Home / ಕಥೆ / ಜನಪದ / ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ ದುಂಡಮೈಯವಳೇ ಆಗಿದ್ದಳು. ಅಂಥ ಇಜ್ಜೋಡಿನ ಸಂಸಾರವೂ ಸಾಗಿಯೇ ಬಂದಿತ್ತು. ಆದರೆ ಹಲವು ಸಾರೆ ಅವರಲ್ಲಿ ವಿರಸಪ್ರಸಂಗಗಳು ಬರುತ್ತಲೆ ಅವರಲ್ಲಿ ಬಾಯಿಗೆ ಬಾಯಿ, ಕೈಗೆಕೈ ಹತ್ತಿ ಕದನಗಳಾಗುತ್ತಿದ್ದವು. ಆದರೆ ಗಂಡಹೆಂಡಿರ ಜಗಳ ಉಂಡು ಮಲಗುವವರೆಗಷ್ಟೇ ಅಲ್ಲವೇ ?

ಬಾಯಿಗೆ ಬಾಯಿ ಹತ್ತಿ ಜಗಳಾಡಿದ್ದು ಸಾಕಾಗದೆ, ನನ್ನೀಸಾಹೇಬನು ಸಿಟ್ಟಿನ ಭರದಲ್ಲಿ ಹೆಂಡತಿಯನ್ನು ಒಳಿತಾಗಿ ಥಳಿಸಬೇಕೆಂದು, ಒಂದು ಬಡಿಗೆಯತ್ತಿ ಆಕೆಯ ಮೈಮುಟ್ಟಹೋಗಿ ಹೊಡೆಯಲನುವಾದನು. ಅಷ್ಣರಲ್ಲಿ ಹೆಂಡತಿ ಆತನನ್ನು ಎದುರಿಸಿ ಆತನ ಕೈಯೊಳಗಿನ ಬಡಿಗೆಯನ್ನು ನಿರಾಯಾಸವಾಗಿ ಕಸಿದುಕೊಂಡು ಜಂತಿಯಲ್ಲಿ ತುರುಕಿಬಿಡುವಳು. ಅದು ಕುಳ್ಳನಾದ ನನ್ನೀ ಸಾಹೇಬನಿಗೆ ನಿಲುಕದಂತಾಗುವದು. ಆ ಕಾರಣದಿಂದ ಅವರ ಜಗಳವು ಮೊಂಡವಾಗಿಬಿಡುವದು.

ಒಮ್ಮೊಮ್ಮೆ ಬಡೇಮಾನಿಗೆ ಸಿಟ್ಟು ಬಂದಾಗ ಆಕೆ ಬಾಗಿಲಿಕ್ಕಿ ಗಂಡನನ್ನು ಅದೇ ಬಡಿಗೆಯಿಂದ ಬಡಿಯುವಳು. ಹೆಂಡತಿ ಬಡೆಯುವಳೆಂದರೂ ಗಂಡನ ಬಾಯ ಅಬ್ಬರವೇ ಹೆಚ್ಚು. ಅದನ್ನು ಕೇಳಿದವರಿಗೆ ಅನಿಸುವುದು – “ಗಂಡನೇ ಬಾಗಿಲು ಹಾಕಿ ಹೆಂಡತಿಯನ್ನು ಜಿಗಿಜಿಗಿದು ಬಡಿಯುತ್ತಿದ್ದಾನೆ. ಅಂತೆಯೇ ದನಿ ತೇಕುತ್ತದೆ.”

ಹೆಂಡತಿ ಎಡಗೈಯಿಂದ ಗಂಡನ ರಟ್ಟೆಹಿಡಿದು ಮಗ್ಗುಲಿಗೆ ನಿಲ್ಲಿಸಿ, ಬೆನ್ನ ಮೇಲೆ ಬಡಿಗೆಯೇಟು ಹಾಕುವಳು. ಇನ್ನೇನು ಏಟು ಬೀಳುವುದಿನ್ನು ಎನ್ನುವ ಕ್ಷಣದಲ್ಲಿ – “ಎಷ್ಟಿರಬೇಕು ನಿನ್ನ ಸೊಕ್ಕು” ಎಂದು ಚೀರುವನು. ಅದು ಮುಗಿಯುವಷ್ಟರಲ್ಲಿ ಬಡಿಗೆಯೇಟಿನ ಸಪ್ಪಳ ! ಆಮೇಲೆ – “ನಿನ್ನ ಜೀವ ಉಳಿಸುವದಿಲ್ಲ ಇನ್ನು” ಎಂದು ಗುಡುಗುವನು. ತರುವಾಯ ಇನ್ನೊಂದು ಏಟು. ಅನಂತರ – ನಿನ್ನನ್ನು ಕೊಂದು ಹಾಕಿದರೂ ನನ್ನ ಸಿಟ್ಟು ಇಳಿಯದು” ಎನ್ನುತ್ತ ಬೇರೊಂದು ಏಟು ತಿನ್ನುವನು.

ಬಾಗಿಲು ಹಾಕಿಕೊಂಡಿರುವದರಿಂದ ಅವರ ಬಡಿದಾಟ – ಚೀರಾಟಗಳನ್ನು ಕೇಳಿ, ನೆರೆಹೊರೆಯವರು ನೆರೆಯುತ್ತಿದ್ದರೂ ಅವರನ್ನು ಬಿಡಿಸುವುದು ಯಾರಿಗೂ ಸಾಧ್ಯವಾಗುತ್ತಿರಲಿಲ್ಲ. ತುಸು ಹೊತ್ತು ನಿಂತುಕೊಂಡು – “ನನ್ನೀಸಾಹೇಬನು ಹಿಡಿಯಾಳು ಆಗಿದ್ದರೂ ಅವನಿಗೆ ಸಿಟ್ಟು ಬಂದಾಗ ಯಾರಿಗೂ ಆಟೋಪವಲ್ಲ. ಹೆಂಡತಿಗೆ ಸಾಯುವಂತೆ ಹೊಡೆಯುತ್ತಾನೆ” ಎನ್ನುತ್ತ ಸಾಗಿ ಹೋಗುವರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...