Home / ಕಥೆ / ಜನಪದ / ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ ದುಂಡಮೈಯವಳೇ ಆಗಿದ್ದಳು. ಅಂಥ ಇಜ್ಜೋಡಿನ ಸಂಸಾರವೂ ಸಾಗಿಯೇ ಬಂದಿತ್ತು. ಆದರೆ ಹಲವು ಸಾರೆ ಅವರಲ್ಲಿ ವಿರಸಪ್ರಸಂಗಗಳು ಬರುತ್ತಲೆ ಅವರಲ್ಲಿ ಬಾಯಿಗೆ ಬಾಯಿ, ಕೈಗೆಕೈ ಹತ್ತಿ ಕದನಗಳಾಗುತ್ತಿದ್ದವು. ಆದರೆ ಗಂಡಹೆಂಡಿರ ಜಗಳ ಉಂಡು ಮಲಗುವವರೆಗಷ್ಟೇ ಅಲ್ಲವೇ ?

ಬಾಯಿಗೆ ಬಾಯಿ ಹತ್ತಿ ಜಗಳಾಡಿದ್ದು ಸಾಕಾಗದೆ, ನನ್ನೀಸಾಹೇಬನು ಸಿಟ್ಟಿನ ಭರದಲ್ಲಿ ಹೆಂಡತಿಯನ್ನು ಒಳಿತಾಗಿ ಥಳಿಸಬೇಕೆಂದು, ಒಂದು ಬಡಿಗೆಯತ್ತಿ ಆಕೆಯ ಮೈಮುಟ್ಟಹೋಗಿ ಹೊಡೆಯಲನುವಾದನು. ಅಷ್ಣರಲ್ಲಿ ಹೆಂಡತಿ ಆತನನ್ನು ಎದುರಿಸಿ ಆತನ ಕೈಯೊಳಗಿನ ಬಡಿಗೆಯನ್ನು ನಿರಾಯಾಸವಾಗಿ ಕಸಿದುಕೊಂಡು ಜಂತಿಯಲ್ಲಿ ತುರುಕಿಬಿಡುವಳು. ಅದು ಕುಳ್ಳನಾದ ನನ್ನೀ ಸಾಹೇಬನಿಗೆ ನಿಲುಕದಂತಾಗುವದು. ಆ ಕಾರಣದಿಂದ ಅವರ ಜಗಳವು ಮೊಂಡವಾಗಿಬಿಡುವದು.

ಒಮ್ಮೊಮ್ಮೆ ಬಡೇಮಾನಿಗೆ ಸಿಟ್ಟು ಬಂದಾಗ ಆಕೆ ಬಾಗಿಲಿಕ್ಕಿ ಗಂಡನನ್ನು ಅದೇ ಬಡಿಗೆಯಿಂದ ಬಡಿಯುವಳು. ಹೆಂಡತಿ ಬಡೆಯುವಳೆಂದರೂ ಗಂಡನ ಬಾಯ ಅಬ್ಬರವೇ ಹೆಚ್ಚು. ಅದನ್ನು ಕೇಳಿದವರಿಗೆ ಅನಿಸುವುದು – “ಗಂಡನೇ ಬಾಗಿಲು ಹಾಕಿ ಹೆಂಡತಿಯನ್ನು ಜಿಗಿಜಿಗಿದು ಬಡಿಯುತ್ತಿದ್ದಾನೆ. ಅಂತೆಯೇ ದನಿ ತೇಕುತ್ತದೆ.”

ಹೆಂಡತಿ ಎಡಗೈಯಿಂದ ಗಂಡನ ರಟ್ಟೆಹಿಡಿದು ಮಗ್ಗುಲಿಗೆ ನಿಲ್ಲಿಸಿ, ಬೆನ್ನ ಮೇಲೆ ಬಡಿಗೆಯೇಟು ಹಾಕುವಳು. ಇನ್ನೇನು ಏಟು ಬೀಳುವುದಿನ್ನು ಎನ್ನುವ ಕ್ಷಣದಲ್ಲಿ – “ಎಷ್ಟಿರಬೇಕು ನಿನ್ನ ಸೊಕ್ಕು” ಎಂದು ಚೀರುವನು. ಅದು ಮುಗಿಯುವಷ್ಟರಲ್ಲಿ ಬಡಿಗೆಯೇಟಿನ ಸಪ್ಪಳ ! ಆಮೇಲೆ – “ನಿನ್ನ ಜೀವ ಉಳಿಸುವದಿಲ್ಲ ಇನ್ನು” ಎಂದು ಗುಡುಗುವನು. ತರುವಾಯ ಇನ್ನೊಂದು ಏಟು. ಅನಂತರ – ನಿನ್ನನ್ನು ಕೊಂದು ಹಾಕಿದರೂ ನನ್ನ ಸಿಟ್ಟು ಇಳಿಯದು” ಎನ್ನುತ್ತ ಬೇರೊಂದು ಏಟು ತಿನ್ನುವನು.

ಬಾಗಿಲು ಹಾಕಿಕೊಂಡಿರುವದರಿಂದ ಅವರ ಬಡಿದಾಟ – ಚೀರಾಟಗಳನ್ನು ಕೇಳಿ, ನೆರೆಹೊರೆಯವರು ನೆರೆಯುತ್ತಿದ್ದರೂ ಅವರನ್ನು ಬಿಡಿಸುವುದು ಯಾರಿಗೂ ಸಾಧ್ಯವಾಗುತ್ತಿರಲಿಲ್ಲ. ತುಸು ಹೊತ್ತು ನಿಂತುಕೊಂಡು – “ನನ್ನೀಸಾಹೇಬನು ಹಿಡಿಯಾಳು ಆಗಿದ್ದರೂ ಅವನಿಗೆ ಸಿಟ್ಟು ಬಂದಾಗ ಯಾರಿಗೂ ಆಟೋಪವಲ್ಲ. ಹೆಂಡತಿಗೆ ಸಾಯುವಂತೆ ಹೊಡೆಯುತ್ತಾನೆ” ಎನ್ನುತ್ತ ಸಾಗಿ ಹೋಗುವರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...