ಎಂಥಾ ಮೋಜಿನ ಕುದರಿ

ಎಂಥಾ ಮೋಜಿನ ಕುದರಿ
ಹತ್ತಿದ ಮ್ಯಾಲ ತಿರುಗುವದು ಹನ್ನೊಂದು ಫೇರಿ ||ಪ||

ಸಾರಿ ನಾನು ಹೇಳತೀನಿ ಸಟಿಯಲ್ಲ ಈ ಮಾತು
ಸತ್ಯಸದ್ಗುರುವಿನ ಪಾದ ಗಟ್ಟ್ಯಾಗಿ ಮುಟ್ಟಿಸಿತು ||ಅ.ಪ||

ಹಚ್ಚನ್ನ ಕಡ್ಡವ ಹಾಕಲಿಬೇಕೋ
ನಿಚ್ಚಳ ನೀರ ಕುಡಿಸಲಿಬೇಕೋ
ಸಂಸ್ಕಾರ ಹಿಡಿದು ಹೊಡಿಯಲಿಬೇಕೋ
ಅಚ್ಯುತ ಮೆಚ್ಚುವಂತೆ ಮೈ ತಿಕ್ಕಲಿಬೇಕೋ ||೧||

ತಪ್ಪುವದಿಲ್ಲಪ್ಪಾ ಎರಡು ಹೊತ್ತು ದಾಣಿ
ತಿಂದ ಮೇಲ ತಿರುಗತೈತಿ ಮೇಗಲ ಓಣಿ
ಖಾದರಲಿಂಗನು ಪಾಡಿದವಾಣಿ
ಸೋಸಿನೋಡಿಕೋ ಹಾಕಿದ ಗೋಣಿ ||೨||
ಪಾಂಡವರ ಮನಿಯೊಳಗ ಪಾಗಾದಾಗಿತ್ತು
ಪಾಗಾದ ಗೂಟವ ಕಿತ್ತು ಓಡಿ
ಹೋಗುವಾಗ ಶಿಶುನಾಳಿಗೆ ಬಂತು
ಗೋವಿಂದ ನೋಡಿದ ತಾನೇ ತಾನಾತು ||೩||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಡಿಯಬಾರದೇ ಲುಟುಲುಟು
Next post ವಸುಧೇಂದ್ರ ಸಾಹಿತ್ಯ

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…