Home / ಕವನ / ಕವಿತೆ / ಊರಮಂದಿ ದೂರವಾಗೋ ಕಾಲ ಬರುತೈತಿ

ಊರಮಂದಿ ದೂರವಾಗೋ ಕಾಲ ಬರುತೈತಿ

ಊರಗುಬ್ಬಿ ಕಾಣದಾದ್ವಲ್ಲೆಽಽಽ ಯಮ್ಮಾಽಽಽ
ಊರಗುಬ್ಬಿ ಮಾಯವಾದ್ವಲ್ಲೊಽಽಽ ಯಪ್ಪಾಽಽಽ

ಬೆಳಕು ಹರಿದರೆ ಬೆಳಕಿನಂಗೆ ತೂರಿ ಬರುತಿದ್ವಲ್ಲೇಽಽಽ
ಗಾಳಿಯಂಗೇ ಗಾಳಿ ಜೊತೆಗೆ ಹಾರಿ ಬರುತಿದ್ವಲ್ಲೋಽಽಽ

ಪುರ್ರಂತ ರೆಕ್ಕೆ ಬಿಚ್ಚಿ ಸೊರ್ರಂತ ಹಾರುತಿದ್ವಲ್ಲೋಽಽಽ
ಮರದ ತುಂಬಾ ಗಿಲಕಿ ಸದ್ದು ಗಿಲಕುತಿದ್ವಲ್ವೋಽಽಽ

ಅಂಗಳದಾಗ ಅಕ್ಕಿ ಆಯ್ದು ಹಸನು ಮಾಡ್ತಿದ್ವಲ್ಲೇಽಽಽ
ಕಡ್ಡಿ ಕಾಲಿಗೆ ಗೆಜ್ಜೆ ಕಟ್ಟಿ ತಕ ಥೈ ಕುಣಿಯುತಿದ್ವಲ್ಲೋಽಽಽ

ಗುಡಿಸಲಿಗೆ ಗೂಡು ಕಟ್ಟಿ ಜೋಗುಳ ಹಾಡ್ತಿದ್ವಲ್ಲೇಽಽಽ
ಬಾಯಿ ತುಂಬಾ ಬುತ್ತಿ ತಂದು ಉಣ್ಣಾಕಿಡ್ತಿದ್ವಲ್ಲೋಽಽಽ

ಹಠ ಮಾಡಿ ಅಳುವ ಕಂದ ನಿನ್ನ ನೋಡಿ ನಗ್ತಿದ್ದಲ್ಲೇಽಽಽ
ಆಕಾಡೀಕಡೆ ಗೋಣು ತಿರುಗಿಸಿ ನಿನ್ನಂದಾ ನೋಡ್ತಿದ್ವಲ್ಲೋಽಽಽ

ಜ್ವಾಳದೊಲದಾಗ ಬೆಳಸಿ ತಿಂದು ಜೋಕಾಲಿ ಜೀಕತಿದ್ವಲ್ಲೇಽಽಽ
ಮುಚ್ಚಳದಾಗಿನ ನೀರಿನಾಗ ಮುಳುಮುಳುಗಿ ಏಳತಿದ್ವಲ್ಲೋಽಽಽ

ಹಳ್ಳಿ ಮಂದಿಗೂ ಡಿಳ್ಳಿ ರೋಗ ಹೆಂಗ ಬಡದೈತಲ್ಲೇಽಽಽ
ಮಾತಾಡೋ ‘ಮಷಿನು’ ಮಾಯಾ ಮಾಡ್ಯಾವಂತಲ್ಲೋಽಽಽ

ಈ ಹರಕು ಬಾಯಿಗೆ ದೊಡ್ಡರೋಗ ಬಂದು ಸಾಯಬಾರ್ದೇಽಽಽ
ಗುಬ್ಬಿ ಸೆಟೆದಂಗೆ ಸೆಟೆಯೋ ರೋಗ ಅವ್ರುಗು ಬರಬಾರ್ದೆಽಽಽ

ಕಾಗೆ ಗುಬ್ಬಿ ಇಲ್ಲದಾಂಗ ಹೆಂಗೆ ಬದುಕ್ತಾರೋ ಯಮ್ಮಾಽಽಽ
ಎಂಡ್ರು ಮಕ್ಳು ಅಷ್ಟೇ ಅಂದ್ರೆ ಬದುಕು ಯಂಗೋ ಯಪ್ಪಾಽಽಽ

ನೋಡಾನಂದರೆ ಒಂದೂ ಇಲ್ಲಾ ಎಲ್ಲಿ ಹೋಗೀರೇಽಽಽ ಗುಬ್ಬೀಽಽಽ
ಕೇಳಾನಂದರೆ ಸದ್ದೇ ಇಲ್ಲಾ ಎಲ್ಲಿ ಅಡಗೀರೇಽಽಽ ಗುಬ್ಬೀಽಽಽ

ಊರಗುಬ್ಬಿ ಕಾಣದಾದ್ವಲ್ಲೇಽಽಽ ಯಮ್ಮಾಽಽಽ
ಊರಮಂದಿ ದೂರವಾಗೋ ಕಾಲ ಬರ್ತೈತೋಽಽಽ ಯಪ್ಪಾಽಽಽ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...