Home / ಕವನ / ಕವಿತೆ / ಊರಮಂದಿ ದೂರವಾಗೋ ಕಾಲ ಬರುತೈತಿ

ಊರಮಂದಿ ದೂರವಾಗೋ ಕಾಲ ಬರುತೈತಿ

ಊರಗುಬ್ಬಿ ಕಾಣದಾದ್ವಲ್ಲೆಽಽಽ ಯಮ್ಮಾಽಽಽ
ಊರಗುಬ್ಬಿ ಮಾಯವಾದ್ವಲ್ಲೊಽಽಽ ಯಪ್ಪಾಽಽಽ

ಬೆಳಕು ಹರಿದರೆ ಬೆಳಕಿನಂಗೆ ತೂರಿ ಬರುತಿದ್ವಲ್ಲೇಽಽಽ
ಗಾಳಿಯಂಗೇ ಗಾಳಿ ಜೊತೆಗೆ ಹಾರಿ ಬರುತಿದ್ವಲ್ಲೋಽಽಽ

ಪುರ್ರಂತ ರೆಕ್ಕೆ ಬಿಚ್ಚಿ ಸೊರ್ರಂತ ಹಾರುತಿದ್ವಲ್ಲೋಽಽಽ
ಮರದ ತುಂಬಾ ಗಿಲಕಿ ಸದ್ದು ಗಿಲಕುತಿದ್ವಲ್ವೋಽಽಽ

ಅಂಗಳದಾಗ ಅಕ್ಕಿ ಆಯ್ದು ಹಸನು ಮಾಡ್ತಿದ್ವಲ್ಲೇಽಽಽ
ಕಡ್ಡಿ ಕಾಲಿಗೆ ಗೆಜ್ಜೆ ಕಟ್ಟಿ ತಕ ಥೈ ಕುಣಿಯುತಿದ್ವಲ್ಲೋಽಽಽ

ಗುಡಿಸಲಿಗೆ ಗೂಡು ಕಟ್ಟಿ ಜೋಗುಳ ಹಾಡ್ತಿದ್ವಲ್ಲೇಽಽಽ
ಬಾಯಿ ತುಂಬಾ ಬುತ್ತಿ ತಂದು ಉಣ್ಣಾಕಿಡ್ತಿದ್ವಲ್ಲೋಽಽಽ

ಹಠ ಮಾಡಿ ಅಳುವ ಕಂದ ನಿನ್ನ ನೋಡಿ ನಗ್ತಿದ್ದಲ್ಲೇಽಽಽ
ಆಕಾಡೀಕಡೆ ಗೋಣು ತಿರುಗಿಸಿ ನಿನ್ನಂದಾ ನೋಡ್ತಿದ್ವಲ್ಲೋಽಽಽ

ಜ್ವಾಳದೊಲದಾಗ ಬೆಳಸಿ ತಿಂದು ಜೋಕಾಲಿ ಜೀಕತಿದ್ವಲ್ಲೇಽಽಽ
ಮುಚ್ಚಳದಾಗಿನ ನೀರಿನಾಗ ಮುಳುಮುಳುಗಿ ಏಳತಿದ್ವಲ್ಲೋಽಽಽ

ಹಳ್ಳಿ ಮಂದಿಗೂ ಡಿಳ್ಳಿ ರೋಗ ಹೆಂಗ ಬಡದೈತಲ್ಲೇಽಽಽ
ಮಾತಾಡೋ ‘ಮಷಿನು’ ಮಾಯಾ ಮಾಡ್ಯಾವಂತಲ್ಲೋಽಽಽ

ಈ ಹರಕು ಬಾಯಿಗೆ ದೊಡ್ಡರೋಗ ಬಂದು ಸಾಯಬಾರ್ದೇಽಽಽ
ಗುಬ್ಬಿ ಸೆಟೆದಂಗೆ ಸೆಟೆಯೋ ರೋಗ ಅವ್ರುಗು ಬರಬಾರ್ದೆಽಽಽ

ಕಾಗೆ ಗುಬ್ಬಿ ಇಲ್ಲದಾಂಗ ಹೆಂಗೆ ಬದುಕ್ತಾರೋ ಯಮ್ಮಾಽಽಽ
ಎಂಡ್ರು ಮಕ್ಳು ಅಷ್ಟೇ ಅಂದ್ರೆ ಬದುಕು ಯಂಗೋ ಯಪ್ಪಾಽಽಽ

ನೋಡಾನಂದರೆ ಒಂದೂ ಇಲ್ಲಾ ಎಲ್ಲಿ ಹೋಗೀರೇಽಽಽ ಗುಬ್ಬೀಽಽಽ
ಕೇಳಾನಂದರೆ ಸದ್ದೇ ಇಲ್ಲಾ ಎಲ್ಲಿ ಅಡಗೀರೇಽಽಽ ಗುಬ್ಬೀಽಽಽ

ಊರಗುಬ್ಬಿ ಕಾಣದಾದ್ವಲ್ಲೇಽಽಽ ಯಮ್ಮಾಽಽಽ
ಊರಮಂದಿ ದೂರವಾಗೋ ಕಾಲ ಬರ್ತೈತೋಽಽಽ ಯಪ್ಪಾಽಽಽ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...