭಾಗಿಯಾಗಿದ್ದರಿಂದ ಅಡ್ಡಹೊತ್ತಿನಲ್ಲಿ ಮನೆಗೆ ಬರುವಂತಿಲ್ಲ. ಆದ್ದರಿಂದ ನನ್ನ ಉದ್ದೇಶವು ನಿರ್ಬಾಧವಾಗಿ ನೆರವೇರುತ್ತದೆ” – ಎಂದು ಎದ್ದು ಮನೆಯ ಹಾದಿ ಹಿಡಿದಳು. ಮನೆಗೆ ಬಂದವಳೇ ಒಲೆಹೊತ್ತಿಸಿ, ಭಾಂಡೆಯಲ್ಲಿ ಸಟ್ಟುಗವನ್ನು ಅಟ್ಟು, ಕೋಣಮಗಿಯಲ್ಲಿ ಆರಹಾಕಿದಳು. ತಾಬಾಣದಲ್ಲಿ ಅಷ್ಟಷ್ಟು ತೆಗೆದುಕೊಂಡು ತಿಂದರಾಯಿತೆಂದು. ತಾಬಾಣ ತೆಗೆದುಕೊಳ್ಳುವಷ್ಟರಲ್ಲಿ ಗುಡಿಯಿಂದ ಗಂಡ ಬಂದು. ಬಾಗಿಲು ತೆಗೆಯೆಂದು ಕೂಗಿದನು. ಹೆಂಡತಿ ಲಗುಬಗೆಯಿಂದ ಅದೆಲ್ಲವನ್ನೂ ಮುಚ್ಚಿಟ್ಟು ದಡದಡನೆ ಬಾಗಿಲಿಗೆ ಬಂದು ಕದ ತೆರೆದಳು.

“ಗುಡಿಯಿಂದ ತೀವ್ರವೇ ಬಂದುಬಿಟ್ಟೆಯಲ್ಲ ! ಏಕೆ ?” ಎಂದು ಕೇಳಿದನು ಗಂಡ.

ನನಗೇನು ತಿಳಿಯುವದೇ – ಹೊಳೆಯುವದೇ ? ಆದ್ದರಿಂದ ಬೇಸರವೆನಿಸಿತು. ಓಡಿ ಮನೆಗೆ ಬಂದೆ.”

“ಒಳ್ಳೆಯದೇ ಆಯಿತು. ಮಲಗಿಕೊಂಡುಬಿಡೋಣ ಹಾಗಾದರೆ” ಎಂದು ಗಂಡನು ಮಲಗುವದಕ್ಕೆ ಅಣಿಯಾದನು.

“ಅನಕಾ ಒಂದು ಕಥೇಯನ್ನಾದರೂ ಹೇಳಿರಿ” ಎಂದಳು ಹೆಂಡತಿ.

“ನಿದ್ದೆಯ ಹೊತ್ತಿನಲ್ಲಿ ಕಥೆ ಕೇಳಬೇಕನ್ನುವಳಲ್ಲ” ಎಂದು, ಬೇಸರದಿಂದ ಎಂಥದೋ ಕತೆಯನ್ನು ಹೇಳಲು ಆರಂಭಿಸಿದನು ಗಂಡ.

“ಕತ್ತಲದಾಗ ಕಡೋಡಿ, ಕೊಣಮಗ್ಯಾಗ ತೊಡೋಡಿ, ಸುಮ್ಮನೆ ಮನಗ ಬಿದ್ದೋಡಿ” ಎಂದು ಚೇಷ್ಟೆಯಿಂದಾಡಿದ ಲಲ್ಲೆಯನ್ನು ಕೇಳಿ ಹೆಂಡತಿ ಕಕ್ಕಾ ವಿಕ್ಕಿಯಾದಳು. “ಇವನಿಗೆ ಗೊತ್ತಾಗದಂತೆ ಮಾಡಿದ್ದೆಲ್ಲ ತಿಳಿದೇ ಬಿಟ್ಟಿದೆಯಲ್ಲ” ಎನ್ನುತ್ತ ತಾನು ಮಾಡಿದ್ದನ್ನೆಲ್ಲ ವಿವರಿಸಿದಳು-

“ಸುಳ್ಳೇಕೆ ಹೇಳಲಿ ? ಭಜನೆ ಕೇಳಬೇಕೆಂದರೆ ಹಸಿವೆ ಮನೆಯತ್ತ ಎಳೆದುತಂದು ಸಜ್ಜಿಗೆ ಮಾಡಿಸಿತು. ನೀವು ಬರುವಷ್ಟರಲ್ಲಿ ತಿಂದುಮುಗಿಸಿ, ಉಪವಾಸ ಮಾಡಿದವರಂತೆಯೇ ಮಲಗಿಬಿಟ್ಟು, ನೀವು ಬಂದಾಗ ಬಾಗಿಲು ತೆರೆಯಬೇಕೆಂದು ಯೋಚಿಸಿದ್ದೆ. ಆದರೆ ನಾನು ತಾಬಾಣ ಸಾವರಿಸುವಷ್ಟರಲ್ಲಿ ನೀವು ಬಂದೇ ಬಿಟ್ಟಿದ್ದರಿಂದ, ಮಾಡಿದ್ದನ್ನೆಲ್ಲ ಮುಚ್ಚಿಟ್ಟು ಓಡಿಬಂದು ಬಾಗಿಲು ತೆರೆದೆ, ನನ್ನದೇನಿದೆ ತಪ್ಪು ? ಹಸಿವೆ ತಾಳದೆ ಹೀಗೆ ಮಾಡಿದೆ. ನಿಮಗೆಲ್ಲ ತಿಳಿದೇ ಬಿಟ್ಟಿದೆಯಲ್ಲ ? ಹೊಟ್ಟೆಯಲ್ಲಿ ಹಾಕಿಕೊಳ್ಳಿರಿ” ಎಂದು ವಿನಯದಿಂದ ಕೇಳಿಕೊಂಡಳು.

ಗಂಡನು, ಅಂದು ರಾತ್ರಿ ಹೆಂಡತಿಯು ಮಾಡಿದ ಅಚಾತುರ್ಯವನ್ನೂ, ಮರುದಿನ ಬೆಳಗಾದ ಬಳಿಕ ಆಕೆ ಮಾಡಿದ ಸಜ್ಜಗೆಯನ್ನೂ ಆಕೆಯ ವಿನಂತಿಯನ್ನು ಮನ್ನಿಸಿ ಹೊಟ್ಟೆಯಲ್ಲಿ ಹಾಕಿಕೊಂಡನು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...