Home / ಕವನ / ಕವಿತೆ / ಹೊಸ ಸೂರ್ಯನುದಯಕೆ

ಹೊಸ ಸೂರ್ಯನುದಯಕೆ

ತುಂಬಿದೊಡಲ ಅಬಲೆ ಮೇಲೆ
ಕಾಮಾಂಧರ ನರ್ತನ
ತಾಯೆ ನಿನ್ನ ಒಡಲ ಮೇಲೆ
ನಿತ್ಯ ರಕ್ತ ತರ್ಪಣ
ಅರಳಲಿಲ್ಲಿ ತಾವು ಎಲ್ಲಿ
ಫಲಪುಷ್ಪದ ನಂದನ?

ಅತ್ತು ಅತ್ತು ಸತ್ತ ಭ್ರೂಣ
ಬಿಕ್ಕಿ ಬಿಕ್ಕಿ ಅತ್ತ ’ಬಾನು’
ಜೀವ ಜೀವದಾರ್ತನಾದ
ಕಾಣಲಿಲ್ಲ ಕುರುಡು ಜನಕೆ
ಕೇಳಲಿಲ್ಲ ಕಿವುಡು ಮನಕೆ

ಖಾಕಿಬೂಟಿನಟ್ಪಹಾಸ
ಖಾದಿ ಖದರ ಜಯದ ಘೋಷ
ಹಾಡುಹಗಲೆ ಮೃತ್ಯುಪಾಶ
ಹೆಣ್ಣೆ ನಿನಗೆ ಜೀವಶಿಕ್ಷೆ
ಹೆಜ್ಜೆ ಹೆಜ್ಜೆಗಿರಲು ಎಲ್ಲಿರಕ್ಷೆ?

ಹಿಂದು ಮುಸ್ಲಿಂ ಹೆಸರಿನಲ್ಲಿ
‘ಬಲ್ಕೀಸ’ಳಾ ಉಸಿರು ಎಲ್ಲಿ
ಅಂಧ ಮತಕೆ ಬಂಧವೆಲ್ಲಿ
ತಂದೆ ತಾಯಿ ಬಂಧುವೆಲ್ಲಿ
ಎಲ್ಲಿ ಎಲ್ಲಿ ಎಲ್ಲೆ ಎಲ್ಲಿ
ಉರಿಯ ಸುರಿವ ಜ್ವಾಲೆಗೆ?

ಪ್ರೇತದಂತೆ ನರ್ತನ
ಭೂತದಂತೆ ಕೀರ್ತನ
ಹೆಣ್ಣ ದಾಹ ಹೊನ್ನ ದಾಹ ಮಣ್ಣ ದಾಹ
ದಾಹ ದಾಹ ದಾಹ ದಾಹ…
ದಾಸನಾಗಿ ಮರೆತೆಯಲ್ಲೋ
ಮನುಜನೆಂಬುದ

ಕಮರಿಹೋಯ್ತೆ ಮೊಗ್ಗೆ ನಿನ್ನ
ಹೂವಾಗುವ ಕನಸು?
ಕಸವಾಯಿತೆ ಕಾಲಡಿಯಲ್ಲಿ
ಕಂದ ನಿನ್ನ ಮನಸು?
ಕಣ್ಣು ತೆಗೆವ ಮುನ್ನ ಕೊಂದರಲ್ಲ ನಿನ್ನ
ಥೂ… ಎಂಥ ಹೊಲಸು

ಅಲ್ಲಿ ’ಬಾನು’ ಇಲ್ಲಿ ನಾನು
ನಿತ್ಯ ನರಕಯಾತನೆ
ಎಲ್ಲೆ ಇರಲಿ ಹೇಗೆ ಇರಲಿ
ತಪ್ಪಲಿಲ್ಲ ಯೋಚನೆ
ಹೆಣ್ಣಿಗಿರುವ ಸ್ವಾತಂತ್ರ್ಯ
ಬರಿಯ ಹುಚ್ಚು ಕಲ್ಪನೆ

ತಾಯಿ ತಂಗಿ ಮಾತೃದೈವ
ಎನುವದೆಲ್ಲ ಬೊಗಳೆ
ಸಂತೈಸಲಿ ಹೇಗೆ ಮಗಳೆ
ಇರಲು ದಿನವೂ ರಗಳೆ?
ನಿನ್ನ ನೋವು ನಿನ್ನ ಸಾವು
ತಿಳಿವುದೆಂತು ತಾಯ್ಗಂಡರ ಎದೆಗೆ?

ನ್ಯಾಯವಿಲ್ಲಿ ಕಣ್ಣು ಕುರುಡು
ಕೂಗಿಗಿಲ್ಲಿ ಕಿವಿಯೆ ಕೊರಡು
ಹೃದಯವದು ಬರಿದೆ ಬರಡು
ಇರುವ ಜನರ ಮಾತಿಗಿಲ್ಲ ಎರಡು
ಎನಿತು ಕಾಲ ನೂಕಬೇಕೋ
ನಾಕ ಬೆಳಗಲು?

ನೋವಿಗಿಲ್ಲ ಜಾತಿ ಧರ್ಮ
ಜೀವಕೇಕೆ ಮತದ ಕರ್ಮ
ಬಸವ ಬುದ್ಧ ಏಸು ಬಿದ್ದ
ರಾಮ ರಹಿಮ ಎಲ್ಲಿ ಗೆದ್ದ?
ಕಡಿ ಬಡಿ ಮಂತ್ರವಾಯ್ತೆ ಭಾರತಾಂಬೆಗೆ?
*
ಕಾಯತಿರುವೆ ಕಣ್ಣು ತೆರೆದು
ಹೊಸ ಸೂರ್ಯನ ಉದಯಕೆ!

(ಬಲ್ಕಿಶ್ ಬಾನು ಹೃದಯ ವಿದ್ರಾವಕ ಸಾವಿನ ನೋವಿನಲಿ)
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...