Home / ಕಥೆ / ಜನಪದ / ಶಿವರಾತ್ರಿ – ಪಾರಣೆ

ಶಿವರಾತ್ರಿ – ಪಾರಣೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಗಂಡನು ಶಿವರಾತ್ರಿಯ ದಿನ ಉಪವಾಸ ಮಾಡುವನೆಂದು ತಿಳಿದು ಹೆಂಡತಿ ತಾನೂ ಉಪವಾಸ ಮಾಡುವುದನ್ನು ನಿರ್ಧರಿಸಿದಳು. ಉಪವಾಸವೆಂದರೂ ಹಳ್ಳಿಯಲ್ಲಿ ಗೆಣಸು, ಬಾಳೆಹಣ್ಣು, ಕಜ್ಜೂರಿ, ಸೇಂಗಾ ತಿನ್ನುವುದು ವಾಡಿಕೆಯಾಗಿದೆ. ಆ ಪ್ರಕಾರ ಗಂಡ ಹೆಂಡಿರು ಸಾಯಂಕಾಲದಲ್ಲಿ ಫಲಾಹಾರ ಮಾಡಿದರು. ಮರುದಿನ ಹೊತ್ತು ಹೊರಡುವ ವೇಳೆಗೆ ಪಾರಣೆ. ಅದಕ್ಕಾಗಿ ಹಿಟ್ಟು, ಬೇಳೆ, ಬೆಲ್ಲ, ಅಕ್ಕಿಗಳನ್ನು ಸಾವರಿಸಿಟ್ಟಳು.

ಶಿವರಾತ್ರಿಯದಿನ ಇಡಿಯರಾತ್ರಿ ಮಹಾದೇವನ ಗುಡಿಯಲ್ಲಿ ನಡೆಯುವ ಭಜನೆಯಲ್ಲಿ ಭಾಗವಹಿಸಿಲು ಗಂಡನು ಹೊರಟನು “ನೀನೂ ಗುಡಿಗೆ ಬಂದುಬಿಡು ನನ್ನೊಡನೆ. ಭಜನೆ ಕೇಳುವಿಯಂತೆ. ಸಾಕಷ್ಟು ಹೆಣ್ಣು ಮಕ್ಕಳು ಬಂದಿರುತ್ತಾರೆ” ಎಂದು ಹೆಂಡತಿಗೆ ಹೇಳಲು, ಆಕೆ ಗಂಡನ ಬಿಡೆಯಕ್ಕಾಗಿ ಗುಡಿಗೆ ಹೋದಳು.

ಭಜನೆ ಆರಂಭವಾಗಿ ಒಳ್ಳೆಯ ಭರಕ್ಕೆ ಬರತೊಡಗಿತ್ತು. ಅಂಥ ಪ್ರಸಂಗದಲ್ಲಿ ಆಕೆಯ ಮನಸ್ಸು ಮನೆಯತ್ತ ಎಳೆಯತೊಡಗಿತು. ಬೇಕಾದಷ್ಟು ಫಲಾಹಾರ ಮಾಡಿದ್ದರೂ ಆಕೆಗೆ ಉಂಡಷ್ಟು ತೃಪ್ತಿಯಾಗಿರಲಿಲ್ಲ. ಹಸಿವೆಯೆನಿಸಹತ್ತಿದ್ದರಿಂದ ಮನೆಗೆ ಹೋಗಿ, ಏನಾದರೂ ಮಾಡಿಕೊಂಡು ತಿಂದು ಮಲಗಬೇಕೆಂದು ಯೋಚಿಸಿದಳು. “ಗಂಡನಂತೂ ಭಜನೆಯಲ್ಲಿ ಭಾಗಿಯಾಗಿದ್ದರಿಂದ ಅಡ್ಡಹೊತ್ತಿನಲ್ಲಿ ಮನೆಗೆ ಬರುವಂತಿಲ್ಲ. ಆದ್ದರಿಂದ ನನ್ನ ಉದ್ದೇಶವು ನಿರ್ಬಾಧವಾಗಿ ನೆರವೇರುತ್ತದೆ” – ಎಂದು ಎದ್ದು ಮನೆಯ ಹಾದಿ ಹಿಡಿದಳು. ಮನೆಗೆ ಬಂದವಳೇ ಒಲೆಹೊತ್ತಿಸಿ, ಭಾಂಡೆಯಲ್ಲಿ ಸಟ್ಟುಗವನ್ನು ಅಟ್ಟು, ಕೋಣಮಗಿಯಲ್ಲಿ ಆರಹಾಕಿದಳು. ತಾಬಾಣದಲ್ಲಿ ಅಷ್ಟಷ್ಟು ತೆಗೆದುಕೊಂಡು ತಿಂದರಾಯಿತೆಂದು. ತಾಬಾಣ ತೆಗೆದುಕೊಳ್ಳುವಷ್ಟರಲ್ಲಿ ಗುಡಿಯಿಂದ ಗಂಡ ಬಂದು. ಬಾಗಿಲು ತೆಗೆಯೆಂದು ಕೂಗಿದನು. ಹೆಂಡತಿ ಲಗುಬಗೆಯಿಂದ ಅದೆಲ್ಲವನ್ನೂ ಮುಚ್ಚಿಟ್ಟು ದಡದಡನೆ ಬಾಗಿಲಿಗೆ ಬಂದು ಕದ ತೆರೆದಳು.

“ಗುಡಿಯಿಂದ ತೀವ್ರವೇ ಬಂದುಬಿಟ್ಟೆಯಲ್ಲ ! ಏಕೆ ?” ಎಂದು ಕೇಳಿದನು ಗಂಡ.

ನನಗೇನು ತಿಳಿಯುವದೇ – ಹೊಳೆಯುವದೇ ? ಆದ್ದರಿಂದ ಬೇಸರವೆನಿಸಿತು. ಓಡಿ ಮನೆಗೆ ಬಂದೆ.”

“ಒಳ್ಳೆಯದೇ ಆಯಿತು. ಮಲಗಿಕೊಂಡುಬಿಡೋಣ ಹಾಗಾದರೆ” ಎಂದು ಗಂಡನು ಮಲಗುವದಕ್ಕೆ ಅಣಿಯಾದನು.

“ಅನಕಾ ಒಂದು ಕಥೇಯನ್ನಾದರೂ ಹೇಳಿರಿ” ಎಂದಳು ಹೆಂಡತಿ.

“ನಿದ್ದೆಯ ಹೊತ್ತಿನಲ್ಲಿ ಕಥೆ ಕೇಳಬೇಕನ್ನುವಳಲ್ಲ” ಎಂದು, ಬೇಸರದಿಂದ ಎಂಥದೋ ಕತೆಯನ್ನು ಹೇಳಲು ಆರಂಭಿಸಿದನು ಗಂಡ.

“ಕತ್ತಲದಾಗ ಕಡೋಡಿ, ಕೊಣಮಗ್ಯಾಗ ತೊಡೋಡಿ, ಸುಮ್ಮನೆ ಮನಗ ಬಿದ್ದೋಡಿ” ಎಂದು ಚೇಷ್ಟೆಯಿಂದಾಡಿದ ಲಲ್ಲೆಯನ್ನು ಕೇಳಿ ಹೆಂಡತಿ ಕಕ್ಕಾ ವಿಕ್ಕಿಯಾದಳು. “ಇವನಿಗೆ ಗೊತ್ತಾಗದಂತೆ ಮಾಡಿದ್ದೆಲ್ಲ ತಿಳಿದೇ ಬಿಟ್ಟಿದೆಯಲ್ಲ” ಎನ್ನುತ್ತ ತಾನು ಮಾಡಿದ್ದನ್ನೆಲ್ಲ ವಿವರಿಸಿದಳು-

“ಸುಳ್ಳೇಕೆ ಹೇಳಲಿ ? ಭಜನೆ ಕೇಳಬೇಕೆಂದರೆ ಹಸಿವೆ ಮನೆಯತ್ತ ಎಳೆದುತಂದು ಸಜ್ಜಿಗೆ ಮಾಡಿಸಿತು. ನೀವು ಬರುವಷ್ಟರಲ್ಲಿ ತಿಂದುಮುಗಿಸಿ, ಉಪವಾಸ ಮಾಡಿದವರಂತೆಯೇ ಮಲಗಿಬಿಟ್ಟು, ನೀವು ಬಂದಾಗ ಬಾಗಿಲು ತೆರೆಯಬೇಕೆಂದು ಯೋಚಿಸಿದ್ದೆ. ಆದರೆ ನಾನು ತಾಬಾಣ ಸಾವರಿಸುವಷ್ಟರಲ್ಲಿ ನೀವು ಬಂದೇ ಬಿಟ್ಟಿದ್ದರಿಂದ, ಮಾಡಿದ್ದನ್ನೆಲ್ಲ ಮುಚ್ಚಿಟ್ಟು ಓಡಿಬಂದು ಬಾಗಿಲು ತೆರೆದೆ, ನನ್ನದೇನಿದೆ ತಪ್ಪು ? ಹಸಿವೆ ತಾಳದೆ ಹೀಗೆ ಮಾಡಿದೆ. ನಿಮಗೆಲ್ಲ ತಿಳಿದೇ ಬಿಟ್ಟಿದೆಯಲ್ಲ ? ಹೊಟ್ಟೆಯಲ್ಲಿ ಹಾಕಿಕೊಳ್ಳಿರಿ” ಎಂದು ವಿನಯದಿಂದ ಕೇಳಿಕೊಂಡಳು.

ಗಂಡನು, ಅಂದು ರಾತ್ರಿ ಹೆಂಡತಿಯು ಮಾಡಿದ ಅಚಾತುರ್ಯವನ್ನೂ, ಮರುದಿನ ಬೆಳಗಾದ ಬಳಿಕ ಆಕೆ ಮಾಡಿದ ಸಜ್ಜಗೆಯನ್ನೂ ಆಕೆಯ ವಿನಂತಿಯನ್ನು ಮನ್ನಿಸಿ ಹೊಟ್ಟೆಯಲ್ಲಿ ಹಾಕಿಕೊಂಡನು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...