Home / ಕಥೆ / ಜನಪದ / ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ ದುಂಡಮೈಯವಳೇ ಆಗಿದ್ದಳು. ಅಂಥ ಇಜ್ಜೋಡಿನ ಸಂಸಾರವೂ ಸಾಗಿಯೇ ಬಂದಿತ್ತು. ಆದರೆ ಹಲವು ಸಾರೆ ಅವರಲ್ಲಿ ವಿರಸಪ್ರಸಂಗಗಳು ಬರುತ್ತಲೆ ಅವರಲ್ಲಿ ಬಾಯಿಗೆ ಬಾಯಿ, ಕೈಗೆಕೈ ಹತ್ತಿ ಕದನಗಳಾಗುತ್ತಿದ್ದವು. ಆದರೆ ಗಂಡಹೆಂಡಿರ ಜಗಳ ಉಂಡು ಮಲಗುವವರೆಗಷ್ಟೇ ಅಲ್ಲವೇ ?

ಬಾಯಿಗೆ ಬಾಯಿ ಹತ್ತಿ ಜಗಳಾಡಿದ್ದು ಸಾಕಾಗದೆ, ನನ್ನೀಸಾಹೇಬನು ಸಿಟ್ಟಿನ ಭರದಲ್ಲಿ ಹೆಂಡತಿಯನ್ನು ಒಳಿತಾಗಿ ಥಳಿಸಬೇಕೆಂದು, ಒಂದು ಬಡಿಗೆಯತ್ತಿ ಆಕೆಯ ಮೈಮುಟ್ಟಹೋಗಿ ಹೊಡೆಯಲನುವಾದನು. ಅಷ್ಣರಲ್ಲಿ ಹೆಂಡತಿ ಆತನನ್ನು ಎದುರಿಸಿ ಆತನ ಕೈಯೊಳಗಿನ ಬಡಿಗೆಯನ್ನು ನಿರಾಯಾಸವಾಗಿ ಕಸಿದುಕೊಂಡು ಜಂತಿಯಲ್ಲಿ ತುರುಕಿಬಿಡುವಳು. ಅದು ಕುಳ್ಳನಾದ ನನ್ನೀ ಸಾಹೇಬನಿಗೆ ನಿಲುಕದಂತಾಗುವದು. ಆ ಕಾರಣದಿಂದ ಅವರ ಜಗಳವು ಮೊಂಡವಾಗಿಬಿಡುವದು.

ಒಮ್ಮೊಮ್ಮೆ ಬಡೇಮಾನಿಗೆ ಸಿಟ್ಟು ಬಂದಾಗ ಆಕೆ ಬಾಗಿಲಿಕ್ಕಿ ಗಂಡನನ್ನು ಅದೇ ಬಡಿಗೆಯಿಂದ ಬಡಿಯುವಳು. ಹೆಂಡತಿ ಬಡೆಯುವಳೆಂದರೂ ಗಂಡನ ಬಾಯ ಅಬ್ಬರವೇ ಹೆಚ್ಚು. ಅದನ್ನು ಕೇಳಿದವರಿಗೆ ಅನಿಸುವುದು – “ಗಂಡನೇ ಬಾಗಿಲು ಹಾಕಿ ಹೆಂಡತಿಯನ್ನು ಜಿಗಿಜಿಗಿದು ಬಡಿಯುತ್ತಿದ್ದಾನೆ. ಅಂತೆಯೇ ದನಿ ತೇಕುತ್ತದೆ.”

ಹೆಂಡತಿ ಎಡಗೈಯಿಂದ ಗಂಡನ ರಟ್ಟೆಹಿಡಿದು ಮಗ್ಗುಲಿಗೆ ನಿಲ್ಲಿಸಿ, ಬೆನ್ನ ಮೇಲೆ ಬಡಿಗೆಯೇಟು ಹಾಕುವಳು. ಇನ್ನೇನು ಏಟು ಬೀಳುವುದಿನ್ನು ಎನ್ನುವ ಕ್ಷಣದಲ್ಲಿ – “ಎಷ್ಟಿರಬೇಕು ನಿನ್ನ ಸೊಕ್ಕು” ಎಂದು ಚೀರುವನು. ಅದು ಮುಗಿಯುವಷ್ಟರಲ್ಲಿ ಬಡಿಗೆಯೇಟಿನ ಸಪ್ಪಳ ! ಆಮೇಲೆ – “ನಿನ್ನ ಜೀವ ಉಳಿಸುವದಿಲ್ಲ ಇನ್ನು” ಎಂದು ಗುಡುಗುವನು. ತರುವಾಯ ಇನ್ನೊಂದು ಏಟು. ಅನಂತರ – ನಿನ್ನನ್ನು ಕೊಂದು ಹಾಕಿದರೂ ನನ್ನ ಸಿಟ್ಟು ಇಳಿಯದು” ಎನ್ನುತ್ತ ಬೇರೊಂದು ಏಟು ತಿನ್ನುವನು.

ಬಾಗಿಲು ಹಾಕಿಕೊಂಡಿರುವದರಿಂದ ಅವರ ಬಡಿದಾಟ – ಚೀರಾಟಗಳನ್ನು ಕೇಳಿ, ನೆರೆಹೊರೆಯವರು ನೆರೆಯುತ್ತಿದ್ದರೂ ಅವರನ್ನು ಬಿಡಿಸುವುದು ಯಾರಿಗೂ ಸಾಧ್ಯವಾಗುತ್ತಿರಲಿಲ್ಲ. ತುಸು ಹೊತ್ತು ನಿಂತುಕೊಂಡು – “ನನ್ನೀಸಾಹೇಬನು ಹಿಡಿಯಾಳು ಆಗಿದ್ದರೂ ಅವನಿಗೆ ಸಿಟ್ಟು ಬಂದಾಗ ಯಾರಿಗೂ ಆಟೋಪವಲ್ಲ. ಹೆಂಡತಿಗೆ ಸಾಯುವಂತೆ ಹೊಡೆಯುತ್ತಾನೆ” ಎನ್ನುತ್ತ ಸಾಗಿ ಹೋಗುವರು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...