ಸದ್ಗುರು ಸಾಕಿದ ಮದ್ದಾನಿ ಬರುತಲಿದೆ

ಸದ್ಗುರು ಸಾಕಿದ ಮದ್ದಾನಿ ಬರುತಲಿದೆ
ಎದ್ದು ಹೋಗಿರಿ ಇದ್ದ ನಿಂದಕರು ||ಪ||

ಬಿದ್ದು ಈ ಭವದೊಳು ಒದ್ದಾಡು ಜನರನ್ನು
ಉದ್ಧಾರ ಮಾಡುತ ಬರುತಲಿದೆ ||೧||

ಆಕಾಶ ನೋಡುತ ವಾಯುವ ನುಂಗುತ
ಝೇಂಕರಿಸುತಲದು ಬರುತಲಿದೆ ||೨||

ಅಷ್ಟಮದಗಳೆಂಬೊ ಕೆಟ್ಟ ನೀಚರನ್ನು
ಸಿಟ್ಟಿಲೆ ಸೀಳುತ ಬರುತಲಿದೆ ||೩||

ಪ್ರಣವ ಸ್ವರೂಪವ ಅನುದಿನ ನೋಡುತ
ಘನಸುಖದಲಿ ಅದು ಬರುತಲಿದೆ ||೪||

ಮನವ ಶಿಶುನಾಳಧೀಶನೊಳು ಮಗ್ನವ ಮಾಡಿ
ಚಿನುಮಯಾತ್ಮಕವಾಗಿ ಬರುತಲಿದೆ ||೫||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಸುಧೇಂದ್ರ ಸಾಹಿತ್ಯ
Next post ನರಿಯ ಸಾಕಿದೆ ನಾನೊಂದು

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…