Home / ಕವನ / ಕವಿತೆ / ಊರಮಂದಿ ದೂರವಾಗೋ ಕಾಲ ಬರುತೈತಿ

ಊರಮಂದಿ ದೂರವಾಗೋ ಕಾಲ ಬರುತೈತಿ

ಊರಗುಬ್ಬಿ ಕಾಣದಾದ್ವಲ್ಲೆಽಽಽ ಯಮ್ಮಾಽಽಽ
ಊರಗುಬ್ಬಿ ಮಾಯವಾದ್ವಲ್ಲೊಽಽಽ ಯಪ್ಪಾಽಽಽ

ಬೆಳಕು ಹರಿದರೆ ಬೆಳಕಿನಂಗೆ ತೂರಿ ಬರುತಿದ್ವಲ್ಲೇಽಽಽ
ಗಾಳಿಯಂಗೇ ಗಾಳಿ ಜೊತೆಗೆ ಹಾರಿ ಬರುತಿದ್ವಲ್ಲೋಽಽಽ

ಪುರ್ರಂತ ರೆಕ್ಕೆ ಬಿಚ್ಚಿ ಸೊರ್ರಂತ ಹಾರುತಿದ್ವಲ್ಲೋಽಽಽ
ಮರದ ತುಂಬಾ ಗಿಲಕಿ ಸದ್ದು ಗಿಲಕುತಿದ್ವಲ್ವೋಽಽಽ

ಅಂಗಳದಾಗ ಅಕ್ಕಿ ಆಯ್ದು ಹಸನು ಮಾಡ್ತಿದ್ವಲ್ಲೇಽಽಽ
ಕಡ್ಡಿ ಕಾಲಿಗೆ ಗೆಜ್ಜೆ ಕಟ್ಟಿ ತಕ ಥೈ ಕುಣಿಯುತಿದ್ವಲ್ಲೋಽಽಽ

ಗುಡಿಸಲಿಗೆ ಗೂಡು ಕಟ್ಟಿ ಜೋಗುಳ ಹಾಡ್ತಿದ್ವಲ್ಲೇಽಽಽ
ಬಾಯಿ ತುಂಬಾ ಬುತ್ತಿ ತಂದು ಉಣ್ಣಾಕಿಡ್ತಿದ್ವಲ್ಲೋಽಽಽ

ಹಠ ಮಾಡಿ ಅಳುವ ಕಂದ ನಿನ್ನ ನೋಡಿ ನಗ್ತಿದ್ದಲ್ಲೇಽಽಽ
ಆಕಾಡೀಕಡೆ ಗೋಣು ತಿರುಗಿಸಿ ನಿನ್ನಂದಾ ನೋಡ್ತಿದ್ವಲ್ಲೋಽಽಽ

ಜ್ವಾಳದೊಲದಾಗ ಬೆಳಸಿ ತಿಂದು ಜೋಕಾಲಿ ಜೀಕತಿದ್ವಲ್ಲೇಽಽಽ
ಮುಚ್ಚಳದಾಗಿನ ನೀರಿನಾಗ ಮುಳುಮುಳುಗಿ ಏಳತಿದ್ವಲ್ಲೋಽಽಽ

ಹಳ್ಳಿ ಮಂದಿಗೂ ಡಿಳ್ಳಿ ರೋಗ ಹೆಂಗ ಬಡದೈತಲ್ಲೇಽಽಽ
ಮಾತಾಡೋ ‘ಮಷಿನು’ ಮಾಯಾ ಮಾಡ್ಯಾವಂತಲ್ಲೋಽಽಽ

ಈ ಹರಕು ಬಾಯಿಗೆ ದೊಡ್ಡರೋಗ ಬಂದು ಸಾಯಬಾರ್ದೇಽಽಽ
ಗುಬ್ಬಿ ಸೆಟೆದಂಗೆ ಸೆಟೆಯೋ ರೋಗ ಅವ್ರುಗು ಬರಬಾರ್ದೆಽಽಽ

ಕಾಗೆ ಗುಬ್ಬಿ ಇಲ್ಲದಾಂಗ ಹೆಂಗೆ ಬದುಕ್ತಾರೋ ಯಮ್ಮಾಽಽಽ
ಎಂಡ್ರು ಮಕ್ಳು ಅಷ್ಟೇ ಅಂದ್ರೆ ಬದುಕು ಯಂಗೋ ಯಪ್ಪಾಽಽಽ

ನೋಡಾನಂದರೆ ಒಂದೂ ಇಲ್ಲಾ ಎಲ್ಲಿ ಹೋಗೀರೇಽಽಽ ಗುಬ್ಬೀಽಽಽ
ಕೇಳಾನಂದರೆ ಸದ್ದೇ ಇಲ್ಲಾ ಎಲ್ಲಿ ಅಡಗೀರೇಽಽಽ ಗುಬ್ಬೀಽಽಽ

ಊರಗುಬ್ಬಿ ಕಾಣದಾದ್ವಲ್ಲೇಽಽಽ ಯಮ್ಮಾಽಽಽ
ಊರಮಂದಿ ದೂರವಾಗೋ ಕಾಲ ಬರ್ತೈತೋಽಽಽ ಯಪ್ಪಾಽಽಽ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...