Home / ಕವನ / ಕವಿತೆ / ಒಡೆದ ಗುಮ್ಮಟದ ತುಂಬಾ

ಒಡೆದ ಗುಮ್ಮಟದ ತುಂಬಾ


ಇರುಳ ಆಕಾಶದ ತುಂಬಾ
ಕಪ್ಪನೆಯ ಮೋಡಗಳು
ಮಳೆ ಸುರಿದಿದೆ ಧಾರಾಕಾರ
ಮೈ ಕೊರೆವ ಚಳಿಯಲ್ಲಿ?!


ಒಂದು ಕಾಲವಿತ್ತು
ಈ ನೆಲದ ಮೂಲೆ ಮೂಲೆಯ
ಮೇಲೆ ಆ ದೇವನ ಪ್ರೀತಿ
ಜಿನುಗಿತ್ತು ಹನಿ ಹನಿ
ಅಮೃತವಾಗಿ

ಆಗಿನ್ನು ಅವನಿಗೆ ಹಸರಿರಲಿಲ್ಲ
ಮಾತು ಬದುಕಾಗಿತ್ತು
ಮೌನ ಬಲವಾಗಿತ್ತು
ಮನಸು ಸ್ಫಟಿಕ ಕನ್ನಡಿಯಾಗಿತ್ತು
ಕಣ್ಮುಚ್ಚಿದರೂ ಚಿತ್ರ ಸ್ಪಷ್ಟವಿತ್ತು
ಒಲವ ಬೆಸುಗೆ ಬಲವಾಗಿತ್ತು


ನಿನ್ನೆ ರಾತ್ರಿ ಕತ್ತಲಾಗಿತ್ತು
ಗುಮ್ಮಟದ ಗರ್ಭಗುಡಿಯೊಳಗೆ
ತಲೆಯೊಡೆದ ‘ರಾಮಾಽಽಽ’
ರಕ್ತ ಕೆಂಪೋ ಕೆಂಪು
ಹೆಜ್ಜೆ ಇಟ್ಟಲ್ಲೆಲ್ಲಾ ಕಾಡುವ
ಕಪ್ಪು ಗುರುತು

ಬೆಳ್ಳಿ ಚುಕ್ಕಿಯ ಬೆಳಕಿಗೂ
ಮುಂಚೆ ಸಿಡಿದ ಸೂರ್ಯ
ಬಿಕ್ಕಿ ಬಿಕ್ಕಿ ಅತ್ತದ್ದು
ಯಾರ ಮಡಿಲಿನಲಿ?


ತಬ್ಬಲಿ ಕಂದನೋರ್ವನ
ಅಳುವ ಕಣ್ಣಹನಿ ಕೇಳಿತು
‘ಇಲ್ಲಿ’ ಹುಟ್ಟದ ನಾನು
ಹುಟ್ಟಿದ್ದರೆ ‘ಅಲ್ಲಿ’…?

ಆದರೇನಂತೆ ಹೆಸರು
‘ಹಿಂದು-ಮುಂದು’
ಅರಿಯದಿದ್ದರೆ ಮನಸು
ಒಂದನೊಂದು?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...