ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ ದುಂಡಮೈಯವಳೇ ಆಗಿದ್ದಳು. ಅಂಥ ಇಜ್ಜೋಡಿನ ಸಂಸಾರವೂ ಸಾಗಿಯೇ ಬಂದಿತ್ತು. ಆದರೆ ಹಲವು ಸಾರೆ ಅವರಲ್ಲಿ ವಿರಸಪ್ರಸಂಗಗಳು ಬರುತ್ತಲೆ ಅವರಲ್ಲಿ ಬಾಯಿಗೆ ಬಾಯಿ, ಕೈಗೆಕೈ ಹತ್ತಿ ಕದನಗಳಾಗುತ್ತಿದ್ದವು. ಆದರೆ ಗಂಡಹೆಂಡಿರ ಜಗಳ ಉಂಡು ಮಲಗುವವರೆಗಷ್ಟೇ ಅಲ್ಲವೇ ?

ಬಾಯಿಗೆ ಬಾಯಿ ಹತ್ತಿ ಜಗಳಾಡಿದ್ದು ಸಾಕಾಗದೆ, ನನ್ನೀಸಾಹೇಬನು ಸಿಟ್ಟಿನ ಭರದಲ್ಲಿ ಹೆಂಡತಿಯನ್ನು ಒಳಿತಾಗಿ ಥಳಿಸಬೇಕೆಂದು, ಒಂದು ಬಡಿಗೆಯತ್ತಿ ಆಕೆಯ ಮೈಮುಟ್ಟಹೋಗಿ ಹೊಡೆಯಲನುವಾದನು. ಅಷ್ಣರಲ್ಲಿ ಹೆಂಡತಿ ಆತನನ್ನು ಎದುರಿಸಿ ಆತನ ಕೈಯೊಳಗಿನ ಬಡಿಗೆಯನ್ನು ನಿರಾಯಾಸವಾಗಿ ಕಸಿದುಕೊಂಡು ಜಂತಿಯಲ್ಲಿ ತುರುಕಿಬಿಡುವಳು. ಅದು ಕುಳ್ಳನಾದ ನನ್ನೀ ಸಾಹೇಬನಿಗೆ ನಿಲುಕದಂತಾಗುವದು. ಆ ಕಾರಣದಿಂದ ಅವರ ಜಗಳವು ಮೊಂಡವಾಗಿಬಿಡುವದು.

ಒಮ್ಮೊಮ್ಮೆ ಬಡೇಮಾನಿಗೆ ಸಿಟ್ಟು ಬಂದಾಗ ಆಕೆ ಬಾಗಿಲಿಕ್ಕಿ ಗಂಡನನ್ನು ಅದೇ ಬಡಿಗೆಯಿಂದ ಬಡಿಯುವಳು. ಹೆಂಡತಿ ಬಡೆಯುವಳೆಂದರೂ ಗಂಡನ ಬಾಯ ಅಬ್ಬರವೇ ಹೆಚ್ಚು. ಅದನ್ನು ಕೇಳಿದವರಿಗೆ ಅನಿಸುವುದು – “ಗಂಡನೇ ಬಾಗಿಲು ಹಾಕಿ ಹೆಂಡತಿಯನ್ನು ಜಿಗಿಜಿಗಿದು ಬಡಿಯುತ್ತಿದ್ದಾನೆ. ಅಂತೆಯೇ ದನಿ ತೇಕುತ್ತದೆ.”

ಹೆಂಡತಿ ಎಡಗೈಯಿಂದ ಗಂಡನ ರಟ್ಟೆಹಿಡಿದು ಮಗ್ಗುಲಿಗೆ ನಿಲ್ಲಿಸಿ, ಬೆನ್ನ ಮೇಲೆ ಬಡಿಗೆಯೇಟು ಹಾಕುವಳು. ಇನ್ನೇನು ಏಟು ಬೀಳುವುದಿನ್ನು ಎನ್ನುವ ಕ್ಷಣದಲ್ಲಿ – “ಎಷ್ಟಿರಬೇಕು ನಿನ್ನ ಸೊಕ್ಕು” ಎಂದು ಚೀರುವನು. ಅದು ಮುಗಿಯುವಷ್ಟರಲ್ಲಿ ಬಡಿಗೆಯೇಟಿನ ಸಪ್ಪಳ ! ಆಮೇಲೆ – “ನಿನ್ನ ಜೀವ ಉಳಿಸುವದಿಲ್ಲ ಇನ್ನು” ಎಂದು ಗುಡುಗುವನು. ತರುವಾಯ ಇನ್ನೊಂದು ಏಟು. ಅನಂತರ – ನಿನ್ನನ್ನು ಕೊಂದು ಹಾಕಿದರೂ ನನ್ನ ಸಿಟ್ಟು ಇಳಿಯದು” ಎನ್ನುತ್ತ ಬೇರೊಂದು ಏಟು ತಿನ್ನುವನು.

ಬಾಗಿಲು ಹಾಕಿಕೊಂಡಿರುವದರಿಂದ ಅವರ ಬಡಿದಾಟ – ಚೀರಾಟಗಳನ್ನು ಕೇಳಿ, ನೆರೆಹೊರೆಯವರು ನೆರೆಯುತ್ತಿದ್ದರೂ ಅವರನ್ನು ಬಿಡಿಸುವುದು ಯಾರಿಗೂ ಸಾಧ್ಯವಾಗುತ್ತಿರಲಿಲ್ಲ. ತುಸು ಹೊತ್ತು ನಿಂತುಕೊಂಡು – “ನನ್ನೀಸಾಹೇಬನು ಹಿಡಿಯಾಳು ಆಗಿದ್ದರೂ ಅವನಿಗೆ ಸಿಟ್ಟು ಬಂದಾಗ ಯಾರಿಗೂ ಆಟೋಪವಲ್ಲ. ಹೆಂಡತಿಗೆ ಸಾಯುವಂತೆ ಹೊಡೆಯುತ್ತಾನೆ” ಎನ್ನುತ್ತ ಸಾಗಿ ಹೋಗುವರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೈತ್ರ
Next post ಮಿಂಚುಳ್ಳಿ ಬೆಳಕಿಂಡಿ – ೩೪

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…